<p><strong>ಕೋಲ್ಕತ್ತ:</strong> ‘ಜಿಎಸ್ಟಿ ದರಗಳನ್ನು ಕಡಿಮೆ ಮಾಡುವ ಕ್ರಮಗಳಿಗೆ ಚಾಲನೆ ನೀಡಿದ್ದೇ ಪಶ್ಚಿಮ ಬಂಗಾಳ. ದರಗಳನ್ನು ಈಗ ಕಡಿಮೆ ಮಾಡಲಾಗಿದ್ದು, ಅನಗತ್ಯವಾಗಿ ಇದರ ಶ್ರೇಯವನ್ನು ಕೇಂದ್ರ ಸರ್ಕಾರ ತಾನು ತೆಗೆದುಕೊಳ್ಳುತ್ತಿದೆ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಟೀಕಿಸಿದ್ದಾರೆ.</p>.<p>ಜಿಎಸ್ಟಿ ದರ ಕಡಿಮೆಯಾಗಿರುವ ಪ್ರಯುಕ್ತ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ರಾಜ್ಯವು ತನ್ನ ಪಾಲಿನ ರಾಜಸ್ವ ಆದಾಯದಲ್ಲಿ ₹20 ಸಾವಿರ ಕೋಟಿ ಕಳೆದುಕೊಳ್ಳಲಿದ್ದರೂ, ಜಿಎಸ್ಟಿ ದರಗಳಲ್ಲಿ ಕಡಿತವಾಗಿರುವುದಕ್ಕೆ ನಮಗೆ ಸಂತಸವಿದೆ. ಈ ದರಗಳನ್ನು ಕಡಿಮೆ ಮಾಡಬೇಕು ಎಂದು ನಾವೇ ಮನವಿ ಮಾಡಿದ್ದೆವು. ಜಿಎಸ್ಟಿ ಮಂಡಳಿ ಸಭೆಗಳಲ್ಲಿಯೂ ಈ ಕುರಿತು ಸಲಹೆಗಳನ್ನೂ ನೀಡಿದ್ದೆವು. ಆದರೆ, ನೀವು ಏಕೆ ಇದರ ಶ್ರೇಯ ತೆಗೆದುಕೊಳ್ಳುತ್ತಿದ್ದೀರಿ’ ಎಂದು ಮೋದಿ ಅವರ ಹೆಸರು ಉಲ್ಲೇಖಿಸದೇ ಅವರು ಕುಟುಕಿದ್ದಾರೆ.</p>.<div><blockquote>ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಂಬಂಧಿಸಿದ ಅನುದಾನವನ್ನು ಮೋದಿ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿಲ್ಲ. ಭಾಷಣ ಮಾಡುವುದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಕೇಂದ್ರ ಸರ್ಕಾರ ಮಾಡುತ್ತಿಲ್ಲ </blockquote><span class="attribution">ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಜಿಎಸ್ಟಿ ದರಗಳನ್ನು ಕಡಿಮೆ ಮಾಡುವ ಕ್ರಮಗಳಿಗೆ ಚಾಲನೆ ನೀಡಿದ್ದೇ ಪಶ್ಚಿಮ ಬಂಗಾಳ. ದರಗಳನ್ನು ಈಗ ಕಡಿಮೆ ಮಾಡಲಾಗಿದ್ದು, ಅನಗತ್ಯವಾಗಿ ಇದರ ಶ್ರೇಯವನ್ನು ಕೇಂದ್ರ ಸರ್ಕಾರ ತಾನು ತೆಗೆದುಕೊಳ್ಳುತ್ತಿದೆ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಟೀಕಿಸಿದ್ದಾರೆ.</p>.<p>ಜಿಎಸ್ಟಿ ದರ ಕಡಿಮೆಯಾಗಿರುವ ಪ್ರಯುಕ್ತ ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಈ ಪ್ರತಿಕ್ರಿಯೆ ನೀಡಿದ್ದಾರೆ.</p>.<p>‘ರಾಜ್ಯವು ತನ್ನ ಪಾಲಿನ ರಾಜಸ್ವ ಆದಾಯದಲ್ಲಿ ₹20 ಸಾವಿರ ಕೋಟಿ ಕಳೆದುಕೊಳ್ಳಲಿದ್ದರೂ, ಜಿಎಸ್ಟಿ ದರಗಳಲ್ಲಿ ಕಡಿತವಾಗಿರುವುದಕ್ಕೆ ನಮಗೆ ಸಂತಸವಿದೆ. ಈ ದರಗಳನ್ನು ಕಡಿಮೆ ಮಾಡಬೇಕು ಎಂದು ನಾವೇ ಮನವಿ ಮಾಡಿದ್ದೆವು. ಜಿಎಸ್ಟಿ ಮಂಡಳಿ ಸಭೆಗಳಲ್ಲಿಯೂ ಈ ಕುರಿತು ಸಲಹೆಗಳನ್ನೂ ನೀಡಿದ್ದೆವು. ಆದರೆ, ನೀವು ಏಕೆ ಇದರ ಶ್ರೇಯ ತೆಗೆದುಕೊಳ್ಳುತ್ತಿದ್ದೀರಿ’ ಎಂದು ಮೋದಿ ಅವರ ಹೆಸರು ಉಲ್ಲೇಖಿಸದೇ ಅವರು ಕುಟುಕಿದ್ದಾರೆ.</p>.<div><blockquote>ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಸಂಬಂಧಿಸಿದ ಅನುದಾನವನ್ನು ಮೋದಿ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿಲ್ಲ. ಭಾಷಣ ಮಾಡುವುದನ್ನು ಬಿಟ್ಟು ಬೇರೆ ಯಾವ ಕೆಲಸವನ್ನೂ ಕೇಂದ್ರ ಸರ್ಕಾರ ಮಾಡುತ್ತಿಲ್ಲ </blockquote><span class="attribution">ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>