<p><strong>ಕೋಲ್ಕತ್ತ</strong>: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಕಲ್ಪಿಸಲು ರಾಜ್ಯದ ಮತದಾರರ ಪಟ್ಟಿಯಿಂದ 63.66 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಮತದಾರರನ್ನು ಕೈಬಿಡುತ್ತಿರುವುದರ ಹಿಂದೆ ಚುನಾವಣಾ ಆಯೋಗ– ಬಿಜೆಪಿಯ ಹುನ್ನಾರವಿದೆ ಎಂದು ಸೋಮವಾರ ಇಲ್ಲಿ ಆರೋಪಿಸಿದರು.</p>.<p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಫೆ. 28ರಂದು ಆಯೋಗವು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ‘ಪಟ್ಟಿಯಿಂದ ಮತದಾರರ ಹೆಸರನ್ನು ಕೈಬಿಟ್ಟಿರುವುದು ಉದ್ದೇಶಪೂರ್ವಕ ಹಾಗೂ ಅಮಾನವೀಯ ಕೃತ್ಯ’ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>‘ಅರ್ಹತೆಯಿಂದ ಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ ಎಂಬ ಕಾರಣದಿಂದ ಟಿಎಂಸಿ ಬೆಂಬಲಿಗರನ್ನು ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತಾವು ಸ್ಪರ್ಧಿಸಲಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಮಲ ಪಾಳಯದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ’ ಎಂದೂ ಅವರು ಹೇಳಿದರು.</p>.<p><strong>ಎಸ್ಐಆರ್ನಿಂದ ಮಮತಾಗೆ ಆತಂಕ: ಅಮಿತ್ ಶಾ</strong></p><p><strong>ಮಥುರಾಪುರ</strong>: ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಳನುಸುಳುಕೋರರನ್ನು ಹೊರಹಾಕುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿ ಹೇಳಿದರು.</p><p>‘ಎಸ್ಐಆರ್ ಪ್ರಕ್ರಿಯೆ ಮೂಲಕ ಈಗಾಗಲೇ ಮತದಾರರ ಪಟ್ಟಿಯಿಂದ ಒಳನುಸುಳುಕೋರರನ್ನು ಹೊರಹಾಕಲಾಗಿದೆ. ಇದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಲ್ಲಿ ಆತಂಕ ಸೃಷ್ಟಿಸಿದೆ’ ಎಂದರು.</p><p>‘ಆಡಳಿತಾರೂಢ ಟಿಎಂಸಿಯು ಪಶ್ಚಿಮ ಬಂಗಾಳವನ್ನು ಒಳನುಸುಳುಕೋರರ ಪಾಲಿನ ಸ್ವರ್ಗವನ್ನಾಗಿ ಮಾಡಿದೆ’ ಎಂದು ದೂರಿದ ಕೇಂದ್ರ ಗೃಹ ಸಚಿವರು ‘ಗಡಿ ರಾಜ್ಯಕ್ಕೆ ಬಿಜೆಪಿ ಮಾತ್ರ ಭದ್ರತೆ ಒದಗಿಸಬಲ್ಲದು’ ಎಂದು ಹೇಳಿದರು.</p><p>‘ಬದಲಾವಣೆ ಎಂದರೆ... ಗಡಿಯ ಭದ್ರಪಡಿಸುವಿಕೆ ನೇಮಕಾತಿಯಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗೊಳಿಸುವುದು ಮಹಿಳೆಯರ ಸುರಕ್ಷತೆ’ ಎಂದು ಶಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲ ಕಲ್ಪಿಸಲು ರಾಜ್ಯದ ಮತದಾರರ ಪಟ್ಟಿಯಿಂದ 63.66 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂರಿದ್ದಾರೆ.</p>.<p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಮತದಾರರನ್ನು ಕೈಬಿಡುತ್ತಿರುವುದರ ಹಿಂದೆ ಚುನಾವಣಾ ಆಯೋಗ– ಬಿಜೆಪಿಯ ಹುನ್ನಾರವಿದೆ ಎಂದು ಸೋಮವಾರ ಇಲ್ಲಿ ಆರೋಪಿಸಿದರು.</p>.<p>ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಫೆ. 28ರಂದು ಆಯೋಗವು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದು, ‘ಪಟ್ಟಿಯಿಂದ ಮತದಾರರ ಹೆಸರನ್ನು ಕೈಬಿಟ್ಟಿರುವುದು ಉದ್ದೇಶಪೂರ್ವಕ ಹಾಗೂ ಅಮಾನವೀಯ ಕೃತ್ಯ’ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>‘ಅರ್ಹತೆಯಿಂದ ಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ ಎಂಬ ಕಾರಣದಿಂದ ಟಿಎಂಸಿ ಬೆಂಬಲಿಗರನ್ನು ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ತಾವು ಸ್ಪರ್ಧಿಸಲಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಮಲ ಪಾಳಯದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ’ ಎಂದೂ ಅವರು ಹೇಳಿದರು.</p>.<p><strong>ಎಸ್ಐಆರ್ನಿಂದ ಮಮತಾಗೆ ಆತಂಕ: ಅಮಿತ್ ಶಾ</strong></p><p><strong>ಮಥುರಾಪುರ</strong>: ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಒಳನುಸುಳುಕೋರರನ್ನು ಹೊರಹಾಕುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಲ್ಲಿ ಹೇಳಿದರು.</p><p>‘ಎಸ್ಐಆರ್ ಪ್ರಕ್ರಿಯೆ ಮೂಲಕ ಈಗಾಗಲೇ ಮತದಾರರ ಪಟ್ಟಿಯಿಂದ ಒಳನುಸುಳುಕೋರರನ್ನು ಹೊರಹಾಕಲಾಗಿದೆ. ಇದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಲ್ಲಿ ಆತಂಕ ಸೃಷ್ಟಿಸಿದೆ’ ಎಂದರು.</p><p>‘ಆಡಳಿತಾರೂಢ ಟಿಎಂಸಿಯು ಪಶ್ಚಿಮ ಬಂಗಾಳವನ್ನು ಒಳನುಸುಳುಕೋರರ ಪಾಲಿನ ಸ್ವರ್ಗವನ್ನಾಗಿ ಮಾಡಿದೆ’ ಎಂದು ದೂರಿದ ಕೇಂದ್ರ ಗೃಹ ಸಚಿವರು ‘ಗಡಿ ರಾಜ್ಯಕ್ಕೆ ಬಿಜೆಪಿ ಮಾತ್ರ ಭದ್ರತೆ ಒದಗಿಸಬಲ್ಲದು’ ಎಂದು ಹೇಳಿದರು.</p><p>‘ಬದಲಾವಣೆ ಎಂದರೆ... ಗಡಿಯ ಭದ್ರಪಡಿಸುವಿಕೆ ನೇಮಕಾತಿಯಲ್ಲಿನ ಭ್ರಷ್ಟಾಚಾರ ನಿರ್ಮೂಲನೆಗೊಳಿಸುವುದು ಮಹಿಳೆಯರ ಸುರಕ್ಷತೆ’ ಎಂದು ಶಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>