<p><strong>ಮುಂಬೈ:</strong> ಮಹಾರಾಷ್ಟ್ರದ ಮಾಲೆಗಾಂವ್ನಲ್ಲಿ 2008ರಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತೀರ್ಪನ್ನು ಎನ್ಐಎ ವಿಶೇಷ ಕೋರ್ಟ್ ಜುಲೈ 31ರಂದು ಪ್ರಕಟಿಸಲಿದೆ.</p><p>ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. </p><p>ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು ಗುರುವಾರ, ‘ಬೃಹತ್ ದಾಖಲೆಗಳಿದ್ದು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದರು.</p><p>2008ರ ಸೆ. 29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುನ್ನಾದಿನ ಸ್ಫೋಟ ನಡೆದಿತ್ತು. 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. </p><p>ಮುಂಬೈ ಭಯೋತ್ಪಾದಕರ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿದ್ದು, ನಂತರ ತನಿಖೆಯ ಹೊಣೆಯನ್ನು ಎನ್ಐಎ ವಹಿಸಿಕೊಂಡಿತ್ತು.</p><p>ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದ ಮಾಲೆಗಾಂವ್ನಲ್ಲಿ 2008ರಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತೀರ್ಪನ್ನು ಎನ್ಐಎ ವಿಶೇಷ ಕೋರ್ಟ್ ಜುಲೈ 31ರಂದು ಪ್ರಕಟಿಸಲಿದೆ.</p><p>ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. </p><p>ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು ಗುರುವಾರ, ‘ಬೃಹತ್ ದಾಖಲೆಗಳಿದ್ದು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದರು.</p><p>2008ರ ಸೆ. 29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುನ್ನಾದಿನ ಸ್ಫೋಟ ನಡೆದಿತ್ತು. 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. </p><p>ಮುಂಬೈ ಭಯೋತ್ಪಾದಕರ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿದ್ದು, ನಂತರ ತನಿಖೆಯ ಹೊಣೆಯನ್ನು ಎನ್ಐಎ ವಹಿಸಿಕೊಂಡಿತ್ತು.</p><p>ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>