<p><strong>ನವದೆಹಲಿ</strong>: ‘ಆಪರೇಷನ್ ಸಿಂಧೂರ’ ಚರ್ಚೆ ವೇಳೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಕ್ಕಾಗಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಜೆ.ಪಿ.ನಡ್ಡಾ ಅವರು ಕ್ಷಮೆಯಾಚಿಸಿದ್ದಾರೆ.</p><p>‘ನಾನು ನನ್ನ ಮಾತುಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದೇನೆ. ನಿಮ್ಮ(ಮಲ್ಲಿಕಾರ್ಜುನ ಖರ್ಗೆ) ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ’ ಎಂದು ನಡ್ಡಾ ಹೇಳಿದ್ದಾರೆ.</p><p>ರಾಜ್ಯಸಭೆಯಲ್ಲಿ ‘ಆಪರೇಷನ್ ಸಿಂಧೂರ’ ಕುರಿತು ನಡೆಯುತ್ತಿರುವ ವಿಶೇಷ ಚರ್ಚೆ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ನಡ್ಡಾ, ಮಲ್ಲಿಕಾರ್ಜುನ ಖರ್ಗೆ ತಮ್ಮ ‘ಮಾನಸಿಕ ಸ್ಥಿಮಿತ’ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.</p><p>ನಡ್ಡಾ ಅವರ ಹೇಳಿಕೆಯು ರಾಜ್ಯಸಭೆಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿತು. ಹಿರಿಯ ನಾಯಕರಾದ ಖರ್ಗೆ ಅವರ ವಿರುದ್ಧ ಆಕ್ಷೇಪಾರ್ಹ ಪದ ಸಲ್ಲ ಎಂದ ವಿರೋಧ ಪಕ್ಷದವರು, ಕ್ಷಮೆಯಾಚಿಸುವಂತೆ ನಡ್ಡಾ ಅವರಿಗೆ ಒತ್ತಾಯಿಸಿದ್ದಾರೆ.</p><p>‘ಎನ್ಡಿಎ ಸರ್ಕಾರದಲ್ಲಿ ನಾನು ಗೌರವಿಸುವ ಮೂವರು ಸಚಿವರಲ್ಲಿ ನಡ್ಡಾ ಕೂಡ ಒಬ್ಬರು. ಆದರೆ, ಅವರು ನನ್ನನ್ನು ‘ಮಾನಸಿಕ’ ವ್ಯಕ್ತಿ ಎಂದು ಕರೆದಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಅವರು ಕ್ಷಮೆಯಾಚಿಸಬೇಕು’ ಎಂದು ಖರ್ಗೆ ಆಗ್ರಹಿಸಿದ್ದಾರೆ.</p><p>ಇದರ ಬೆನ್ನಲ್ಲೇ ನಡ್ಡಾ ಕ್ಷಮೆಯಾಚಿಸಿದ್ದಾರೆ.</p><p>‘ನಾನು ಈಗಾಗಲೇ ನನ್ನ ಮಾತುಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದೇನೆ. ಆದರೆ, ಖರ್ಗೆ ಅವರು ತಮ್ಮ ಮಿತಿಗಳನ್ನು ಮೀರಿ ಪ್ರಧಾನಿಯವರ ವಿರುದ್ಧ ಭಾವೋದ್ರೇಕದಿಂದ ಟೀಕೆಗಳನ್ನು ಮಾಡಿದ್ದಾರೆ. ಅದನ್ನು ಕಡತದಿಂದ ತೆಗೆದುಹಾಕಬೇಕು’ ಎಂದು ನಡ್ಡಾ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆಪರೇಷನ್ ಸಿಂಧೂರ’ ಚರ್ಚೆ ವೇಳೆ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಕ್ಕಾಗಿ ಕೇಂದ್ರ ಸಚಿವ, ರಾಜ್ಯಸಭಾ ಸದಸ್ಯ ಜೆ.ಪಿ.ನಡ್ಡಾ ಅವರು ಕ್ಷಮೆಯಾಚಿಸಿದ್ದಾರೆ.</p><p>‘ನಾನು ನನ್ನ ಮಾತುಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದೇನೆ. ನಿಮ್ಮ(ಮಲ್ಲಿಕಾರ್ಜುನ ಖರ್ಗೆ) ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ’ ಎಂದು ನಡ್ಡಾ ಹೇಳಿದ್ದಾರೆ.</p><p>ರಾಜ್ಯಸಭೆಯಲ್ಲಿ ‘ಆಪರೇಷನ್ ಸಿಂಧೂರ’ ಕುರಿತು ನಡೆಯುತ್ತಿರುವ ವಿಶೇಷ ಚರ್ಚೆ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ನಡ್ಡಾ, ಮಲ್ಲಿಕಾರ್ಜುನ ಖರ್ಗೆ ತಮ್ಮ ‘ಮಾನಸಿಕ ಸ್ಥಿಮಿತ’ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.</p><p>ನಡ್ಡಾ ಅವರ ಹೇಳಿಕೆಯು ರಾಜ್ಯಸಭೆಯಲ್ಲಿ ಕೋಲಾಹಲವನ್ನೇ ಸೃಷ್ಟಿಸಿತು. ಹಿರಿಯ ನಾಯಕರಾದ ಖರ್ಗೆ ಅವರ ವಿರುದ್ಧ ಆಕ್ಷೇಪಾರ್ಹ ಪದ ಸಲ್ಲ ಎಂದ ವಿರೋಧ ಪಕ್ಷದವರು, ಕ್ಷಮೆಯಾಚಿಸುವಂತೆ ನಡ್ಡಾ ಅವರಿಗೆ ಒತ್ತಾಯಿಸಿದ್ದಾರೆ.</p><p>‘ಎನ್ಡಿಎ ಸರ್ಕಾರದಲ್ಲಿ ನಾನು ಗೌರವಿಸುವ ಮೂವರು ಸಚಿವರಲ್ಲಿ ನಡ್ಡಾ ಕೂಡ ಒಬ್ಬರು. ಆದರೆ, ಅವರು ನನ್ನನ್ನು ‘ಮಾನಸಿಕ’ ವ್ಯಕ್ತಿ ಎಂದು ಕರೆದಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಅವರು ಕ್ಷಮೆಯಾಚಿಸಬೇಕು’ ಎಂದು ಖರ್ಗೆ ಆಗ್ರಹಿಸಿದ್ದಾರೆ.</p><p>ಇದರ ಬೆನ್ನಲ್ಲೇ ನಡ್ಡಾ ಕ್ಷಮೆಯಾಚಿಸಿದ್ದಾರೆ.</p><p>‘ನಾನು ಈಗಾಗಲೇ ನನ್ನ ಮಾತುಗಳನ್ನು ಹಿಂದಕ್ಕೆ ಪಡೆದುಕೊಂಡಿದ್ದೇನೆ. ಆದರೆ, ಖರ್ಗೆ ಅವರು ತಮ್ಮ ಮಿತಿಗಳನ್ನು ಮೀರಿ ಪ್ರಧಾನಿಯವರ ವಿರುದ್ಧ ಭಾವೋದ್ರೇಕದಿಂದ ಟೀಕೆಗಳನ್ನು ಮಾಡಿದ್ದಾರೆ. ಅದನ್ನು ಕಡತದಿಂದ ತೆಗೆದುಹಾಕಬೇಕು’ ಎಂದು ನಡ್ಡಾ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>