<p><strong>ಕೋಲ್ಕತ್ತ</strong>: ದುರ್ಗಾ ಪೂಜೆಗೆ ಸರ್ಕಾರದಿಂದ ₹1.1 ಲಕ್ಷ ಅನುದಾನ ಘೋಷಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಅಭಿವೃದ್ಧಿ ಬಿಟ್ಟು ಧರ್ಮ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದೆ.</p><p>ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಾಸಕಿ ಅಗ್ನಿಮಿತ್ರ ಪೌಲ್, ‘ಅಭಿವೃದ್ಧಿಯನ್ನು ಕಡೆಗಣಿಸಿ ಜನರಿಗೆ ಕೊಡುಗೆಗಳನ್ನು ಕೊಡುವುದರಲ್ಲಿಯೇ ಮಮತಾ ನೇತೃತ್ವದ ರಾಜ್ಯ ಸರ್ಕಾರ ನಿರತವಾಗಿದೆ’ ಎಂದು ದೂರಿದ್ದಾರೆ.</p><p>‘ದೇವಾಲಯಗಳನ್ನು ನಿರ್ಮಿಸುವುದು, ಪೂಜಾ ಕಾರ್ಯಕ್ಕೆ ಅನುದಾನ ನೀಡುವುದು ಸರ್ಕಾರದ ಉದ್ದೇಶವಾಗಬಾರದು’ ಎಂದು ಹೇಳಿದ್ದಾರೆ.</p><p>‘ಸರ್ಕಾರ ತನ್ನ ಆದ್ಯತೆಗಳನ್ನು ಬದಲಾಯಿಸುತ್ತಿದೆ ಎಂದು ಇದು ತೋರಿಸುತ್ತದೆ. ರಸ್ತೆಗಳನ್ನು ನಿರ್ಮಿಸುವ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬದಲು ಮಮತಾ ಬ್ಯಾನರ್ಜಿ ಧರ್ಮದ ರಾಜಕೀಯದಲ್ಲಿ ನಿರತರಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ.</p><p>'ನಮ್ಮ ಪಕ್ಷವು ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಪ್ರತಿಯೊಬ್ಬ ಭಾರತೀಯ ನಾಗರಿಕನನ್ನೂ ಅವರ ಧರ್ಮವನ್ನು ಲೆಕ್ಕಿಸದೆ ಉನ್ನತೀಕರಿಸುವ ಪರವಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ದುರ್ಗಾ ಪೂಜೆಗೆ ಸರ್ಕಾರದಿಂದ ₹1.1 ಲಕ್ಷ ಅನುದಾನ ಘೋಷಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಅಭಿವೃದ್ಧಿ ಬಿಟ್ಟು ಧರ್ಮ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದೆ.</p><p>ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಾಸಕಿ ಅಗ್ನಿಮಿತ್ರ ಪೌಲ್, ‘ಅಭಿವೃದ್ಧಿಯನ್ನು ಕಡೆಗಣಿಸಿ ಜನರಿಗೆ ಕೊಡುಗೆಗಳನ್ನು ಕೊಡುವುದರಲ್ಲಿಯೇ ಮಮತಾ ನೇತೃತ್ವದ ರಾಜ್ಯ ಸರ್ಕಾರ ನಿರತವಾಗಿದೆ’ ಎಂದು ದೂರಿದ್ದಾರೆ.</p><p>‘ದೇವಾಲಯಗಳನ್ನು ನಿರ್ಮಿಸುವುದು, ಪೂಜಾ ಕಾರ್ಯಕ್ಕೆ ಅನುದಾನ ನೀಡುವುದು ಸರ್ಕಾರದ ಉದ್ದೇಶವಾಗಬಾರದು’ ಎಂದು ಹೇಳಿದ್ದಾರೆ.</p><p>‘ಸರ್ಕಾರ ತನ್ನ ಆದ್ಯತೆಗಳನ್ನು ಬದಲಾಯಿಸುತ್ತಿದೆ ಎಂದು ಇದು ತೋರಿಸುತ್ತದೆ. ರಸ್ತೆಗಳನ್ನು ನಿರ್ಮಿಸುವ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬದಲು ಮಮತಾ ಬ್ಯಾನರ್ಜಿ ಧರ್ಮದ ರಾಜಕೀಯದಲ್ಲಿ ನಿರತರಾಗಿದ್ದಾರೆ’ ಎಂದು ಕಿಡಿಕಾರಿದ್ದಾರೆ.</p><p>'ನಮ್ಮ ಪಕ್ಷವು ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿಪಡಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಪ್ರತಿಯೊಬ್ಬ ಭಾರತೀಯ ನಾಗರಿಕನನ್ನೂ ಅವರ ಧರ್ಮವನ್ನು ಲೆಕ್ಕಿಸದೆ ಉನ್ನತೀಕರಿಸುವ ಪರವಾಗಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>