<p><strong>ಕೋಲ್ಕತ್ತಾ:</strong> ‘ಮಹಿಳಾ ಮೀಸಲು ಮಸೂದೆಯನ್ನು ಪ್ರಧಾನಿ ದೇಶವನ್ನು ದಾರಿ ತಪ್ಪಿಸಲು ಆಯ್ಕೆ ಮಾಡಿಕೊಂಡಿದ್ದು ತೀವ್ರ ದುರದೃಷ್ಟಕರ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. </p><p>‘ಮಹಿಳಾ ಮೀಸಲಾತಿ ಕಾನೂನು ಜಾರಿ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಕೇಂದ್ರ ಸರ್ಕಾರ ಮಹಿಳೆಯರನ್ನು ಗುರಾಣಿಯಂತೆ ಬಳಸಿದೆ’ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಮಸೂದೆಗೆ ಸೋಲಾಗುತ್ತಿದ್ದಂತೆ ವಾಗ್ದಾಳಿ ನಡೆಸಿದ್ದ ಪ್ರಧಾನಿ, ’ಭ್ರೂಣಹತ್ಯೆಯ ಪಾಪ’ಕ್ಕಾಗಿ ದೇಶದ ಮಹಿಳೆಯರು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳನ್ನು ಕಠಿಣವಾಗಿ ಶಿಕ್ಷಿಸಲಿದ್ದಾರೆ ಎಂದಿದ್ದರು. </p><p>ಇದಕ್ಕೆ ತಿರುಗೇಟು ನೀಡಿರುವ ಮಮತಾ, ‘ ‘ತೃಣಮೂಲ ಕಾಂಗ್ರೆಸ್ ಯಾವತ್ತೂ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುತ್ತಾ ಬಂದಿದೆ. ಲೋಕಸಭೆಯಲ್ಲಿ ಟಿಎಂಸಿ ಸದಸ್ಯರಲ್ಲಿ ಮಹಿಳೆಯರು ಶೇ 37.9ರಷ್ಟಿದ್ದರೆ, ರಾಜ್ಯಸಭೆಯಲ್ಲಿ ಶೇ 46ರಷ್ಟಿದ್ದಾರೆ. ಬಿಜೆಪಿಯು ತನ್ನ ಸ್ಥಾಪಿತ ರಾಜಕೀಯ ಕಾರ್ಯಸೂಚಿಗೆ ಗುರಾಣಿಯಾಗಿ ಮಹಿಳೆಯರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.</p>.ಕ್ಷೇತ್ರ ಮರುವಿಂಗಡಣೆ ಚಿತಾವಣಿಯಲ್ಲಿ ಮಹಿಳಾ ಮೀಸಲು ಕಾನೂನಿಗೆ ತಿದ್ದುಪಡಿ: ಮಮತಾ.ಟಿಎಂಸಿ ಸೋಲಿಸಲು ಬಿಜೆಪಿಯಿಂದ ₹1000 ಕೋಟಿ ಒಳಒಪ್ಪಂದ: ಮಮತಾ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತಾ:</strong> ‘ಮಹಿಳಾ ಮೀಸಲು ಮಸೂದೆಯನ್ನು ಪ್ರಧಾನಿ ದೇಶವನ್ನು ದಾರಿ ತಪ್ಪಿಸಲು ಆಯ್ಕೆ ಮಾಡಿಕೊಂಡಿದ್ದು ತೀವ್ರ ದುರದೃಷ್ಟಕರ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ. </p><p>‘ಮಹಿಳಾ ಮೀಸಲಾತಿ ಕಾನೂನು ಜಾರಿ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಕೇಂದ್ರ ಸರ್ಕಾರ ಮಹಿಳೆಯರನ್ನು ಗುರಾಣಿಯಂತೆ ಬಳಸಿದೆ’ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. </p><p>ಮಸೂದೆಗೆ ಸೋಲಾಗುತ್ತಿದ್ದಂತೆ ವಾಗ್ದಾಳಿ ನಡೆಸಿದ್ದ ಪ್ರಧಾನಿ, ’ಭ್ರೂಣಹತ್ಯೆಯ ಪಾಪ’ಕ್ಕಾಗಿ ದೇಶದ ಮಹಿಳೆಯರು ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳನ್ನು ಕಠಿಣವಾಗಿ ಶಿಕ್ಷಿಸಲಿದ್ದಾರೆ ಎಂದಿದ್ದರು. </p><p>ಇದಕ್ಕೆ ತಿರುಗೇಟು ನೀಡಿರುವ ಮಮತಾ, ‘ ‘ತೃಣಮೂಲ ಕಾಂಗ್ರೆಸ್ ಯಾವತ್ತೂ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸುತ್ತಾ ಬಂದಿದೆ. ಲೋಕಸಭೆಯಲ್ಲಿ ಟಿಎಂಸಿ ಸದಸ್ಯರಲ್ಲಿ ಮಹಿಳೆಯರು ಶೇ 37.9ರಷ್ಟಿದ್ದರೆ, ರಾಜ್ಯಸಭೆಯಲ್ಲಿ ಶೇ 46ರಷ್ಟಿದ್ದಾರೆ. ಬಿಜೆಪಿಯು ತನ್ನ ಸ್ಥಾಪಿತ ರಾಜಕೀಯ ಕಾರ್ಯಸೂಚಿಗೆ ಗುರಾಣಿಯಾಗಿ ಮಹಿಳೆಯರನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.</p>.ಕ್ಷೇತ್ರ ಮರುವಿಂಗಡಣೆ ಚಿತಾವಣಿಯಲ್ಲಿ ಮಹಿಳಾ ಮೀಸಲು ಕಾನೂನಿಗೆ ತಿದ್ದುಪಡಿ: ಮಮತಾ.ಟಿಎಂಸಿ ಸೋಲಿಸಲು ಬಿಜೆಪಿಯಿಂದ ₹1000 ಕೋಟಿ ಒಳಒಪ್ಪಂದ: ಮಮತಾ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>