<p><strong>ಹೌರಾ:</strong> ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲು ಕೇಂದ್ರ ಸರ್ಕಾರ ವಿಫಲವಾಗಿರುವ ಬೆನ್ನಲ್ಲೇ ಬಿಜೆಪಿಯ ಅವನತಿ ಆರಂಭಗೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಟೀಕಿಸಿದರು. </p><p>ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ‘ನಾವು ಬಿಜೆಪಿಯನ್ನು ಸೋಲಿಸಿದ್ದೇವೆ. ಅವರಿಗೆ ಅವಮಾನ ಮಾಡಿದ್ದೇವೆ. ಅವರಿಗೆ ಬಹುಮತವಿಲ್ಲ. ಮಿತ್ರಪಕ್ಷಗಳ ಬೆಂಬಲದಿಂದ ಮಾತ್ರ ಅಧಿಕಾರದಲ್ಲಿ ಉಳಿದಿದ್ದಾರೆ’ ಎಂದು ಮಮತಾ ಹೇಳಿದರು.</p><p>‘ದೇಶವನ್ನು ವಿಭಜಿಸುವ ಉದ್ದೇಶದಿಂದ ಅವರು ಕ್ಷೇತ್ರ ಪುನರ್ವಿಂಗಡಣೆ ಮಾಡಲು ಬಯಸಿದ್ದರು. ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲು ಮಸೂದೆಯ ಅಗತ್ಯವಿಲ್ಲ’ ಎಂದರು. </p><p>‘ನಮ್ಮ ಪಕ್ಷದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿದೆ. ಟಿಎಂಸಿಯ ಶೇಕಡ ಶೇ 36ರಷ್ಟು ಮಹಿಳಾ ಸಂಸದರು ಲೋಕಸಭೆಯಲ್ಲಿ ಮತ್ತು ಶೇ 46ರಷ್ಟು ಮಹಿಳಾ ಸಂಸದರು ರಾಜ್ಯಸಭೆಯಲ್ಲಿದ್ದಾರೆ. ಬಿಜೆಪಿ ನಮ್ಮನ್ನು ನೋಡಿ ಕಲಿಯಲಿ. 1998ರಿಂದಲೇ ನಾನು ಮಹಿಳಾ ಮೀಸಲಾತಿಗಾಗಿ ಹೋರಾಡುತ್ತಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೌರಾ:</strong> ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಪಡೆಯಲು ಕೇಂದ್ರ ಸರ್ಕಾರ ವಿಫಲವಾಗಿರುವ ಬೆನ್ನಲ್ಲೇ ಬಿಜೆಪಿಯ ಅವನತಿ ಆರಂಭಗೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಟೀಕಿಸಿದರು. </p><p>ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ‘ನಾವು ಬಿಜೆಪಿಯನ್ನು ಸೋಲಿಸಿದ್ದೇವೆ. ಅವರಿಗೆ ಅವಮಾನ ಮಾಡಿದ್ದೇವೆ. ಅವರಿಗೆ ಬಹುಮತವಿಲ್ಲ. ಮಿತ್ರಪಕ್ಷಗಳ ಬೆಂಬಲದಿಂದ ಮಾತ್ರ ಅಧಿಕಾರದಲ್ಲಿ ಉಳಿದಿದ್ದಾರೆ’ ಎಂದು ಮಮತಾ ಹೇಳಿದರು.</p><p>‘ದೇಶವನ್ನು ವಿಭಜಿಸುವ ಉದ್ದೇಶದಿಂದ ಅವರು ಕ್ಷೇತ್ರ ಪುನರ್ವಿಂಗಡಣೆ ಮಾಡಲು ಬಯಸಿದ್ದರು. ಮಹಿಳೆಯರಿಗೆ ಪ್ರಾತಿನಿಧ್ಯ ನೀಡಲು ಮಸೂದೆಯ ಅಗತ್ಯವಿಲ್ಲ’ ಎಂದರು. </p><p>‘ನಮ್ಮ ಪಕ್ಷದಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಿದೆ. ಟಿಎಂಸಿಯ ಶೇಕಡ ಶೇ 36ರಷ್ಟು ಮಹಿಳಾ ಸಂಸದರು ಲೋಕಸಭೆಯಲ್ಲಿ ಮತ್ತು ಶೇ 46ರಷ್ಟು ಮಹಿಳಾ ಸಂಸದರು ರಾಜ್ಯಸಭೆಯಲ್ಲಿದ್ದಾರೆ. ಬಿಜೆಪಿ ನಮ್ಮನ್ನು ನೋಡಿ ಕಲಿಯಲಿ. 1998ರಿಂದಲೇ ನಾನು ಮಹಿಳಾ ಮೀಸಲಾತಿಗಾಗಿ ಹೋರಾಡುತ್ತಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>