<p><strong>ನವದೆಹಲಿ:</strong> ಕ್ಷೇತ್ರ ಪುನರ್ವಿಂಗಡಣೆ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 29ರ ನಂತರವೇ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.</p>.<p>ಕ್ಷೇತ್ರ ಪುನರ್ವಿಂಗಡಣೆ ಬಗ್ಗೆ ಸಂಪೂರ್ಣ ಮಾಹಿತಿಯಿಲ್ಲದೇ ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿಯ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲು ಸಾಧ್ಯವಿಲ್ಲ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡ ಬಳಿಕ ಏಪ್ರಿಲ್ 29ರ ನಂತರ ಸರ್ವಪಕ್ಷಗಳ ಸಭೆ ಕರೆಯಬಹುದು ಎಂದು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಖರ್ಗೆ, ‘ವಿಧಾನಸಭಾ ಚುನಾವಣೆಗಳ ನಡುವೆಯೇ ಸಂಸತ್ತಿನ ವಿಶೇಷ ಅಧಿವೇಶನ ಕರೆದಿರುವುದರಿಂದ, ಸರ್ಕಾರವು ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೊಳಿಸಲು ಆತುರಪಡುತ್ತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ’ ಎಂದು ಹೇಳಿದ್ದಾರೆ. </p>.<p>ನಾರಿ ಶಕ್ತಿ ವಂದನಾ ಅಧಿನಿಯಮ ಕುರಿತ ಚರ್ಚೆಗಾಗಿ ಏಪ್ರಿಲ್ 16ರಿಂದ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಪ್ರಧಾನಿ ಮೋದಿ ಬರೆದಿರುವ ಪತ್ರಕ್ಕೆ ಪ್ರತಿಯಾಗಿ ಖರ್ಗೆ ಈ ಪತ್ರ ಬರೆದಿದ್ದಾರೆ.</p>.<p>‘ನಾರಿ ಶಕ್ತಿ ವಂದನಾ ಅಧಿನಿಯಮವು 2023 ಸಪ್ಟೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಈ ಕಾನೂನು ತಕ್ಷಣ ಜಾರಿಯಾಗಬೇಕು ಎಂದು ನಾನು ಕಾಂಗ್ರೆಸ್ ಪರವಾಗಿ ಮನವಿ ಮಾಡಿದ್ದೆ. ಕಾನೂನಿನ ಅನುಷ್ಠಾನಕ್ಕೆ ಒಮ್ಮತವಿದೆ ಎಂದು ಪ್ರಧಾನಿ ಹೇಳಿದ್ದರು. ಆದರೆ, ಅವರು ಅದನ್ನು ಜಾರಿಗೊಳಿಸಲಿಲ್ಲ. 30 ತಿಂಗಳು ಕಳೆದಿದೆ. ಈಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವಿಶೇಷ ಅಧಿವೇಶನ ಕರೆಯಲಾಗಿದೆ. ಕ್ಷೇತ್ರ ಪುನರ್ವಿಂಗಡನೆಯ ಬಗ್ಗೆ ಯಾವುದೇ ಮಾಹಿತಿ ನೀಡದೇ ಸರ್ಕಾರ ನಮ್ಮ ಸಹಕಾರವನ್ನು ಬಯಸುತ್ತಿದೆ’ ಎಂದಿದ್ದಾರೆ.</p>.<p>‘ಈ ಬಗ್ಗೆ ಎಲ್ಲ ಪಕ್ಷಗಳೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ಪತ್ರದಲ್ಲಿ ನೀವು ಹೇಳಿದ್ದೀರಿ. ಇದು ಸುಳ್ಳು. ಏಪ್ರಿಲ್ 29ರ ಬಳಿಕ ಸರ್ವಪಕ್ಷ ಸಭೆ ಕರೆಯುವಂತೆ ಎಲ್ಲ ವಿರೋಧಪಕ್ಷಗಳು ಒತ್ತಾಯಿಸುತ್ತಿವೆ’ ಎಂದು ಹೇಳಿದ್ದಾರೆ.</p>.<p>‘ನೋಟು ರದ್ದು, ಜಿಎಸ್ಟಿ, ಗಣತಿ, ಆರ್ಥಿಕ ಆಯೋಗದ ಶಿಫಾರಸುಗಳ ಅನುಷ್ಠಾನ ತೆರಿಗೆ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ವಿಶ್ವಾಸವನ್ನು ಉಳಿಸಿಕೊಂಡಿಲ್ಲ ಎಂದು ನೋವಿನಿಂದ ಬರೆಯುತ್ತಿದ್ದೇನೆ. ಪ್ರಸ್ತಾವಿತ ಸಂವಿಧಾನ ತಿದ್ದುಪಡಿಯು ಕೇಂದ್ರ ಮತ್ತು ರಾಜ್ಯಗಳೆರಡರ ಮೇಲೂ ಪರಿಣಾಮ ಬೀರಲಿದೆ. ಸಣ್ಣದಿರಲಿ ದೊಡ್ಡದಿರಲಿ ಎಲ್ಲ ಪಕ್ಷಗಳು ಮತ್ತು ರಾಜ್ಯಗಳ ಅಭಿಪ್ರಾಯ ಕೇಳಬೇಕು’ ಎಂದು ಖರ್ಗೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ಷೇತ್ರ ಪುನರ್ವಿಂಗಡಣೆ ಬಗ್ಗೆ ಚರ್ಚೆ ನಡೆಸಲು ಏಪ್ರಿಲ್ 29ರ ನಂತರವೇ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.</p>.<p>ಕ್ಷೇತ್ರ ಪುನರ್ವಿಂಗಡಣೆ ಬಗ್ಗೆ ಸಂಪೂರ್ಣ ಮಾಹಿತಿಯಿಲ್ಲದೇ ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿಯ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲು ಸಾಧ್ಯವಿಲ್ಲ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡ ಬಳಿಕ ಏಪ್ರಿಲ್ 29ರ ನಂತರ ಸರ್ವಪಕ್ಷಗಳ ಸಭೆ ಕರೆಯಬಹುದು ಎಂದು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಖರ್ಗೆ, ‘ವಿಧಾನಸಭಾ ಚುನಾವಣೆಗಳ ನಡುವೆಯೇ ಸಂಸತ್ತಿನ ವಿಶೇಷ ಅಧಿವೇಶನ ಕರೆದಿರುವುದರಿಂದ, ಸರ್ಕಾರವು ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಕಾನೂನನ್ನು ಜಾರಿಗೊಳಿಸಲು ಆತುರಪಡುತ್ತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ’ ಎಂದು ಹೇಳಿದ್ದಾರೆ. </p>.<p>ನಾರಿ ಶಕ್ತಿ ವಂದನಾ ಅಧಿನಿಯಮ ಕುರಿತ ಚರ್ಚೆಗಾಗಿ ಏಪ್ರಿಲ್ 16ರಿಂದ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ ಎಂದು ಪ್ರಧಾನಿ ಮೋದಿ ಬರೆದಿರುವ ಪತ್ರಕ್ಕೆ ಪ್ರತಿಯಾಗಿ ಖರ್ಗೆ ಈ ಪತ್ರ ಬರೆದಿದ್ದಾರೆ.</p>.<p>‘ನಾರಿ ಶಕ್ತಿ ವಂದನಾ ಅಧಿನಿಯಮವು 2023 ಸಪ್ಟೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ. ಈ ಕಾನೂನು ತಕ್ಷಣ ಜಾರಿಯಾಗಬೇಕು ಎಂದು ನಾನು ಕಾಂಗ್ರೆಸ್ ಪರವಾಗಿ ಮನವಿ ಮಾಡಿದ್ದೆ. ಕಾನೂನಿನ ಅನುಷ್ಠಾನಕ್ಕೆ ಒಮ್ಮತವಿದೆ ಎಂದು ಪ್ರಧಾನಿ ಹೇಳಿದ್ದರು. ಆದರೆ, ಅವರು ಅದನ್ನು ಜಾರಿಗೊಳಿಸಲಿಲ್ಲ. 30 ತಿಂಗಳು ಕಳೆದಿದೆ. ಈಗ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ವಿಶೇಷ ಅಧಿವೇಶನ ಕರೆಯಲಾಗಿದೆ. ಕ್ಷೇತ್ರ ಪುನರ್ವಿಂಗಡನೆಯ ಬಗ್ಗೆ ಯಾವುದೇ ಮಾಹಿತಿ ನೀಡದೇ ಸರ್ಕಾರ ನಮ್ಮ ಸಹಕಾರವನ್ನು ಬಯಸುತ್ತಿದೆ’ ಎಂದಿದ್ದಾರೆ.</p>.<p>‘ಈ ಬಗ್ಗೆ ಎಲ್ಲ ಪಕ್ಷಗಳೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ಪತ್ರದಲ್ಲಿ ನೀವು ಹೇಳಿದ್ದೀರಿ. ಇದು ಸುಳ್ಳು. ಏಪ್ರಿಲ್ 29ರ ಬಳಿಕ ಸರ್ವಪಕ್ಷ ಸಭೆ ಕರೆಯುವಂತೆ ಎಲ್ಲ ವಿರೋಧಪಕ್ಷಗಳು ಒತ್ತಾಯಿಸುತ್ತಿವೆ’ ಎಂದು ಹೇಳಿದ್ದಾರೆ.</p>.<p>‘ನೋಟು ರದ್ದು, ಜಿಎಸ್ಟಿ, ಗಣತಿ, ಆರ್ಥಿಕ ಆಯೋಗದ ಶಿಫಾರಸುಗಳ ಅನುಷ್ಠಾನ ತೆರಿಗೆ ಪರಿಷ್ಕರಣೆ ವಿಚಾರದಲ್ಲಿ ಸರ್ಕಾರ ವಿಶ್ವಾಸವನ್ನು ಉಳಿಸಿಕೊಂಡಿಲ್ಲ ಎಂದು ನೋವಿನಿಂದ ಬರೆಯುತ್ತಿದ್ದೇನೆ. ಪ್ರಸ್ತಾವಿತ ಸಂವಿಧಾನ ತಿದ್ದುಪಡಿಯು ಕೇಂದ್ರ ಮತ್ತು ರಾಜ್ಯಗಳೆರಡರ ಮೇಲೂ ಪರಿಣಾಮ ಬೀರಲಿದೆ. ಸಣ್ಣದಿರಲಿ ದೊಡ್ಡದಿರಲಿ ಎಲ್ಲ ಪಕ್ಷಗಳು ಮತ್ತು ರಾಜ್ಯಗಳ ಅಭಿಪ್ರಾಯ ಕೇಳಬೇಕು’ ಎಂದು ಖರ್ಗೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>