<p><strong>ಕೋಲ್ಕತ್ತ:</strong> ವಿಧಾನಸಭೆ ಚುನಾವಣೆಗೂ ಮುನ್ನ ಎಸ್ಐಆರ್ ಮಾಡುವ ಮೂಲಕ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ನಾಗರಿಕರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಬಯಸುತ್ತಿದೆ. ಆದರೆ, ಅದಕ್ಕೆ ನಾವು ಬಿಡುವುದಿಲ್ಲ. ಕೊನೆಯವರೆಗೂ ಹೋರಾಟ ಮಾಡುತ್ತೇವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. </p><p>ಕೋಲ್ಕತ್ತದ ರೆಡ್ ರೋಡ್ನಲ್ಲಿ ರಂಜಾನ್ ಪ್ರಾರ್ಥನೆ ನಡೆದ ನಂತರ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. </p><p>ಬಂಗಾಳವನ್ನು ಗುರಿಯಾಗಿಸಿಕೊಂಡಿರುವ ಹಾಗೂ ಇಲ್ಲಿನ ಜನರನ್ನು ಬೇರ್ಪಡಿಸುವ ಪ್ರಯತ್ನ ಮಾಡುವವರು ನರಕಕ್ಕೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>‘ನಿಮ್ಮ ಮತದಾನದ ಹಕ್ಕನ್ನು ಮೋದಿಯವರಾಗಲಿ ಅಥವಾ ಬಿಜೆಪಿಯವರಾಗಲಿ ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಾಗರಿಕರ ಹಕ್ಕುಗಳನ್ನು ಕಾಪಾಡಲು ನಾವು ಕೊನೆಯವರೆಗೂ ಹೋರಾಟ ಮಾಡುತ್ತೇವೆ’ ಎಂದು ಹೇಳಿದ್ದಾರೆ. </p><p>ಎಸ್ಐಆರ್ ನೆಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕಿತ್ತುಹಾಕಲಾಗಿದೆ. ಇದು ಚುನಾವಣೆಯ ಮೇಲೆ ಪ್ರಭಾವ ಬೀರುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ. </p><p>ಬಂಗಾಳವು ಏಕತೆಯಲ್ಲಿ ನಂಬಿಕೆಯಿಟ್ಟುಕೊಂಡಿದೆ. ಇಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಒಟ್ಟಾಗಿ ಜೀವನ ನಡೆಸುತ್ತಿದ್ದಾರೆ. ಈ ಸಮಾಜವನ್ನು ಒಡೆಯಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. </p><p>ಪಶ್ಚಿಮ ಬಂಗಾಳ ವಿಧಾನಸಭೆಗೂ ಮುನ್ನ ಎಸ್ಐಆರ್ ನಡೆಸುತ್ತಿರುವುದರ ವಿರುದ್ಧ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವು ಮೊದಲಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ವಿಧಾನಸಭೆ ಚುನಾವಣೆಗೂ ಮುನ್ನ ಎಸ್ಐಆರ್ ಮಾಡುವ ಮೂಲಕ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ನಾಗರಿಕರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಬಯಸುತ್ತಿದೆ. ಆದರೆ, ಅದಕ್ಕೆ ನಾವು ಬಿಡುವುದಿಲ್ಲ. ಕೊನೆಯವರೆಗೂ ಹೋರಾಟ ಮಾಡುತ್ತೇವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. </p><p>ಕೋಲ್ಕತ್ತದ ರೆಡ್ ರೋಡ್ನಲ್ಲಿ ರಂಜಾನ್ ಪ್ರಾರ್ಥನೆ ನಡೆದ ನಂತರ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ. </p><p>ಬಂಗಾಳವನ್ನು ಗುರಿಯಾಗಿಸಿಕೊಂಡಿರುವ ಹಾಗೂ ಇಲ್ಲಿನ ಜನರನ್ನು ಬೇರ್ಪಡಿಸುವ ಪ್ರಯತ್ನ ಮಾಡುವವರು ನರಕಕ್ಕೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>‘ನಿಮ್ಮ ಮತದಾನದ ಹಕ್ಕನ್ನು ಮೋದಿಯವರಾಗಲಿ ಅಥವಾ ಬಿಜೆಪಿಯವರಾಗಲಿ ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ. ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಾಗರಿಕರ ಹಕ್ಕುಗಳನ್ನು ಕಾಪಾಡಲು ನಾವು ಕೊನೆಯವರೆಗೂ ಹೋರಾಟ ಮಾಡುತ್ತೇವೆ’ ಎಂದು ಹೇಳಿದ್ದಾರೆ. </p><p>ಎಸ್ಐಆರ್ ನೆಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕಿತ್ತುಹಾಕಲಾಗಿದೆ. ಇದು ಚುನಾವಣೆಯ ಮೇಲೆ ಪ್ರಭಾವ ಬೀರುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ. </p><p>ಬಂಗಾಳವು ಏಕತೆಯಲ್ಲಿ ನಂಬಿಕೆಯಿಟ್ಟುಕೊಂಡಿದೆ. ಇಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಒಟ್ಟಾಗಿ ಜೀವನ ನಡೆಸುತ್ತಿದ್ದಾರೆ. ಈ ಸಮಾಜವನ್ನು ಒಡೆಯಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ. </p><p>ಪಶ್ಚಿಮ ಬಂಗಾಳ ವಿಧಾನಸಭೆಗೂ ಮುನ್ನ ಎಸ್ಐಆರ್ ನಡೆಸುತ್ತಿರುವುದರ ವಿರುದ್ಧ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವು ಮೊದಲಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>