<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕಸಿದುಕೊಳ್ಳಲು 90 ಲಕ್ಷಕ್ಕೂ ಹೆಚ್ಚು ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಬಿಜೆಪಿ ಅಳಿಸಿ ಹಾಕಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.ಮತದಾರರ ಪಟ್ಟಿಯಿಂದ ಹೆಸರು ಅಳಿಸಿದನ್ನು ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಮಮತಾ.<p>ಉತ್ತರ 24 ಪರಗಣ ಜಿಲ್ಲೆಯ ಮಿನಾಖಾನ್ನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಅಳಿಸಿ ಹಾಕಿರುವ ಎಲ್ಲರ ಹೆಸರನ್ನು ನ್ಯಾಯಾಲಯದ ಮೊರೆಹೋಗಿ ಟಿಎಂಸಿ ಮರು ಸೇರ್ಪಡೆ ಮಾಡಿಸಲಿದೆ’ ಎಂದರು.</p><p>ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಸುಮಾರು 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. </p><p>‘ಅಧಿಕಾರಕ್ಕೆ ಬರಲು ನೀವು ಎಸ್ಐಆರ್ ಮೂಲಕ 90 ಲಕ್ಷ ಮತದಾರರ ಹೆಸರು ತೆಗೆಸಿರಬಹುದು. ಆದರೆ, ಗೆಲುವು ನಮ್ಮದೇ’ ಎಂದಿದ್ದಾರೆ.</p><p>‘ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಭಾಷಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಬಂಗಾಳಿ ಮಾತನಾಡುವವರಿಗೆ ನುಸುಳುಕೋರರ ಪಟ್ಟ ಕಟ್ಟಲಾಗುತ್ತಿದೆ’ ಎಂದು ಮಮತಾ ಆರೋಪಿಸಿದ್ದಾರೆ.</p>.ಬಿಜೆಪಿ ಪಿತೂರಿಯ ಹೊರತಾಗಿಯೂ ಮಮತಾ ಬ್ಯಾನರ್ಜಿ ಗೆಲ್ಲುತ್ತಾರೆ: ಅಖಿಲೇಶ್ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕಸಿದುಕೊಳ್ಳಲು 90 ಲಕ್ಷಕ್ಕೂ ಹೆಚ್ಚು ಜನರ ಹೆಸರನ್ನು ಮತದಾರರ ಪಟ್ಟಿಯಿಂದ ಬಿಜೆಪಿ ಅಳಿಸಿ ಹಾಕಿಸಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.ಮತದಾರರ ಪಟ್ಟಿಯಿಂದ ಹೆಸರು ಅಳಿಸಿದನ್ನು ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಮಮತಾ.<p>ಉತ್ತರ 24 ಪರಗಣ ಜಿಲ್ಲೆಯ ಮಿನಾಖಾನ್ನಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಅಳಿಸಿ ಹಾಕಿರುವ ಎಲ್ಲರ ಹೆಸರನ್ನು ನ್ಯಾಯಾಲಯದ ಮೊರೆಹೋಗಿ ಟಿಎಂಸಿ ಮರು ಸೇರ್ಪಡೆ ಮಾಡಿಸಲಿದೆ’ ಎಂದರು.</p><p>ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಸುಮಾರು 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. </p><p>‘ಅಧಿಕಾರಕ್ಕೆ ಬರಲು ನೀವು ಎಸ್ಐಆರ್ ಮೂಲಕ 90 ಲಕ್ಷ ಮತದಾರರ ಹೆಸರು ತೆಗೆಸಿರಬಹುದು. ಆದರೆ, ಗೆಲುವು ನಮ್ಮದೇ’ ಎಂದಿದ್ದಾರೆ.</p><p>‘ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಭಾಷಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಬಂಗಾಳಿ ಮಾತನಾಡುವವರಿಗೆ ನುಸುಳುಕೋರರ ಪಟ್ಟ ಕಟ್ಟಲಾಗುತ್ತಿದೆ’ ಎಂದು ಮಮತಾ ಆರೋಪಿಸಿದ್ದಾರೆ.</p>.ಬಿಜೆಪಿ ಪಿತೂರಿಯ ಹೊರತಾಗಿಯೂ ಮಮತಾ ಬ್ಯಾನರ್ಜಿ ಗೆಲ್ಲುತ್ತಾರೆ: ಅಖಿಲೇಶ್ ಯಾದವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>