<p><strong>ಕೋಲ್ಕತ್ತ</strong>: ಕ್ರಿಮಿನಲ್ ಆರೋಪದ ಮೇಲೆ ಬಂಧಿತರಾದ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಮಂತ್ರಿಗಳನ್ನು ಪದಚ್ಯುತಗೊಳಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಖಂಡಿಸಿದ್ದಾರೆ. ಇದು ಭಾರತದಲ್ಲಿ ಪ್ರಜಾಪ್ರಭುತ್ವ ಯುಗವನ್ನು ಶಾಶ್ವತವಾಗಿ ಕೊನೆಗೊಳಿಸುತ್ತದೆ ಎಂದು ಆರೋಪಿಸಿದ್ದಾರೆ.</p><p>ಈ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಿದ್ದುಪಡಿ ಮಸೂದೆಯು ತುರ್ತು ಪರಿಸ್ಥಿತಿಗಿಂತ ದೊಡ್ಡದಾಗಿದೆ ಮತ್ತು ದೇಶದ ನ್ಯಾಯಾಂಗದ ಸ್ವಾತಂತ್ರ್ಯವನ್ನು ಅಂತ್ಯಗೊಳಿಸುತ್ತದೆ ಎಂದು ಹೇಳಿದ್ದಾರೆ.</p><p>ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಮಂತ್ರಿಗಳನ್ನು 30 ದಿನಗಳ ಕಾಲ ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಳಿಕ, ಈ ಕರಡು ಮಸೂದೆಗಳನ್ನು ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸಲಾಗಿದೆ.</p><p>‘130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ನಾನು ಖಂಡಿಸುತ್ತೇನೆ. ಇದು ತುರ್ತು ಪರಿಸ್ಥಿತಿಯನ್ನೂ ಮೀರಿದ್ದಾಗಿದೆ. ಭಾರತದ ಪ್ರಜಾಪ್ರಭುತ್ವ ಯುಗವನ್ನು ಶಾಶ್ವತವಾಗಿ ಕೊನೆಗೊಳಿಸುವ ಒಂದು ಹೆಜ್ಜೆಯಾಗಿದೆ ಎಂದು ನಾನು ಖಂಡಿಸುತ್ತೇನೆ. ಈ ಕಠಿಣ ಹೆಜ್ಜೆ ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ಅಂತ್ಯಕಾಲವಾಗಿದೆ’ ಎಂದಿದ್ದಾರೆ.</p><p>ಪ್ರಜಾಪ್ರಭುತ್ವವನ್ನು ಉಳಿಸಲು ಯಾವುದೇ ಬೆಲೆ ತೆತ್ತಾದರೂ ಮಸೂದೆಯನ್ನು ವಿರೋಧಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p><p>'ಈ ಮಸೂದೆಯನ್ನು ಜನಾದೇಶದ ಮೇಲೆ ಹಸ್ತಕ್ಷೇಪ ಮಾಡಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಸಂಸ್ಥೆಗಳ ಚುನಾಯಿತವಲ್ಲದ ಅಧಿಕಾರಿಗಳಿಗೆ ಚುನಾಯಿತ ರಾಜ್ಯ ಸರ್ಕಾರಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡಲು ವ್ಯಾಪಕ ಅಧಿಕಾರವನ್ನು ಹಸ್ತಾಂತರಿಸಲು ಕೇಂದ್ರ ಸರ್ಕಾರವನ್ನು ಸಬಲೀಕರಣಗೊಳಿಸಲು ರಚಿಸಲಾಗಿದೆ’ಎಂದು ಮಮತಾ ದೂರಿದ್ದಾರೆ.</p><p>ನಮ್ಮ ಸಂವಿಧಾನದ ಮೂಲ ತತ್ವಗಳನ್ನು ಬಲಿಕೊಟ್ಟು ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರಿಗೆ ದುಷ್ಟ ಮಾರ್ಗದಲ್ಲಿ ಅಧಿಕಾರ ನೀಡುವ ಒಂದು ಹೆಜ್ಜೆ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ಅವರ ನ್ಯಾಯಾಲಯಗಳು, ಅವರ ಹಕ್ಕುಗಳು ಮತ್ತು ಅವರ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಜನರು ಕ್ಷಮಿಸುವುದಿಲ್ಲ’ಎಂದಿದ್ದಾರೆ.</p><p>'ಒಬ್ಬ ವ್ಯಕ್ತಿ, ಒಂದು ಪಕ್ಷ, ಒಂದು ಸರ್ಕಾರ' ಎಂಬ ವ್ಯವಸ್ಥೆಯನ್ನು ರೂಪಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಕ್ರಿಮಿನಲ್ ಆರೋಪದ ಮೇಲೆ ಬಂಧಿತರಾದ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಮಂತ್ರಿಗಳನ್ನು ಪದಚ್ಯುತಗೊಳಿಸುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಖಂಡಿಸಿದ್ದಾರೆ. ಇದು ಭಾರತದಲ್ಲಿ ಪ್ರಜಾಪ್ರಭುತ್ವ ಯುಗವನ್ನು ಶಾಶ್ವತವಾಗಿ ಕೊನೆಗೊಳಿಸುತ್ತದೆ ಎಂದು ಆರೋಪಿಸಿದ್ದಾರೆ.</p><p>ಈ ಕುರಿತಂತೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ತಿದ್ದುಪಡಿ ಮಸೂದೆಯು ತುರ್ತು ಪರಿಸ್ಥಿತಿಗಿಂತ ದೊಡ್ಡದಾಗಿದೆ ಮತ್ತು ದೇಶದ ನ್ಯಾಯಾಂಗದ ಸ್ವಾತಂತ್ರ್ಯವನ್ನು ಅಂತ್ಯಗೊಳಿಸುತ್ತದೆ ಎಂದು ಹೇಳಿದ್ದಾರೆ.</p><p>ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಮಂತ್ರಿಗಳನ್ನು 30 ದಿನಗಳ ಕಾಲ ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಕೇಂದ್ರ ಸಚಿವ ಅಮಿತ್ ಶಾ ಬುಧವಾರ ಲೋಕಸಭೆಯಲ್ಲಿ ಮಂಡಿಸಿದ್ದು, ಇದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಳಿಕ, ಈ ಕರಡು ಮಸೂದೆಗಳನ್ನು ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸಲಾಗಿದೆ.</p><p>‘130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ನಾನು ಖಂಡಿಸುತ್ತೇನೆ. ಇದು ತುರ್ತು ಪರಿಸ್ಥಿತಿಯನ್ನೂ ಮೀರಿದ್ದಾಗಿದೆ. ಭಾರತದ ಪ್ರಜಾಪ್ರಭುತ್ವ ಯುಗವನ್ನು ಶಾಶ್ವತವಾಗಿ ಕೊನೆಗೊಳಿಸುವ ಒಂದು ಹೆಜ್ಜೆಯಾಗಿದೆ ಎಂದು ನಾನು ಖಂಡಿಸುತ್ತೇನೆ. ಈ ಕಠಿಣ ಹೆಜ್ಜೆ ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ಅಂತ್ಯಕಾಲವಾಗಿದೆ’ ಎಂದಿದ್ದಾರೆ.</p><p>ಪ್ರಜಾಪ್ರಭುತ್ವವನ್ನು ಉಳಿಸಲು ಯಾವುದೇ ಬೆಲೆ ತೆತ್ತಾದರೂ ಮಸೂದೆಯನ್ನು ವಿರೋಧಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p><p>'ಈ ಮಸೂದೆಯನ್ನು ಜನಾದೇಶದ ಮೇಲೆ ಹಸ್ತಕ್ಷೇಪ ಮಾಡಲು ಜಾರಿ ನಿರ್ದೇಶನಾಲಯ ಮತ್ತು ಸಿಬಿಐನಂತಹ ಸಂಸ್ಥೆಗಳ ಚುನಾಯಿತವಲ್ಲದ ಅಧಿಕಾರಿಗಳಿಗೆ ಚುನಾಯಿತ ರಾಜ್ಯ ಸರ್ಕಾರಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡಲು ವ್ಯಾಪಕ ಅಧಿಕಾರವನ್ನು ಹಸ್ತಾಂತರಿಸಲು ಕೇಂದ್ರ ಸರ್ಕಾರವನ್ನು ಸಬಲೀಕರಣಗೊಳಿಸಲು ರಚಿಸಲಾಗಿದೆ’ಎಂದು ಮಮತಾ ದೂರಿದ್ದಾರೆ.</p><p>ನಮ್ಮ ಸಂವಿಧಾನದ ಮೂಲ ತತ್ವಗಳನ್ನು ಬಲಿಕೊಟ್ಟು ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರಿಗೆ ದುಷ್ಟ ಮಾರ್ಗದಲ್ಲಿ ಅಧಿಕಾರ ನೀಡುವ ಒಂದು ಹೆಜ್ಜೆ ಇದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>‘ಅವರ ನ್ಯಾಯಾಲಯಗಳು, ಅವರ ಹಕ್ಕುಗಳು ಮತ್ತು ಅವರ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಜನರು ಕ್ಷಮಿಸುವುದಿಲ್ಲ’ಎಂದಿದ್ದಾರೆ.</p><p>'ಒಬ್ಬ ವ್ಯಕ್ತಿ, ಒಂದು ಪಕ್ಷ, ಒಂದು ಸರ್ಕಾರ' ಎಂಬ ವ್ಯವಸ್ಥೆಯನ್ನು ರೂಪಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>