<p><strong>ಕೋಲ್ಕತ್ತ:</strong> ಚುನಾವಣೋತ್ತರ ಹಿಂಸಾಚಾರ ತಡೆಯಲು ವಿಫಲರಾಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರೋಮ್ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸುವ ಹಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.</p>.<p>ಖೇಜುರಿ, ನಂದಿಗ್ರಾಮ, ಪುರ್ಬಾ ಮೇದಿನಿಪುರ ಜಿಲ್ಲೆ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಶಾಮೀಲಾದವರ ಬಂಧನಕ್ಕೆ ಮಮತಾ ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಅವರು ಆರೋಪಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/centre-denies-bengal-cm-mamata-banerjee-permission-to-take-part-in-peace-conference-in-italy-869854.html" itemprop="url">ರೋಮ್ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಮೋದಿ ನನಗೆ ಅನುಮತಿ ನೀಡಲಿಲ್ಲ: ಮಮತಾ</a></p>.<p>‘ನೀವು ಶಾಂತಿ ಸಭೆಯಲ್ಲಿ ಭಾಗವಹಿಸಲು ಅರ್ಹರಲ್ಲ. ನಮ್ಮ (ಬಿಜೆಪಿ) ಕಾರ್ಯಕರ್ತರ ಮೇಲೆ ದಾಳಿ ಮಾಡಿದವರಿಗೆ ಮತ್ತು ಟಿಎಂಸಿ ಕಾರ್ಯಕರ್ತರ ಹಿಂಸಾತ್ಮಕ ಕೃತ್ಯಗಳಿಗೆ ನೀವು ಕುಮ್ಮಕ್ಕು ನೀಡಿದ್ದೀರಿ’ ಎಂದು ಅಧಿಕಾರಿ ಮಮತಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.</p>.<p>ರೋಮ್ನಲ್ಲಿ ನಡೆಯಲಿರುವ ವಿಶ್ವ ಶಾಂತಿಯ ಕುರಿತ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ನನಗೆ ಅನುಮತಿ ನಿರಾಕರಿಸಿದೆ ಎಂದು ಮಮತಾ ಬ್ಯಾನರ್ಜಿ ಇತ್ತೀಚೆಗೆ ಆರೋಪಿಸಿದ್ದರು. ಮುಖ್ಯಮಂತ್ರಿಯೊಬ್ಬರಿಗೆ ಹೀಗೆ ಮಾಡಿದ್ದು ಸರಿಯಲ್ಲ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಚುನಾವಣೋತ್ತರ ಹಿಂಸಾಚಾರ ತಡೆಯಲು ವಿಫಲರಾಗಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರೋಮ್ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸುವ ಹಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.</p>.<p>ಖೇಜುರಿ, ನಂದಿಗ್ರಾಮ, ಪುರ್ಬಾ ಮೇದಿನಿಪುರ ಜಿಲ್ಲೆ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಶಾಮೀಲಾದವರ ಬಂಧನಕ್ಕೆ ಮಮತಾ ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಅವರು ಆರೋಪಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/centre-denies-bengal-cm-mamata-banerjee-permission-to-take-part-in-peace-conference-in-italy-869854.html" itemprop="url">ರೋಮ್ನ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಮೋದಿ ನನಗೆ ಅನುಮತಿ ನೀಡಲಿಲ್ಲ: ಮಮತಾ</a></p>.<p>‘ನೀವು ಶಾಂತಿ ಸಭೆಯಲ್ಲಿ ಭಾಗವಹಿಸಲು ಅರ್ಹರಲ್ಲ. ನಮ್ಮ (ಬಿಜೆಪಿ) ಕಾರ್ಯಕರ್ತರ ಮೇಲೆ ದಾಳಿ ಮಾಡಿದವರಿಗೆ ಮತ್ತು ಟಿಎಂಸಿ ಕಾರ್ಯಕರ್ತರ ಹಿಂಸಾತ್ಮಕ ಕೃತ್ಯಗಳಿಗೆ ನೀವು ಕುಮ್ಮಕ್ಕು ನೀಡಿದ್ದೀರಿ’ ಎಂದು ಅಧಿಕಾರಿ ಮಮತಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.</p>.<p>ರೋಮ್ನಲ್ಲಿ ನಡೆಯಲಿರುವ ವಿಶ್ವ ಶಾಂತಿಯ ಕುರಿತ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸರ್ಕಾರ ನನಗೆ ಅನುಮತಿ ನಿರಾಕರಿಸಿದೆ ಎಂದು ಮಮತಾ ಬ್ಯಾನರ್ಜಿ ಇತ್ತೀಚೆಗೆ ಆರೋಪಿಸಿದ್ದರು. ಮುಖ್ಯಮಂತ್ರಿಯೊಬ್ಬರಿಗೆ ಹೀಗೆ ಮಾಡಿದ್ದು ಸರಿಯಲ್ಲ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>