<p class="title"><strong>ಕೋಲ್ಕತ್ತ:</strong> ಅಕ್ಟೋಬರ್ 7 (ಗುರುವಾರ) ರಂದು ರಾಜ್ಯ ವಿಧಾನಸಭೆಯ ಸದಸ್ಯರಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣ ವಚನ ಬೋಧಿಸುವುದಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಮಂಗಳವಾರ ಹೇಳಿದ್ದಾರೆ.</p>.<p class="title">ಮಮತಾ ಅವರು ಭವಾನಿಪುರ ಉಪಚುನಾವಣೆಯಲ್ಲಿ ದಾಖಲೆಯ 58,835 ಮತಗಳಿಂದ ಜಯ ಗಳಿಸಿದ್ದರು. ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಚುನಾವಣೆಯಲ್ಲಿ ಗೆಲ್ಲುವುದು ಅವರಿಗೆ ಅನಿವಾರ್ಯವಾಗಿತ್ತು. ಭಾನುವಾರ ಉಪಚುನಾವಣೆಯ ಫಲಿತಾಂಶ ಘೋಷಿಸಲಾಗಿತ್ತು.</p>.<p class="title">ಉಪಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಟಿಎಂಸಿ ಶಾಸಕರೂ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p class="title">‘ಚುನಾಯಿತ ಸದಸ್ಯರಾದ ಮಮತಾ ಬ್ಯಾನರ್ಜಿ, ಜಾಕಿರ್ ಹುಸೈನ್ ಮತ್ತು ಅಮಿರುಲ್ ಇಸ್ಲಾಮ್ ಅವರಿಗೆ ಅಕ್ಟೋಬರ್ 7 ರಂದು ಬೆಳಿಗ್ಗೆ 11.45 ಗಂಟೆಗೆ ಪ್ರಮಾಣವಚನ ಬೋಧಿಸಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.</p>.<p class="title">ಜಾಕಿರ್ ಹುಸೈನ್ ಜಂಗೀಪುರ ಕ್ಷೇತ್ರ ಮತ್ತು ಅಮಿರುಲ್ ಇಸ್ಲಾಂ ಅವರು ಸಂಸರ್ಗಂಜ್ ಕ್ಷೇತ್ರಗಳಿಂದ ಜಯ ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ:</strong> ಅಕ್ಟೋಬರ್ 7 (ಗುರುವಾರ) ರಂದು ರಾಜ್ಯ ವಿಧಾನಸಭೆಯ ಸದಸ್ಯರಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣ ವಚನ ಬೋಧಿಸುವುದಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಮಂಗಳವಾರ ಹೇಳಿದ್ದಾರೆ.</p>.<p class="title">ಮಮತಾ ಅವರು ಭವಾನಿಪುರ ಉಪಚುನಾವಣೆಯಲ್ಲಿ ದಾಖಲೆಯ 58,835 ಮತಗಳಿಂದ ಜಯ ಗಳಿಸಿದ್ದರು. ತಮ್ಮ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಚುನಾವಣೆಯಲ್ಲಿ ಗೆಲ್ಲುವುದು ಅವರಿಗೆ ಅನಿವಾರ್ಯವಾಗಿತ್ತು. ಭಾನುವಾರ ಉಪಚುನಾವಣೆಯ ಫಲಿತಾಂಶ ಘೋಷಿಸಲಾಗಿತ್ತು.</p>.<p class="title">ಉಪಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಟಿಎಂಸಿ ಶಾಸಕರೂ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.</p>.<p class="title">‘ಚುನಾಯಿತ ಸದಸ್ಯರಾದ ಮಮತಾ ಬ್ಯಾನರ್ಜಿ, ಜಾಕಿರ್ ಹುಸೈನ್ ಮತ್ತು ಅಮಿರುಲ್ ಇಸ್ಲಾಮ್ ಅವರಿಗೆ ಅಕ್ಟೋಬರ್ 7 ರಂದು ಬೆಳಿಗ್ಗೆ 11.45 ಗಂಟೆಗೆ ಪ್ರಮಾಣವಚನ ಬೋಧಿಸಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.</p>.<p class="title">ಜಾಕಿರ್ ಹುಸೈನ್ ಜಂಗೀಪುರ ಕ್ಷೇತ್ರ ಮತ್ತು ಅಮಿರುಲ್ ಇಸ್ಲಾಂ ಅವರು ಸಂಸರ್ಗಂಜ್ ಕ್ಷೇತ್ರಗಳಿಂದ ಜಯ ಗಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>