<p><strong>ಕೋಲ್ಕತ್ತ</strong>: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. ಇದು ಬಿಜೆಪಿಯ ಜಾತಿವಾದಿ ಹಾಗೂ ದಲಿತ ವಿರೋಧಿ ಮಾನಸಿಕತೆಯ ಪ್ರತೀಕ ಎಂದು ಹೇಳಿದ್ದಾರೆ.</p><p>ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ಪ್ರತಿಕ್ರಿಯೆ ನೀಡಿದ್ದಾರೆ.</p>.ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ: ಶಾಗೆ ಪತ್ರ ಬರೆದ ಸಿದ್ದರಾಮಯ್ಯ.<p>‘ಅಮಿತ್ ಶಾ ಅವರ ಹೇಳಿಕೆಯು ಆಕ್ಷೇಪಾರ್ಹ ಎಂದಿರುವ ಅವರು, ಅಂಬೇಡ್ಕರ್ ಅವರನ್ನು ಮಾರ್ಗದರ್ಶಕ ಹಾಗೂ ಸ್ಪೂರ್ತಿಯನ್ನಾಗಿಸಿಕೊಂಡ ಲಕ್ಷಾಂತರ ಜನರಿಗೆ ಮಾಡಿದ ಅವಮಾನ ಇದು’ ಎಂದಿದ್ದಾರೆ.</p><p>‘ಮುಖವಾಡ ಕಳಚಿ ಬಿದ್ದಿದೆ. ಸಂಸತ್ತು, ಭಾರತ ಸಂವಿಧಾನದ 75 ವರ್ಷಗಳ ವೈಭವಯುತ ಪ್ರಯಾಣದ ಬಗ್ಗೆ ಚರ್ಚೆ ಮಾಡುತ್ತಿರುವಾಗ, ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಆ ಸಂದರ್ಭವನ್ನು ಕಳಂಕಗೊಳಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಕಾಂಗ್ರೆಸ್ಗೆ ಸಂವಿಧಾನ ಒಂದು ಕುಟುಂಬದ 'ಖಾಸಗಿ ಆಸ್ತಿ': ಅಮಿತ್ ಶಾ.<p>‘ಇದು ಬಿಜೆಪಿಯ ಜಾತಿವಾದಿ ಹಾಗೂ ದಲಿತ ವಿರೋಧಿ ಮನಸ್ಥಿತಿಯ ಪ್ರತಿಫಲನ. 240 ಸೀಟುಗಳಿಗೆ ಇಳಿದ ಬಳಿಕ ಅವರ ನಡವಳಿಕೆ ಈ ರೀತಿ ಇದ್ದರೆ, ಒಂದು ವೇಳೆ 400 ಸೀಟುಗಳಲ್ಲಿ ಗೆಲವು ಸಾಧಿಸಿದ್ದರೆ ಹೇಗಿರುತ್ತಿತ್ತು. ಡಾ. ಅಂಬೇಡ್ಕರ್ ಅವರ ಕೊಡುಗೆಗಳನ್ನು ಅಳಿಸಿ ಹಾಕಲು ಅವರು ಇಡೀ ಇತಿಹಾಸವನ್ನೇ ತಿರುಚಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಆಂತರಿಕವಾಗಿ ದ್ವೇಷ ಹಾಗೂ ಧರ್ಮಾಂಧತೆ ತುಂಬಿರುವ ಪಕ್ಷದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.</p><p>‘ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದ ಪಿತಾಮಹ. ಈ ಅತಿರೇಕದ ಮಾತುಗಳು, ಅಂಬೇಡ್ಕರ್ ವಿರುದ್ಧದ ದಾಳಿ ಮಾತ್ರವಲ್ಲ, ಎಲ್ಲಾ ಧರ್ಮ, ಜಾತಿಯ ಸದಸ್ಯರಿದ್ದ ಸಂವಿಧಾನ ರಚನಾ ಸಮಿತಿಯ ಎಲ್ಲಾ ಸದಸ್ಯರ ಮೇಲಿನ ಆಕ್ರಮಣ’ ಎಂದು ಕಿಡಿ ಕಾರಿದ್ದಾರೆ.</p> .‘ಅಪ್ರಮಾಣಿಕ‘ರಿಂದ ಸಂವಿಧಾನಕ್ಕೆ ಅಪಚಾರ; ಕಾಂಗ್ರೆಸ್ ವಿರುದ್ಧ ನಡ್ಡಾ ವಾಗ್ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ. ಇದು ಬಿಜೆಪಿಯ ಜಾತಿವಾದಿ ಹಾಗೂ ದಲಿತ ವಿರೋಧಿ ಮಾನಸಿಕತೆಯ ಪ್ರತೀಕ ಎಂದು ಹೇಳಿದ್ದಾರೆ.</p><p>ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಅವರು ಪ್ರತಿಕ್ರಿಯೆ ನೀಡಿದ್ದಾರೆ.</p>.ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ: ಶಾಗೆ ಪತ್ರ ಬರೆದ ಸಿದ್ದರಾಮಯ್ಯ.<p>‘ಅಮಿತ್ ಶಾ ಅವರ ಹೇಳಿಕೆಯು ಆಕ್ಷೇಪಾರ್ಹ ಎಂದಿರುವ ಅವರು, ಅಂಬೇಡ್ಕರ್ ಅವರನ್ನು ಮಾರ್ಗದರ್ಶಕ ಹಾಗೂ ಸ್ಪೂರ್ತಿಯನ್ನಾಗಿಸಿಕೊಂಡ ಲಕ್ಷಾಂತರ ಜನರಿಗೆ ಮಾಡಿದ ಅವಮಾನ ಇದು’ ಎಂದಿದ್ದಾರೆ.</p><p>‘ಮುಖವಾಡ ಕಳಚಿ ಬಿದ್ದಿದೆ. ಸಂಸತ್ತು, ಭಾರತ ಸಂವಿಧಾನದ 75 ವರ್ಷಗಳ ವೈಭವಯುತ ಪ್ರಯಾಣದ ಬಗ್ಗೆ ಚರ್ಚೆ ಮಾಡುತ್ತಿರುವಾಗ, ಗೃಹ ಸಚಿವ ಅಮಿತ್ ಶಾ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಆ ಸಂದರ್ಭವನ್ನು ಕಳಂಕಗೊಳಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಕಾಂಗ್ರೆಸ್ಗೆ ಸಂವಿಧಾನ ಒಂದು ಕುಟುಂಬದ 'ಖಾಸಗಿ ಆಸ್ತಿ': ಅಮಿತ್ ಶಾ.<p>‘ಇದು ಬಿಜೆಪಿಯ ಜಾತಿವಾದಿ ಹಾಗೂ ದಲಿತ ವಿರೋಧಿ ಮನಸ್ಥಿತಿಯ ಪ್ರತಿಫಲನ. 240 ಸೀಟುಗಳಿಗೆ ಇಳಿದ ಬಳಿಕ ಅವರ ನಡವಳಿಕೆ ಈ ರೀತಿ ಇದ್ದರೆ, ಒಂದು ವೇಳೆ 400 ಸೀಟುಗಳಲ್ಲಿ ಗೆಲವು ಸಾಧಿಸಿದ್ದರೆ ಹೇಗಿರುತ್ತಿತ್ತು. ಡಾ. ಅಂಬೇಡ್ಕರ್ ಅವರ ಕೊಡುಗೆಗಳನ್ನು ಅಳಿಸಿ ಹಾಕಲು ಅವರು ಇಡೀ ಇತಿಹಾಸವನ್ನೇ ತಿರುಚಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಆಂತರಿಕವಾಗಿ ದ್ವೇಷ ಹಾಗೂ ಧರ್ಮಾಂಧತೆ ತುಂಬಿರುವ ಪಕ್ಷದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.</p><p>‘ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದ ಪಿತಾಮಹ. ಈ ಅತಿರೇಕದ ಮಾತುಗಳು, ಅಂಬೇಡ್ಕರ್ ವಿರುದ್ಧದ ದಾಳಿ ಮಾತ್ರವಲ್ಲ, ಎಲ್ಲಾ ಧರ್ಮ, ಜಾತಿಯ ಸದಸ್ಯರಿದ್ದ ಸಂವಿಧಾನ ರಚನಾ ಸಮಿತಿಯ ಎಲ್ಲಾ ಸದಸ್ಯರ ಮೇಲಿನ ಆಕ್ರಮಣ’ ಎಂದು ಕಿಡಿ ಕಾರಿದ್ದಾರೆ.</p> .‘ಅಪ್ರಮಾಣಿಕ‘ರಿಂದ ಸಂವಿಧಾನಕ್ಕೆ ಅಪಚಾರ; ಕಾಂಗ್ರೆಸ್ ವಿರುದ್ಧ ನಡ್ಡಾ ವಾಗ್ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>