<p><strong>ನವದೆಹಲಿ</strong>: ‘ಈಚೆಗಿನ ದಿನಗಳಲ್ಲಿ ಚುನಾವಣಾ ಆಯೋಗದಂತಹ (ಇ.ಸಿ) ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿದ್ದು, ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದರು.</p>.<p>ರಾಷ್ಟ್ರೀಯ ಮತದಾರರ ದಿನ ಅಂಗವಾಗಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮತ ಕಳ್ಳತನ’ ಮತ್ತು ಪೂರ್ವಸಿದ್ಧತೆಯಿಲ್ಲದ ಎಸ್ಐಆರ್ ಮೂಲಕ ‘ಮತದಾನದ ಹಕ್ಕು’ ಕಸಿದುಕೊಳ್ಳುವುದು ಭಾರತವು ಬಹುಕಾಲದಿಂದ ಪಾಲಿಸಿಕೊಂಡು ಬಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿ ಪರಿಣಮಿಸಿದೆ ಎಂದರು.</p>.<p>‘ಭಾರತದ ಜನರು ಮುಕ್ತ, ನ್ಯಾಯಯುತ ಮತ್ತು ನಿರ್ಭೀತ ಚುನಾವಣೆಗೆ ಅರ್ಹರಾಗಿದ್ದಾರೆ. ಇಲ್ಲಿ, ಮತದಾರರ ಪಟ್ಟಿಯು ದೋಷರಹಿತವಾಗಿರಬೇಕಾದುದು ಪ್ರಾಥಮಿಕ ಅವಶ್ಯಕತೆಯಾಗಿದೆ’ ಎಂದು ಹೇಳಿದರು.</p>.<p>‘ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಸಮಗ್ರತೆಯನ್ನು ರಕ್ಷಿಸುವುದು ನಮ್ಮೆಲ್ಲರ ಬಲುದೊಡ್ಡ ಜವಾಬ್ದಾರಿಯಾಗಿದೆ. ಇದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುತ್ತದೆ’ ಎಂದು ಅಭಿಪ್ರಾಯಪಟ್ಟರು. </p>.<p>ಚುನಾವಣಾ ಆಯೋಗವನ್ನು 1950ರ ಜನವರಿ 25ರಂದು ಸ್ಥಾಪಿಸಲಾಗಿದ್ದು, ಕಳೆದ 16 ವರ್ಷಗಳಿಂದ ಆ ದಿನವನ್ನು ‘ರಾಷ್ಟ್ರೀಯ ಮತದಾರರ ದಿನ’ವಾಗಿ ಆಚರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಈಚೆಗಿನ ದಿನಗಳಲ್ಲಿ ಚುನಾವಣಾ ಆಯೋಗದಂತಹ (ಇ.ಸಿ) ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿದ್ದು, ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದರು.</p>.<p>ರಾಷ್ಟ್ರೀಯ ಮತದಾರರ ದಿನ ಅಂಗವಾಗಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮತ ಕಳ್ಳತನ’ ಮತ್ತು ಪೂರ್ವಸಿದ್ಧತೆಯಿಲ್ಲದ ಎಸ್ಐಆರ್ ಮೂಲಕ ‘ಮತದಾನದ ಹಕ್ಕು’ ಕಸಿದುಕೊಳ್ಳುವುದು ಭಾರತವು ಬಹುಕಾಲದಿಂದ ಪಾಲಿಸಿಕೊಂಡು ಬಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗಿ ಪರಿಣಮಿಸಿದೆ ಎಂದರು.</p>.<p>‘ಭಾರತದ ಜನರು ಮುಕ್ತ, ನ್ಯಾಯಯುತ ಮತ್ತು ನಿರ್ಭೀತ ಚುನಾವಣೆಗೆ ಅರ್ಹರಾಗಿದ್ದಾರೆ. ಇಲ್ಲಿ, ಮತದಾರರ ಪಟ್ಟಿಯು ದೋಷರಹಿತವಾಗಿರಬೇಕಾದುದು ಪ್ರಾಥಮಿಕ ಅವಶ್ಯಕತೆಯಾಗಿದೆ’ ಎಂದು ಹೇಳಿದರು.</p>.<p>‘ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಸಮಗ್ರತೆಯನ್ನು ರಕ್ಷಿಸುವುದು ನಮ್ಮೆಲ್ಲರ ಬಲುದೊಡ್ಡ ಜವಾಬ್ದಾರಿಯಾಗಿದೆ. ಇದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುತ್ತದೆ’ ಎಂದು ಅಭಿಪ್ರಾಯಪಟ್ಟರು. </p>.<p>ಚುನಾವಣಾ ಆಯೋಗವನ್ನು 1950ರ ಜನವರಿ 25ರಂದು ಸ್ಥಾಪಿಸಲಾಗಿದ್ದು, ಕಳೆದ 16 ವರ್ಷಗಳಿಂದ ಆ ದಿನವನ್ನು ‘ರಾಷ್ಟ್ರೀಯ ಮತದಾರರ ದಿನ’ವಾಗಿ ಆಚರಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>