ಸಾಮಾನ್ಯರು ಕೂಡ ವಿಮಾನದಲ್ಲಿ ಪ್ರಯಾಣಿಸಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಅವರು ಕೊಟ್ಟ ಅನೇಕ ಭರವಸೆಗಳಂತೆ ಇದೂ ಈಡೇರಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
‘ಯೋಜನೆ ಕಾರ್ಯಗತಗೊಂಡಿಲ್ಲ ಎಂದು ನಾವು ಹೇಳುತ್ತಿಲ್ಲ, ಆದರೆ ‘ಉಡಾನ್’ ಯೋಜನೆ ಶೇ. 93ರಷ್ಟು ಮಾರ್ಗಗಳಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಸಿಎಜಿ ವರದಿ ಹೇಳಿದೆ ಎಂದಿದ್ದಾರೆ. ಇದರ ಜೊತೆಗೆ ಹೆಲಿಕಾಪ್ಟರ್ ಸೇವೆ ಯೋಜನೆಯೂ ಸ್ಥಗಿತವಾಗಿದೆ. ದೇಶದ ಜನರು ಎಂದಿಗೂ ಈ ಸರ್ಕಾರವನ್ನು ಕ್ಷಮಿಸುವುದಿಲ್ಲ’ ಎಂದು ಖರ್ಗೆ ಆರೋಪಿಸಿದ್ದಾರೆ.