<p><strong>ಕೋಲ್ಕತ್ತ:</strong> ಚುನಾವಣಾ ಆಯೋಗವು ಬಿಜೆಪಿಯ ಆಣತಿಯಂತೆ ರಾಜ್ಯದ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದರು.</p>.<p>‘ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಅದಕ್ಕೆ ಆಯೋಗ ಮತ್ತು ಬಿಜೆಪಿಯೇ ಹೊಣೆ’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಆಡಳಿತಾತ್ಮಕ ಹುದ್ದೆಗಳ ಬದಲಾವಣೆಯ ಸಮಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಈದ್ ಮುನ್ನಾದಿನ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿದ್ದೇಕೆ? ಚುನಾವಣೆಗೂ ಮುನ್ನ ಗಲಭೆ ಎಬ್ಬಿಸುವ ಹುನ್ನಾರವೇ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿಗೆ ನೆರವು ನೀಡಲೆಂದೇ ರಾಜ್ಯದ ಹೊರಗಿನ ಅಧಿಕಾರಿಗಳನ್ನು ಕರೆತರಲಾಗಿದೆ. ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಅದು ನೇರವಾಗಿ ಬಿಜೆಪಿ ಪರ ಪ್ರಚಾರ ಮಾಡಲಿ’ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಚುನಾವಣಾ ಆಯೋಗವು ಬಿಜೆಪಿಯ ಆಣತಿಯಂತೆ ರಾಜ್ಯದ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಆರೋಪಿಸಿದರು.</p>.<p>‘ರಾಜ್ಯದಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಅದಕ್ಕೆ ಆಯೋಗ ಮತ್ತು ಬಿಜೆಪಿಯೇ ಹೊಣೆ’ ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖ ಆಡಳಿತಾತ್ಮಕ ಹುದ್ದೆಗಳ ಬದಲಾವಣೆಯ ಸಮಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>‘ಈದ್ ಮುನ್ನಾದಿನ ಹಿರಿಯ ಅಧಿಕಾರಿಗಳ ವರ್ಗಾವಣೆ ಮಾಡಿದ್ದೇಕೆ? ಚುನಾವಣೆಗೂ ಮುನ್ನ ಗಲಭೆ ಎಬ್ಬಿಸುವ ಹುನ್ನಾರವೇ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿಗೆ ನೆರವು ನೀಡಲೆಂದೇ ರಾಜ್ಯದ ಹೊರಗಿನ ಅಧಿಕಾರಿಗಳನ್ನು ಕರೆತರಲಾಗಿದೆ. ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಅದು ನೇರವಾಗಿ ಬಿಜೆಪಿ ಪರ ಪ್ರಚಾರ ಮಾಡಲಿ’ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>