<p><strong>ನವದೆಹಲಿ:</strong> ಕೆಂಪು ಕೋಟೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ.</p><p>ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿ ಇತ್ತು. ಇದರ ಫೋಟೊವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>ನನಗೆ ಕಣ್ಣಿನ ಸಮಸ್ಯೆ ಇತ್ತು ಹಾಗೂ ನಿವಾಸ ಮತ್ತು ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಬೇಕಾಗಿತ್ತು. ಸಮಯದ ಅಭಾವ ಹಾಗೂ ಭದ್ರತಾ ಕಾರಣಗಳಿಂದ ಕೆಂಪು ಕೋಟೆಗೆ ಹೋಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p><p>ಈ ಕಾರಣಗಳಿಂದಾಗಿ ನಾನು ಕೆಂಪು ಕೋಟೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.Independence Day | ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಮುಖ್ಯಾಂಶಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೆಂಪು ಕೋಟೆಯಲ್ಲಿ ನಡೆದ 77ನೇ ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೈರಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ.</p><p>ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರಾಗಿದ್ದರು. ಅವರಿಗಾಗಿ ಮೀಸಲಿಟ್ಟಿದ್ದ ಕುರ್ಚಿ ಖಾಲಿ ಇತ್ತು. ಇದರ ಫೋಟೊವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>ನನಗೆ ಕಣ್ಣಿನ ಸಮಸ್ಯೆ ಇತ್ತು ಹಾಗೂ ನಿವಾಸ ಮತ್ತು ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಮಾಡಬೇಕಾಗಿತ್ತು. ಸಮಯದ ಅಭಾವ ಹಾಗೂ ಭದ್ರತಾ ಕಾರಣಗಳಿಂದ ಕೆಂಪು ಕೋಟೆಗೆ ಹೋಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.</p><p>ಈ ಕಾರಣಗಳಿಂದಾಗಿ ನಾನು ಕೆಂಪು ಕೋಟೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಖರ್ಗೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.Independence Day | ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದ ಮುಖ್ಯಾಂಶಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>