<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಲೂಟಿಯಿಂದಾಗಿ ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬುಧವಾರ ಆರೋಪಿಸಿದ್ದಾರೆ. </p><p>ಬಿಜೆಪಿ ಅಧಿಕಾರದ ದುರಾಸೆಯಲ್ಲಿ ಮುಳುಗಿದೆ. ಆದರೆ ಜನರು ಈಗ ಜಾಗೃತರಾಗಿದ್ದು, ಬಿಜೆಪಿಯ ಪೊಳ್ಳು ಭರವಸೆಗಳನ್ನು ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ. </p><p>ಈ ಸಂಬಂಧ ಅಂಕಿಅಂಶ ಸಹಿತ ವಿಡಿಯೊವನ್ನು ಖರ್ಗೆ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.</p><p>ತರಕಾರಿಗಳ ಬೆಲೆ ಗಗನಕ್ಕೇರುತ್ತಿದ್ದು, ದೇಶದಲ್ಲಿ ನಿರುದ್ಯೋಗ ದರ ಶೇ 8.45ಕ್ಕೆ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ದರ ಶೇ 8.73 ಆಗಿದೆ. ಗ್ರಾಮಗಳಲ್ಲಿ ನರೇಗಾ ಯೋಜನೆಗೆ ಬೇಡಿಕೆ ಹೆಚ್ಚಿದೆ. ಆದರೆ ಕೆಲಸವಿಲ್ಲ ಎಂದು ದೂರಿದ್ದಾರೆ. </p>.<p>ಪ್ರಧಾನಿ ಅವರೇ, ಚುನಾವಣೆಗೂ ಮುನ್ನ 'ಅಚ್ಛೇ ದಿನ್', 'ಅಮೃತ ಕಾಲ' ಘೋಷಣೆಯ ಕುರಿತು ದೇಶದ ಜನತೆಗೆ ಅರ್ಥವಾಗಿದೆ. ಜಾಹೀರಾತಿನ ಮೂಲಕ ನಿಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಬಹುದು. ಆದರೆ ಈ ಬಾರಿ ಹಾಗಾಗುವುದಿಲ್ಲ. ಜನ ಸಾಮಾನ್ಯರು ಜಾಗೃತರಾಗಿದ್ದು, ನಿಮ್ಮ ಪೊಳ್ಳು ಭರವಸೆಗಳಿಗೆ ಬಿಜೆಪಿ ವಿರುದ್ಧವೇ ಮತ ಚಲಾಯಿಸುವ ಮೂಲಕ ಉತ್ತರಿಸುತ್ತಾರೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಲೂಟಿಯಿಂದಾಗಿ ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬುಧವಾರ ಆರೋಪಿಸಿದ್ದಾರೆ. </p><p>ಬಿಜೆಪಿ ಅಧಿಕಾರದ ದುರಾಸೆಯಲ್ಲಿ ಮುಳುಗಿದೆ. ಆದರೆ ಜನರು ಈಗ ಜಾಗೃತರಾಗಿದ್ದು, ಬಿಜೆಪಿಯ ಪೊಳ್ಳು ಭರವಸೆಗಳನ್ನು ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ. </p><p>ಈ ಸಂಬಂಧ ಅಂಕಿಅಂಶ ಸಹಿತ ವಿಡಿಯೊವನ್ನು ಖರ್ಗೆ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.</p><p>ತರಕಾರಿಗಳ ಬೆಲೆ ಗಗನಕ್ಕೇರುತ್ತಿದ್ದು, ದೇಶದಲ್ಲಿ ನಿರುದ್ಯೋಗ ದರ ಶೇ 8.45ಕ್ಕೆ ಏರಿಕೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ದರ ಶೇ 8.73 ಆಗಿದೆ. ಗ್ರಾಮಗಳಲ್ಲಿ ನರೇಗಾ ಯೋಜನೆಗೆ ಬೇಡಿಕೆ ಹೆಚ್ಚಿದೆ. ಆದರೆ ಕೆಲಸವಿಲ್ಲ ಎಂದು ದೂರಿದ್ದಾರೆ. </p>.<p>ಪ್ರಧಾನಿ ಅವರೇ, ಚುನಾವಣೆಗೂ ಮುನ್ನ 'ಅಚ್ಛೇ ದಿನ್', 'ಅಮೃತ ಕಾಲ' ಘೋಷಣೆಯ ಕುರಿತು ದೇಶದ ಜನತೆಗೆ ಅರ್ಥವಾಗಿದೆ. ಜಾಹೀರಾತಿನ ಮೂಲಕ ನಿಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಬಹುದು. ಆದರೆ ಈ ಬಾರಿ ಹಾಗಾಗುವುದಿಲ್ಲ. ಜನ ಸಾಮಾನ್ಯರು ಜಾಗೃತರಾಗಿದ್ದು, ನಿಮ್ಮ ಪೊಳ್ಳು ಭರವಸೆಗಳಿಗೆ ಬಿಜೆಪಿ ವಿರುದ್ಧವೇ ಮತ ಚಲಾಯಿಸುವ ಮೂಲಕ ಉತ್ತರಿಸುತ್ತಾರೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>