<p><strong>ಕ್ವಾಲಾಲಂಪುರ</strong>: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಭಾರತದಲ್ಲಿರುವ ನಮ್ಮ ನಿಮ್ಮೆಲ್ಲರಂತೆ ತಮಿಳಿನ ದಂತಕಥೆ ಎಂಜಿಆರ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ.</p><p>ಅಲ್ಲದೆ, ತಮಗಾಗಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ತಮಿಳಿನ ‘ನಾಲೈ ನಮತೇ’ ಚಿತ್ರದ ಹಾಡನ್ನು ಉತ್ತಮವಾಗಿ ಹಾಡಿದರು ಎಂದು ಮೋದಿ ತಿಳಿಸಿದ್ದಾರೆ.</p><p>ಎಂಜಿಆರ್ ಎಂದು ಕರೆಯಲ್ಪಡುವ ದಿವಂಗತ ಮರುತೂರ್ ಗೋಪಾಲನ್ ರಾಮಚಂದ್ರನ್ ಅವರು, ತಮಿಳಿನ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ತಮಿಳುನಾಡಿನ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷವನ್ನು ಸ್ಥಾಪಿಸಿದ್ದ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು.. </p><p>1975ರಲ್ಲಿ ಬಿಡುಗಡೆಯಾದ 'ನಾಲೈ ನಮತೇ' ಎಂಜಿಆರ್ ಅವರ ಹಲವು ಬ್ಲಾಕ್ಬಸ್ಟರ್ ಚಿತ್ರಗಳಲ್ಲಿ ಒಂದಾಗಿದೆ. </p><p>‘ನನ್ನ ಸ್ನೇಹಿತ ಪ್ರಧಾನಿ ಅನ್ವರ್ ಇಬ್ರಾಹಿಂ ತಮಗಾಗಿ ಏರ್ಪಡಿಸಿದ್ದ ಭೋಜನದ ಸಮಯದಲ್ಲಿ ಎಂಜಿಆರ್ ನಟಿಸಿದ್ದ ‘ನಾಲೈ ನಮತೇ!’ ಚಿತ್ರದ ಹಾಡನ್ನು ಹಾಡಿದರು ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.</p><p>ಭಾರತದಲ್ಲಿರುವ ನಮ್ಮೆಲ್ಲರಂತೆ ಪ್ರಧಾನಿ ಅನ್ವರ್ ಇಬ್ರಾಹಿಂ ಕೂಡ ಎಂಜಿಆರ್ ಅವರ ದೊಡ್ಡ ಅಭಿಮಾನಿ! ಎಂದು ಮೋದಿ ಹೇಳಿದ್ದಾರೆ.</p><p>ಮಲೇಷ್ಯಾವು ವಿಶ್ವದಲ್ಲೇ ಅತಿಹೆಚ್ಚು ಭಾರತೀಯನ್ನು ಹೊಂದಿರುವ ಎರಡನೇ ದೇಶವಾಗಿದೆ. ಮಲೇಷ್ಯಾದಲ್ಲಿ ತಮಿಳರ ಸಂಖ್ಯೆ ಹೆಚ್ಚಿದೆ.</p><p>ಎರಡು ದಿನಗಳ ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಕ್ವಾಲಾಲಂಪುರದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಮಲೇಷ್ಯಾದಲ್ಲಿರುವ ತಮಿಳು ವಲಸಿಗರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ತಮಿಳು ವಲಸಿಗರು ಹಲವು ಶತಮಾನಗಳಿಂದ ಮಲೇಷ್ಯಾದಲ್ಲಿದ್ದಾರೆ ಎಂದು ಹೇಳಿದರು.</p><p>ಈ ಇತಿಹಾಸದಿಂದ ಪ್ರೇರಿತವಾಗಿ, ಭಾರತವು ಮಲಯ ವಿಶ್ವವಿದ್ಯಾಲಯದಲ್ಲಿ ತಿರುವಳ್ಳುವರ್ ಪೀಠವನ್ನು ಸ್ಥಾಪಿಸಿದೆ. ಪರಂಪರೆಯನ್ನು ಮತ್ತಷ್ಟು ಬಲಪಡಿಸಲು ತಿರುವಳ್ಳುವರ್ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ</strong>: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಭಾರತದಲ್ಲಿರುವ ನಮ್ಮ ನಿಮ್ಮೆಲ್ಲರಂತೆ ತಮಿಳಿನ ದಂತಕಥೆ ಎಂಜಿಆರ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ.</p><p>ಅಲ್ಲದೆ, ತಮಗಾಗಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ ತಮಿಳಿನ ‘ನಾಲೈ ನಮತೇ’ ಚಿತ್ರದ ಹಾಡನ್ನು ಉತ್ತಮವಾಗಿ ಹಾಡಿದರು ಎಂದು ಮೋದಿ ತಿಳಿಸಿದ್ದಾರೆ.</p><p>ಎಂಜಿಆರ್ ಎಂದು ಕರೆಯಲ್ಪಡುವ ದಿವಂಗತ ಮರುತೂರ್ ಗೋಪಾಲನ್ ರಾಮಚಂದ್ರನ್ ಅವರು, ತಮಿಳಿನ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ತಮಿಳುನಾಡಿನ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷವನ್ನು ಸ್ಥಾಪಿಸಿದ್ದ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು.. </p><p>1975ರಲ್ಲಿ ಬಿಡುಗಡೆಯಾದ 'ನಾಲೈ ನಮತೇ' ಎಂಜಿಆರ್ ಅವರ ಹಲವು ಬ್ಲಾಕ್ಬಸ್ಟರ್ ಚಿತ್ರಗಳಲ್ಲಿ ಒಂದಾಗಿದೆ. </p><p>‘ನನ್ನ ಸ್ನೇಹಿತ ಪ್ರಧಾನಿ ಅನ್ವರ್ ಇಬ್ರಾಹಿಂ ತಮಗಾಗಿ ಏರ್ಪಡಿಸಿದ್ದ ಭೋಜನದ ಸಮಯದಲ್ಲಿ ಎಂಜಿಆರ್ ನಟಿಸಿದ್ದ ‘ನಾಲೈ ನಮತೇ!’ ಚಿತ್ರದ ಹಾಡನ್ನು ಹಾಡಿದರು ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.</p><p>ಭಾರತದಲ್ಲಿರುವ ನಮ್ಮೆಲ್ಲರಂತೆ ಪ್ರಧಾನಿ ಅನ್ವರ್ ಇಬ್ರಾಹಿಂ ಕೂಡ ಎಂಜಿಆರ್ ಅವರ ದೊಡ್ಡ ಅಭಿಮಾನಿ! ಎಂದು ಮೋದಿ ಹೇಳಿದ್ದಾರೆ.</p><p>ಮಲೇಷ್ಯಾವು ವಿಶ್ವದಲ್ಲೇ ಅತಿಹೆಚ್ಚು ಭಾರತೀಯನ್ನು ಹೊಂದಿರುವ ಎರಡನೇ ದೇಶವಾಗಿದೆ. ಮಲೇಷ್ಯಾದಲ್ಲಿ ತಮಿಳರ ಸಂಖ್ಯೆ ಹೆಚ್ಚಿದೆ.</p><p>ಎರಡು ದಿನಗಳ ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಕ್ವಾಲಾಲಂಪುರದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಮಲೇಷ್ಯಾದಲ್ಲಿರುವ ತಮಿಳು ವಲಸಿಗರು ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ತಮಿಳು ವಲಸಿಗರು ಹಲವು ಶತಮಾನಗಳಿಂದ ಮಲೇಷ್ಯಾದಲ್ಲಿದ್ದಾರೆ ಎಂದು ಹೇಳಿದರು.</p><p>ಈ ಇತಿಹಾಸದಿಂದ ಪ್ರೇರಿತವಾಗಿ, ಭಾರತವು ಮಲಯ ವಿಶ್ವವಿದ್ಯಾಲಯದಲ್ಲಿ ತಿರುವಳ್ಳುವರ್ ಪೀಠವನ್ನು ಸ್ಥಾಪಿಸಿದೆ. ಪರಂಪರೆಯನ್ನು ಮತ್ತಷ್ಟು ಬಲಪಡಿಸಲು ತಿರುವಳ್ಳುವರ್ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>