<p><strong>ನವದೆಹಲಿ:</strong> ಅಧಿಕಾರದಲ್ಲಿರಲು ಬಿಜೆಪಿ ಅನೈತಿಕತೆಯ ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. </p><p>ದೆಹಲಿಯಲ್ಲಿರುವ ಕಾಂಗ್ರೆಸ್ ಮುಖ್ಯಕಚೇರಿ ‘ಇಂದಿರಾ ಭವನ’ದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. </p>.ಇಷ್ಟು ಸಂಕಷ್ಟ ಸೃಷ್ಟಿಯಾಗಲು ಪ್ರಧಾನಿ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ.<p>ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ, ಜೀವಂತ ಮತದಾರರನ್ನು ಸತ್ತವರು ಎಂದು ಘೋಷಿಸಲಾಗುತ್ತಿದೆ. ಚುನಾವಣಾ ಆಯೋಗವು ಯಾರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ, ಯಾವ ಆಧಾರದ ಮೇಲೆ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಲು ಸಿದ್ಧವಾಗಿಲ್ಲ. ಈ ನಿಲುವಿನಿಂದ ನಿಷ್ಪಕ್ಷಪಾತತೆಯನ್ನು ಅರ್ಥಮಾಡಿಕೊಳ್ಳಬಹುದು ಎಂದು ಖರ್ಗೆ ಹೇಳಿದ್ದಾರೆ.</p><p>65 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದಕ್ಕೆ ಯಾವುದೇ ಆಕ್ಷೇಪ ಇಲ್ಲ ಎಂದು ಬಿಜೆಪಿ ಹೇಳುತ್ತದೆ. ಇದು ಎಸ್ಐಆರ್ನಿಂದ ಯಾರಿಗೆ ಲಾಭ ಎನ್ನುವುದನ್ನು ತೋರಿಸುತ್ತದೆ ಎಂದು ಖರ್ಗೆ ಹೇಳಿದ್ದಾರೆ.</p>.Vote Chori | ಮತಗಳ್ಳತನ ವಿರುದ್ಧ ಧ್ವನಿ ಎತ್ತಲು ಜನರಿಗೆ ರಾಹುಲ್, ಖರ್ಗೆ ಮನವಿ.<p>‘ಇದು ಚುನಾವಣೆಗಳನ್ನು ಗೆಲ್ಲುವ ಹೋರಾಟವಲ್ಲ, ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸುವ ಹೋರಾಟ’ ಎಂದು ಖರ್ಗೆ ಹೇಳಿದ್ದಾರೆ.</p><p>‘ಈಗಿರುವ ಆಡಳಿತ ಪಕ್ಷವು ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟದ ಅನೈತಿಕತೆಗೆ ಹೋಗಲು ಸಿದ್ಧವಾಗಿದೆ. ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬರುತ್ತಿವೆ’ ಎಂದು ಹೇಳಿದ್ದಾರೆ.</p><p>‘ಜನರ ಧ್ವನಿಯನ್ನು ಆಲಿಸಿ, ಮತದಾರರ ಪಟ್ಟಿಯನ್ನು ಸಾರ್ವಜನಿಕಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿರುವ ಸುಪ್ರೀಂ ಕೋರ್ಟ್ಗೆ ನಾವು ಕೃತಜ್ಞರಾಗಿದ್ದೇವೆ. 65 ಲಕ್ಷ ಜನರನ್ನು ಮತದಾನದ ಹಕ್ಕಿನಿಂದ ಮೊಟಕುಗೊಳಿಸಲು ಯಾವುದೇ ಆಕ್ಷೇಪವಿಲ್ಲ ಎಂದು ಆಡಳಿತ ಪಕ್ಷ ಹೇಳಿರುವ ಆಶ್ಚರ್ಯಕರ. ಇದರಿಂದ ಯಾರು ಲಾಭ ಪಡೆದರು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ’ ಎಂದು ಖರ್ಗೆ ಹೇಳಿದ್ದಾರೆ.</p>.#VoteChori ಗಮನ ಬೇರೆಡೆ ಸೆಳೆಯಲು #CreditChori: ಪ್ರಿಯಾಂಕ್ ಖರ್ಗೆ ಆರೋಪ.<p>ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ವಿರೋಧ ಪಕ್ಷಗಳ ವಿರುದ್ಧ ರಾಜಕೀಯ ದುರುದ್ದೇಶಕ್ಕಾಗಿ ಬಹಿರಂಗವಾಗಿ ಬಳಸಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.</p><p>'ಅಲಿಪ್ತ ನೀತಿ'ಯಿಂದಾಗಿ ಭಾರತ ಗಳಿಸಿದ ವಿಶೇಷ ಸ್ಥಾನವನ್ನು ಕಳೆದುಕೊಂಡಿದೆ. ಒಂದು ಕಾಲದಲ್ಲಿ ನಾವು ಎಲ್ಲಾ ಅಭಿವೃದ್ಧಿಶೀಲ ರಾಷ್ಟ್ರಗಳ ಧ್ವನಿಯಾಗಿದ್ದೆವು, ಇಂದು ನಮಗೆ ನೆರೆಹೊರೆಯಲ್ಲಾಗಲಿ ಅಥವಾ ದೂರದಲ್ಲಾಗಲಿ ನಮ್ಮವರು ಯಾರೂ ಇಲ್ಲ. ಸ್ವಾತಂತ್ರ್ಯದ ವೀರರು ಈ ದೇಶಕ್ಕಾಗಿ ಕಂಡ ಕನಸು ಇಂದು ನಮ್ಮಿಂದ ದೂರವಾಗುತ್ತಿದೆ ಎಂದು ಹೇಳಿದ್ದಾರೆ.</p> .ಈ ಭೂಮಿ ಮೇಲಿರುವ ಎಲ್ಲದರ ಕುರಿತೂ ಚರ್ಚೆ ಸಾಧ್ಯ: ಉಪ ಸಭಾಪತಿಗೆ ಖರ್ಗೆ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಧಿಕಾರದಲ್ಲಿರಲು ಬಿಜೆಪಿ ಅನೈತಿಕತೆಯ ಯಾವ ಮಟ್ಟಕ್ಕೂ ಬೇಕಾದರೂ ಇಳಿಯುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. </p><p>ದೆಹಲಿಯಲ್ಲಿರುವ ಕಾಂಗ್ರೆಸ್ ಮುಖ್ಯಕಚೇರಿ ‘ಇಂದಿರಾ ಭವನ’ದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. </p>.ಇಷ್ಟು ಸಂಕಷ್ಟ ಸೃಷ್ಟಿಯಾಗಲು ಪ್ರಧಾನಿ ನಿರ್ಲಕ್ಷ್ಯವೇ ಕಾರಣ: ಮಲ್ಲಿಕಾರ್ಜುನ ಖರ್ಗೆ.<p>ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ, ಜೀವಂತ ಮತದಾರರನ್ನು ಸತ್ತವರು ಎಂದು ಘೋಷಿಸಲಾಗುತ್ತಿದೆ. ಚುನಾವಣಾ ಆಯೋಗವು ಯಾರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ, ಯಾವ ಆಧಾರದ ಮೇಲೆ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಲು ಸಿದ್ಧವಾಗಿಲ್ಲ. ಈ ನಿಲುವಿನಿಂದ ನಿಷ್ಪಕ್ಷಪಾತತೆಯನ್ನು ಅರ್ಥಮಾಡಿಕೊಳ್ಳಬಹುದು ಎಂದು ಖರ್ಗೆ ಹೇಳಿದ್ದಾರೆ.</p><p>65 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದಕ್ಕೆ ಯಾವುದೇ ಆಕ್ಷೇಪ ಇಲ್ಲ ಎಂದು ಬಿಜೆಪಿ ಹೇಳುತ್ತದೆ. ಇದು ಎಸ್ಐಆರ್ನಿಂದ ಯಾರಿಗೆ ಲಾಭ ಎನ್ನುವುದನ್ನು ತೋರಿಸುತ್ತದೆ ಎಂದು ಖರ್ಗೆ ಹೇಳಿದ್ದಾರೆ.</p>.Vote Chori | ಮತಗಳ್ಳತನ ವಿರುದ್ಧ ಧ್ವನಿ ಎತ್ತಲು ಜನರಿಗೆ ರಾಹುಲ್, ಖರ್ಗೆ ಮನವಿ.<p>‘ಇದು ಚುನಾವಣೆಗಳನ್ನು ಗೆಲ್ಲುವ ಹೋರಾಟವಲ್ಲ, ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸುವ ಹೋರಾಟ’ ಎಂದು ಖರ್ಗೆ ಹೇಳಿದ್ದಾರೆ.</p><p>‘ಈಗಿರುವ ಆಡಳಿತ ಪಕ್ಷವು ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟದ ಅನೈತಿಕತೆಗೆ ಹೋಗಲು ಸಿದ್ಧವಾಗಿದೆ. ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬರುತ್ತಿವೆ’ ಎಂದು ಹೇಳಿದ್ದಾರೆ.</p><p>‘ಜನರ ಧ್ವನಿಯನ್ನು ಆಲಿಸಿ, ಮತದಾರರ ಪಟ್ಟಿಯನ್ನು ಸಾರ್ವಜನಿಕಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿರುವ ಸುಪ್ರೀಂ ಕೋರ್ಟ್ಗೆ ನಾವು ಕೃತಜ್ಞರಾಗಿದ್ದೇವೆ. 65 ಲಕ್ಷ ಜನರನ್ನು ಮತದಾನದ ಹಕ್ಕಿನಿಂದ ಮೊಟಕುಗೊಳಿಸಲು ಯಾವುದೇ ಆಕ್ಷೇಪವಿಲ್ಲ ಎಂದು ಆಡಳಿತ ಪಕ್ಷ ಹೇಳಿರುವ ಆಶ್ಚರ್ಯಕರ. ಇದರಿಂದ ಯಾರು ಲಾಭ ಪಡೆದರು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ’ ಎಂದು ಖರ್ಗೆ ಹೇಳಿದ್ದಾರೆ.</p>.#VoteChori ಗಮನ ಬೇರೆಡೆ ಸೆಳೆಯಲು #CreditChori: ಪ್ರಿಯಾಂಕ್ ಖರ್ಗೆ ಆರೋಪ.<p>ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ವಿರೋಧ ಪಕ್ಷಗಳ ವಿರುದ್ಧ ರಾಜಕೀಯ ದುರುದ್ದೇಶಕ್ಕಾಗಿ ಬಹಿರಂಗವಾಗಿ ಬಳಸಲಾಗಿದೆ ಎಂದು ಖರ್ಗೆ ಆರೋಪಿಸಿದ್ದಾರೆ.</p><p>'ಅಲಿಪ್ತ ನೀತಿ'ಯಿಂದಾಗಿ ಭಾರತ ಗಳಿಸಿದ ವಿಶೇಷ ಸ್ಥಾನವನ್ನು ಕಳೆದುಕೊಂಡಿದೆ. ಒಂದು ಕಾಲದಲ್ಲಿ ನಾವು ಎಲ್ಲಾ ಅಭಿವೃದ್ಧಿಶೀಲ ರಾಷ್ಟ್ರಗಳ ಧ್ವನಿಯಾಗಿದ್ದೆವು, ಇಂದು ನಮಗೆ ನೆರೆಹೊರೆಯಲ್ಲಾಗಲಿ ಅಥವಾ ದೂರದಲ್ಲಾಗಲಿ ನಮ್ಮವರು ಯಾರೂ ಇಲ್ಲ. ಸ್ವಾತಂತ್ರ್ಯದ ವೀರರು ಈ ದೇಶಕ್ಕಾಗಿ ಕಂಡ ಕನಸು ಇಂದು ನಮ್ಮಿಂದ ದೂರವಾಗುತ್ತಿದೆ ಎಂದು ಹೇಳಿದ್ದಾರೆ.</p> .ಈ ಭೂಮಿ ಮೇಲಿರುವ ಎಲ್ಲದರ ಕುರಿತೂ ಚರ್ಚೆ ಸಾಧ್ಯ: ಉಪ ಸಭಾಪತಿಗೆ ಖರ್ಗೆ ಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>