<p><strong>ತಿರುವನಂತಪುರ:</strong> ಮಗಳ ಕಂಪನಿಯಲ್ಲಿ ಕೆಲಸಮಾಡುತ್ತಿದ್ದ ಯುವತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಲಯಾಳಂ ನಟ ಹಾಗೂ ರಾಜಕಾರಣಿ ಜಿ. ಕೃಷ್ಣಮೂರ್ತಿ ಹಾಗೂ ಅವರ ಮಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಪಹರಣಕ್ಕೊಳಗಾದ ಯುವತಿ ನೀಡಿದ ದೂರಿನ ಆಧಾರದಲ್ಲಿ ಶನಿವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. </p><p>ಯುವತಿಯ ವಿರುದ್ಧ ಕಂಪನಿಯ ಸ್ವತ್ತುಗಳನ್ನು ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಕೃಷ್ಣಮೂರ್ತಿ ಹಾಗೂ ಅವರ ಮಗಳು ಕೂಡ ಪ್ರಕರಣ ದಾಖಲಿಸಿದ್ದಾರೆ. </p><p>ಎರಡು ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ. ಪ್ರಕರಣದ ತನಿಖೆ ಆರಂಭಿಸಿದ್ದು, ಸಾಕ್ಷಿಗಳ ಆಧಾರದಲ್ಲಿ ಮಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿರುವ ಕೃಷ್ಣಮೂರ್ತಿ ‘ನನ್ನ ಮಗಳು ಗರ್ಭಿಣಿಯಾಗಿದ್ದಾಗ ಅವಳಿಗೆ ಕಂಪನಿಯ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅದೇ ಸಂದರ್ಭದಲ್ಲಿ ಮೂವರು ಮಹಿಳಾ ಉದ್ಯೋಗಿಗಳು ಸುಮಾರು ₹69ಲಕ್ಷವನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ಎಂದು ಆರೋಪಿಸಿದ್ದಾರೆ.</p><p>‘ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬರುತ್ತಿದ್ದಂತೆಯೇ, ಪೊಲೀಸರಿಗೆ ದೂರು ಕೊಡುವುದಾಗಿ ತಿಳಿಸಿದಾಗ ಅವರು ತಮ್ಮ ಗಂಡಂದಿರ ಜೊತೆಗೆ ಬಂದು ತಪ್ಪನ್ನು ಒಪ್ಪಿಕೊಂಡಿದ್ದರು. ಪೊಲೀಸ್ ಪ್ರಕರಣ ದಾಖಲಿಸಬೇಡಿ ಎಂದು ತಕ್ಷಣವೇ ₹8ಲಕ್ಷವನ್ನು ಕೊಟ್ಟು, ಬಾಕಿ ಮೊತ್ತವನ್ನು ಶೀಘ್ರದಲ್ಲಿ ಪಾವತಿಸುವುದಾಗಿ ಹೇಳಿದ್ದರು. ಆದರೆ, ಕೆಲವು ದಿನಗಳ ನಂತರ ಅದರಲ್ಲೊಬ್ಬರು ನನ್ನ ಮಗಳಿಗೆ ಕರೆ ಮಾಡಿ ಬೆದರಿಕೆಯಾಕಿದ್ದರು. ಘಟನೆಗೆ ಸಂಬಂಧಿಸಿದಂತೆ ಮೇ 30 ಅಥವಾ 31ರಂದು ಪ್ರಕರಣ ಕೂಡ ದಾಖಲಿಸಲಾಗಿತ್ತು ಎಂದರು. </p><p>ನಾವು ಪ್ರಕರಣ ದಾಖಲಿಸಿದ ಮೇಲೆ ಅವರು ನಮ್ಮ ಕುಟುಂಬದ 6 ಜನರ ವಿರುದ್ದ ನಕಲಿ ಆರೋಪ ಮಾಡಿದ್ದಾರೆ ಎಂದು ಹೇಳಿದರು. </p><p>ಮೂವರು ಉದ್ಯೋಗಿಗಳು ಹಣವನ್ನು ದುರುಪಯೋಗ ಪಡಿಸಿಕೊಂಡ ಕುರಿತು ಹಾಗೂ ಅವರು ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಕುರಿತು ವಿಡಿಯೊ ಸಾಕ್ಷಿಯಿದೆ. ಅದನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಮಗಳ ಕಂಪನಿಯಲ್ಲಿ ಕೆಲಸಮಾಡುತ್ತಿದ್ದ ಯುವತಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಲಯಾಳಂ ನಟ ಹಾಗೂ ರಾಜಕಾರಣಿ ಜಿ. ಕೃಷ್ಣಮೂರ್ತಿ ಹಾಗೂ ಅವರ ಮಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಅಪಹರಣಕ್ಕೊಳಗಾದ ಯುವತಿ ನೀಡಿದ ದೂರಿನ ಆಧಾರದಲ್ಲಿ ಶನಿವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. </p><p>ಯುವತಿಯ ವಿರುದ್ಧ ಕಂಪನಿಯ ಸ್ವತ್ತುಗಳನ್ನು ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಕೃಷ್ಣಮೂರ್ತಿ ಹಾಗೂ ಅವರ ಮಗಳು ಕೂಡ ಪ್ರಕರಣ ದಾಖಲಿಸಿದ್ದಾರೆ. </p><p>ಎರಡು ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ. ಪ್ರಕರಣದ ತನಿಖೆ ಆರಂಭಿಸಿದ್ದು, ಸಾಕ್ಷಿಗಳ ಆಧಾರದಲ್ಲಿ ಮಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿರುವ ಕೃಷ್ಣಮೂರ್ತಿ ‘ನನ್ನ ಮಗಳು ಗರ್ಭಿಣಿಯಾಗಿದ್ದಾಗ ಅವಳಿಗೆ ಕಂಪನಿಯ ಕೆಲಸವನ್ನು ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅದೇ ಸಂದರ್ಭದಲ್ಲಿ ಮೂವರು ಮಹಿಳಾ ಉದ್ಯೋಗಿಗಳು ಸುಮಾರು ₹69ಲಕ್ಷವನ್ನು ದುರುಪಯೋಗಪಡಿಸಿಕೊಂಡಿದ್ದಾರೆ’ಎಂದು ಆರೋಪಿಸಿದ್ದಾರೆ.</p><p>‘ಕಂಪನಿಯ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬರುತ್ತಿದ್ದಂತೆಯೇ, ಪೊಲೀಸರಿಗೆ ದೂರು ಕೊಡುವುದಾಗಿ ತಿಳಿಸಿದಾಗ ಅವರು ತಮ್ಮ ಗಂಡಂದಿರ ಜೊತೆಗೆ ಬಂದು ತಪ್ಪನ್ನು ಒಪ್ಪಿಕೊಂಡಿದ್ದರು. ಪೊಲೀಸ್ ಪ್ರಕರಣ ದಾಖಲಿಸಬೇಡಿ ಎಂದು ತಕ್ಷಣವೇ ₹8ಲಕ್ಷವನ್ನು ಕೊಟ್ಟು, ಬಾಕಿ ಮೊತ್ತವನ್ನು ಶೀಘ್ರದಲ್ಲಿ ಪಾವತಿಸುವುದಾಗಿ ಹೇಳಿದ್ದರು. ಆದರೆ, ಕೆಲವು ದಿನಗಳ ನಂತರ ಅದರಲ್ಲೊಬ್ಬರು ನನ್ನ ಮಗಳಿಗೆ ಕರೆ ಮಾಡಿ ಬೆದರಿಕೆಯಾಕಿದ್ದರು. ಘಟನೆಗೆ ಸಂಬಂಧಿಸಿದಂತೆ ಮೇ 30 ಅಥವಾ 31ರಂದು ಪ್ರಕರಣ ಕೂಡ ದಾಖಲಿಸಲಾಗಿತ್ತು ಎಂದರು. </p><p>ನಾವು ಪ್ರಕರಣ ದಾಖಲಿಸಿದ ಮೇಲೆ ಅವರು ನಮ್ಮ ಕುಟುಂಬದ 6 ಜನರ ವಿರುದ್ದ ನಕಲಿ ಆರೋಪ ಮಾಡಿದ್ದಾರೆ ಎಂದು ಹೇಳಿದರು. </p><p>ಮೂವರು ಉದ್ಯೋಗಿಗಳು ಹಣವನ್ನು ದುರುಪಯೋಗ ಪಡಿಸಿಕೊಂಡ ಕುರಿತು ಹಾಗೂ ಅವರು ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಕುರಿತು ವಿಡಿಯೊ ಸಾಕ್ಷಿಯಿದೆ. ಅದನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>