<p><strong>ತಿರುವನಂತಪುರಂ:</strong> ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಚಾಲಕ್ಕುಡಿಯ ನಾಯರಂಗಡಿಯ ನಿವಾಸಿ ಸಂದೀಪ್ (36) ಉಕ್ರೇನ್ ನಡೆಸಿದ ದಾಳಿಯಲ್ಲಿ ಮೃತಪಟ್ಟಿದ್ದಾರೆ.</p><p>ಅಧಿಕೃತ ಸೂಚನೆಗಾಗಿ ಕಾಯಲಾಗುತ್ತಿದೆ. ರಷ್ಯಾದಲ್ಲಿರುವ ಮಲಯಾಳಿ ಸಂಘಟನೆಗಳು ಈ ಕುರಿತು ಮೃತರ ಕುಟುಂಬಸ್ಥರಿಗೆ ಭಾನುವಾರ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ರಷ್ಯಾದ ಹಲವು ಯೋಧರು ಕೂಡ ಮೃತಪಟ್ಟಿದ್ದಾರೆ. </p><p>ಸ್ಥಳೀಯರ ಪ್ರಕಾರ, ಸಂದೀಪ್ ಹಾಗೂ ಕೆಲವರನ್ನು ಮಾಸ್ಕೊದಲ್ಲಿರುವ ರೆಸ್ಟೋರೆಂಟ್ಗೆ ಉದ್ಯೋಗಕ್ಕಾಗಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ರಷ್ಯಾಕ್ಕೆ ತಲುಪಿದ ನಂತರ ಬಲವಂತದಿಂದ ಸೇನೆಗೆ ಸೇರ್ಪಡೆಗೊಳಿಸಲಾಯಿತು. ಸಂದೀಪ್ ರಷ್ಯಾದ ಪೌರತ್ವ ಕೂಡ ಪಡೆದಿದ್ದರು. </p><p>‘ಘಟನೆ ಕುರಿತಂತೆ ಇದುವರೆಗೂ ಅಧಿಕೃತ ಮಾಹಿತಿ ಬಂದಿಲ್ಲ. ರಷ್ಯಾದ ಭಾರತೀಯ ರಾಯಭಾರ ಕಚೇರಿಯು ‘ಅನೌಪಚಾರಿಕ’ವಾಗಿ ದೃಢಪಡಿಸಿದೆ’ ಎಂದು ಕೇರಳ ಸರ್ಕಾರದ ಅನಿವಾಸಿ ಕೇರಳ ಶ್ರೇಯಾಭಿವೃದ್ಧಿ ಸಂಸ್ಥೆಯ (ಎನ್ಆರ್ಕೆ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕೊಲ್ಲಶ್ಯೇರಿ ತಿಳಿಸಿದ್ದಾರೆ.</p><p>ಉದ್ಯೋಗ ನೀಡುವುದಾಗಿ ನಂಬಿಸಿ ಮಲಯಾಳಿಗಳು ಸೇರಿದಂತೆ ಭಾರತದ ಯುವಕರನ್ನು ಕರೆಸಿಕೊಳ್ಳುವ ಏಜೆಂಟರು ಅಲ್ಲಿಗೆ ತೆರಳಿದ ಬಳಿಕ ಯುವಕರನ್ನು ಬಲವಂತವಾಗಿ ರಷ್ಯಾ ಸೇನೆಗೆ ಸೇರ್ಪಡೆಗೊಳಿಸುತ್ತಿದ್ದಾರೆ. ಕೇರಳದ ಕೆಲವು ಯುವಕರು ಕೆಲವೇ ದಿನಗಳಲ್ಲಿ ಸ್ವದೇಶಕ್ಕೆ ಹಿಂತಿರುಗಿದ್ದು, ಇನ್ನೂ ಕೆಲವರು ಅಲ್ಲಿಯೇ ಉಳಿದಿದ್ದಾರೆ.</p><p>ರಷ್ಯಾ ಸೇನೆಯಲ್ಲಿರುವ ಭಾರತೀಯ ನಾಗರಿಕರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮಾಸ್ಕೊಗೆ ಭೇಟಿ ನೀಡಿದ್ದ ವೇಳೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂದೆ ಪ್ರಸ್ತಾಪಿಸಿದ್ದರು. ಇದಕ್ಕೆ ಅಲ್ಲಿನ ಸರ್ಕಾರವು ಸಮ್ಮತಿ ಸೂಚಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ರಷ್ಯಾದ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಚಾಲಕ್ಕುಡಿಯ ನಾಯರಂಗಡಿಯ ನಿವಾಸಿ ಸಂದೀಪ್ (36) ಉಕ್ರೇನ್ ನಡೆಸಿದ ದಾಳಿಯಲ್ಲಿ ಮೃತಪಟ್ಟಿದ್ದಾರೆ.</p><p>ಅಧಿಕೃತ ಸೂಚನೆಗಾಗಿ ಕಾಯಲಾಗುತ್ತಿದೆ. ರಷ್ಯಾದಲ್ಲಿರುವ ಮಲಯಾಳಿ ಸಂಘಟನೆಗಳು ಈ ಕುರಿತು ಮೃತರ ಕುಟುಂಬಸ್ಥರಿಗೆ ಭಾನುವಾರ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ರಷ್ಯಾದ ಹಲವು ಯೋಧರು ಕೂಡ ಮೃತಪಟ್ಟಿದ್ದಾರೆ. </p><p>ಸ್ಥಳೀಯರ ಪ್ರಕಾರ, ಸಂದೀಪ್ ಹಾಗೂ ಕೆಲವರನ್ನು ಮಾಸ್ಕೊದಲ್ಲಿರುವ ರೆಸ್ಟೋರೆಂಟ್ಗೆ ಉದ್ಯೋಗಕ್ಕಾಗಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ರಷ್ಯಾಕ್ಕೆ ತಲುಪಿದ ನಂತರ ಬಲವಂತದಿಂದ ಸೇನೆಗೆ ಸೇರ್ಪಡೆಗೊಳಿಸಲಾಯಿತು. ಸಂದೀಪ್ ರಷ್ಯಾದ ಪೌರತ್ವ ಕೂಡ ಪಡೆದಿದ್ದರು. </p><p>‘ಘಟನೆ ಕುರಿತಂತೆ ಇದುವರೆಗೂ ಅಧಿಕೃತ ಮಾಹಿತಿ ಬಂದಿಲ್ಲ. ರಷ್ಯಾದ ಭಾರತೀಯ ರಾಯಭಾರ ಕಚೇರಿಯು ‘ಅನೌಪಚಾರಿಕ’ವಾಗಿ ದೃಢಪಡಿಸಿದೆ’ ಎಂದು ಕೇರಳ ಸರ್ಕಾರದ ಅನಿವಾಸಿ ಕೇರಳ ಶ್ರೇಯಾಭಿವೃದ್ಧಿ ಸಂಸ್ಥೆಯ (ಎನ್ಆರ್ಕೆ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕೊಲ್ಲಶ್ಯೇರಿ ತಿಳಿಸಿದ್ದಾರೆ.</p><p>ಉದ್ಯೋಗ ನೀಡುವುದಾಗಿ ನಂಬಿಸಿ ಮಲಯಾಳಿಗಳು ಸೇರಿದಂತೆ ಭಾರತದ ಯುವಕರನ್ನು ಕರೆಸಿಕೊಳ್ಳುವ ಏಜೆಂಟರು ಅಲ್ಲಿಗೆ ತೆರಳಿದ ಬಳಿಕ ಯುವಕರನ್ನು ಬಲವಂತವಾಗಿ ರಷ್ಯಾ ಸೇನೆಗೆ ಸೇರ್ಪಡೆಗೊಳಿಸುತ್ತಿದ್ದಾರೆ. ಕೇರಳದ ಕೆಲವು ಯುವಕರು ಕೆಲವೇ ದಿನಗಳಲ್ಲಿ ಸ್ವದೇಶಕ್ಕೆ ಹಿಂತಿರುಗಿದ್ದು, ಇನ್ನೂ ಕೆಲವರು ಅಲ್ಲಿಯೇ ಉಳಿದಿದ್ದಾರೆ.</p><p>ರಷ್ಯಾ ಸೇನೆಯಲ್ಲಿರುವ ಭಾರತೀಯ ನಾಗರಿಕರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮಾಸ್ಕೊಗೆ ಭೇಟಿ ನೀಡಿದ್ದ ವೇಳೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮುಂದೆ ಪ್ರಸ್ತಾಪಿಸಿದ್ದರು. ಇದಕ್ಕೆ ಅಲ್ಲಿನ ಸರ್ಕಾರವು ಸಮ್ಮತಿ ಸೂಚಿಸಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>