ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದ ಬಿಜೆಪಿ–ಶಿವಸೇನಾ ನಂತರ ಅಧಿಕಾರ ಹಂಚಿಕೆ ವಿಚಾರದಲ್ಲಿ ಉಂಟಾದ ಭಿನ್ನಾಭಿಪ್ರಾಯದಿಂದ ಮೈತ್ರಿಯನ್ನೇ ಕಡಿದುಕೊಂಡಿವೆ. ಪರಿಣಾಮವಾಗಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಇದೀಗ ಶಿವಸೇನಾ, ಎನ್ಸಿಪಿ, ಕಾಂಗ್ರೆಸ್ ಜತೆಯಾಗಿ ಸರ್ಕಾರ ರಚಿಸಲು ಮುಂದಾಗಿವೆ.