<p><strong>ಕೋಲ್ಕತ್ತ</strong>: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಇಲ್ಲಿಯವರೆಗೆ ನಡೆಸಿದ ಎಸ್ಐಆರ್ ಪ್ರಕ್ರಿಯೆಯಲ್ಲಿ ‘ಭಾರಿ ತಪ್ಪು’ಗಳಾಗಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>ಇಲ್ಲಿನ ನೇತಾಜಿ ಒಳಾಂಗಣ ಸ್ಟೇಡಿಯಂನಲ್ಲಿ ಟಿಎಂಸಿಯ ಬೂತ್ ಮಟ್ಟದ ಏಜೆಂಟ್ಗಳ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಗಮನಕ್ಕೆ ತರದೆ ಚುನಾವಣಾ ಆಯೋಗವು ವೀಕ್ಷಕರನ್ನು ನೇಮಿಸುತ್ತಿದೆ. ಅದು ಬಿಜೆಪಿಯ ಹಿತಾಸಕ್ತಿಗಳನ್ನು ಪೋಷಿಸಲು, ಅದರ ನಿರ್ದೇಶನದಂತೆ ಮಾತ್ರ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. </p>.<p>‘ಎಸ್ಐಆರ್ ವಿಚಾರಣೆಗಳಿಗೆ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರದ ಅಧಿಕಾರಿಗಳಿಗೆ ಸ್ಥಳೀಯ ಭಾಷೆಯ ಬಗ್ಗೆ ಸರಿಯಾದ ಜ್ಞಾನವಿಲ್ಲ. ಈಗಾಗಲೇ ನಡೆಯುತ್ತಿರುವ ಪರಿಷ್ಕರಣಾ ಕಾರ್ಯದ ಎರಡನೇ ಹಂತದಲ್ಲಿ ಪರಿಶೀಲನೆಗಳನ್ನು ನಡೆಸಲು ಅವರು ಅನರ್ಹರು’ ಎಂದು ಮಮತಾ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಇಲ್ಲಿಯವರೆಗೆ ನಡೆಸಿದ ಎಸ್ಐಆರ್ ಪ್ರಕ್ರಿಯೆಯಲ್ಲಿ ‘ಭಾರಿ ತಪ್ಪು’ಗಳಾಗಿವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>ಇಲ್ಲಿನ ನೇತಾಜಿ ಒಳಾಂಗಣ ಸ್ಟೇಡಿಯಂನಲ್ಲಿ ಟಿಎಂಸಿಯ ಬೂತ್ ಮಟ್ಟದ ಏಜೆಂಟ್ಗಳ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ಗಮನಕ್ಕೆ ತರದೆ ಚುನಾವಣಾ ಆಯೋಗವು ವೀಕ್ಷಕರನ್ನು ನೇಮಿಸುತ್ತಿದೆ. ಅದು ಬಿಜೆಪಿಯ ಹಿತಾಸಕ್ತಿಗಳನ್ನು ಪೋಷಿಸಲು, ಅದರ ನಿರ್ದೇಶನದಂತೆ ಮಾತ್ರ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ. </p>.<p>‘ಎಸ್ಐಆರ್ ವಿಚಾರಣೆಗಳಿಗೆ ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರದ ಅಧಿಕಾರಿಗಳಿಗೆ ಸ್ಥಳೀಯ ಭಾಷೆಯ ಬಗ್ಗೆ ಸರಿಯಾದ ಜ್ಞಾನವಿಲ್ಲ. ಈಗಾಗಲೇ ನಡೆಯುತ್ತಿರುವ ಪರಿಷ್ಕರಣಾ ಕಾರ್ಯದ ಎರಡನೇ ಹಂತದಲ್ಲಿ ಪರಿಶೀಲನೆಗಳನ್ನು ನಡೆಸಲು ಅವರು ಅನರ್ಹರು’ ಎಂದು ಮಮತಾ ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>