ಪುರೋಹಿತ್ ಮತ್ತು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿ ಆರು ಜನರು ಈ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. 2008ರ ಸೆಪ್ಟೆಂಬರ್ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಈ ಪ್ರಕರಣದ ಎಲ್ಲ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಸಿಆರ್ಪಿಸಿಯ ಸಂಬಂಧಿಸಿದ ಸೆಕ್ಷನ್ ಅಡಿ ತಮ್ಮನ್ನು ಶಿಕ್ಷೆಗೊಳಪಡಿಸಲು ಅವಕಾಶವಿಲ್ಲ ಎಂದು ಪುರೋಹಿತ್ ಪ್ರತಿಪಾದಿಸಿದ್ದರು.
ಆದರೆ ನ್ಯಾಯಮೂರ್ತಿಗಳಾದ ಎ.ಎಸ್.ಗಡ್ಕರಿ ಮತ್ತು ಪ್ರಕಾಶ್ ನಾಯಕ್ ಅವರ ಪೀಠವು ಪುರೋಹಿತ್ ಅವರ ಮನವಿಯನ್ನು ತಿರಸ್ಕರಿಸಿತು.