<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ‘ಜಂಟಿ ವೇದಿಕೆ’ಯೊಂದನ್ನು ನಿರ್ಮಿಸುವ ಮೂಲಕ ಬಿಜೆಪಿ ವಿರುದ್ಧ ಹೋರಾಡಬೇಕಿದೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಶನಿವಾರ(ಮೇ 9) ಮನವಿ ಮಾಡಿದ್ದಾರೆ. </p><p>ಶತ್ರುವಿನ ಶತ್ರು ಮಿತ್ರ ಎಂದು ಯೋಚಿಸಲು ಇದು ಸರಿಯಾದ ಸಮಯವಲ್ಲ. ನಮ್ಮೆಲ್ಲರ ಮೊದಲ ಶತ್ರು ಬಿಜೆಪಿಯಾಗಿದೆ. ರಾಷ್ಟ್ರೀಯ ಪಕ್ಷಗಳು ಮತ್ತು ಎಡಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಅವರ ವಿರುದ್ಧ ನಿಲ್ಲಬೇಕಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪಕ್ಷಗಳು ಮಾತುಕತೆಗೆ ಮುಂದಾದರೂ, ನಾನು ಅವರೊಂದಿಗೆ ಚರ್ಚಿಸಲು ಸಿದ್ಧ ಎಂದು ಹೇಳಿದ್ದಾರೆ. </p><p>ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಟಿಎಂಸಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ದಾಳಿ ನಡೆಸಲಾಗುತ್ತಿದೆ. ಗೂಂಡಾಗಿರಿ ಆರಂಭವಾಗಿದೆ, ನಾನು 2011ರಲ್ಲಿ ಅಧಿಕಾರಕ್ಕೆ ಬಂದಾಗ ಈ ರೀತಿಯ ಕೃತ್ಯಗಳಿಗೆ ಬೆಂಬಲ ನೀಡಿರಲಿಲ್ಲ ಎಂದು ಹೇಳಿದ್ದಾರೆ. </p><p>ಬಿಜೆಪಿ ವಿರುದ್ಧದ ಹೋರಾಟದಲ್ಲಿ ವಿದ್ಯಾರ್ಥಿ ಸಂಘಟನೆಗಳು ಮತ್ತು ಎನ್ಜಿಒಗಳು ಕೂಡ ಒಟ್ಟಾಗಿ ನಿಲ್ಲುವಂತೆ ಅವರು ಕರೆ ನೀಡಿದ್ದಾರೆ. </p><p>ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದ ಬಿಜೆಪಿ, ಸುವೇಂದು ಅಧಿಕಾರಿ ನೇತೃತ್ವದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಧಿಕಾರದಲ್ಲಿದ್ದ ಟಿಎಂಸಿ 80 ಸ್ಥಾನಗಳಲ್ಲಿ ಗೆಲವು ಸಾಧಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ‘ಜಂಟಿ ವೇದಿಕೆ’ಯೊಂದನ್ನು ನಿರ್ಮಿಸುವ ಮೂಲಕ ಬಿಜೆಪಿ ವಿರುದ್ಧ ಹೋರಾಡಬೇಕಿದೆ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಶನಿವಾರ(ಮೇ 9) ಮನವಿ ಮಾಡಿದ್ದಾರೆ. </p><p>ಶತ್ರುವಿನ ಶತ್ರು ಮಿತ್ರ ಎಂದು ಯೋಚಿಸಲು ಇದು ಸರಿಯಾದ ಸಮಯವಲ್ಲ. ನಮ್ಮೆಲ್ಲರ ಮೊದಲ ಶತ್ರು ಬಿಜೆಪಿಯಾಗಿದೆ. ರಾಷ್ಟ್ರೀಯ ಪಕ್ಷಗಳು ಮತ್ತು ಎಡಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಅವರ ವಿರುದ್ಧ ನಿಲ್ಲಬೇಕಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪಕ್ಷಗಳು ಮಾತುಕತೆಗೆ ಮುಂದಾದರೂ, ನಾನು ಅವರೊಂದಿಗೆ ಚರ್ಚಿಸಲು ಸಿದ್ಧ ಎಂದು ಹೇಳಿದ್ದಾರೆ. </p><p>ಚುನಾವಣಾ ಫಲಿತಾಂಶದ ನಂತರ ರಾಜ್ಯದಲ್ಲಿ ಟಿಎಂಸಿ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ದಾಳಿ ನಡೆಸಲಾಗುತ್ತಿದೆ. ಗೂಂಡಾಗಿರಿ ಆರಂಭವಾಗಿದೆ, ನಾನು 2011ರಲ್ಲಿ ಅಧಿಕಾರಕ್ಕೆ ಬಂದಾಗ ಈ ರೀತಿಯ ಕೃತ್ಯಗಳಿಗೆ ಬೆಂಬಲ ನೀಡಿರಲಿಲ್ಲ ಎಂದು ಹೇಳಿದ್ದಾರೆ. </p><p>ಬಿಜೆಪಿ ವಿರುದ್ಧದ ಹೋರಾಟದಲ್ಲಿ ವಿದ್ಯಾರ್ಥಿ ಸಂಘಟನೆಗಳು ಮತ್ತು ಎನ್ಜಿಒಗಳು ಕೂಡ ಒಟ್ಟಾಗಿ ನಿಲ್ಲುವಂತೆ ಅವರು ಕರೆ ನೀಡಿದ್ದಾರೆ. </p><p>ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದ ಬಿಜೆಪಿ, ಸುವೇಂದು ಅಧಿಕಾರಿ ನೇತೃತ್ವದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಧಿಕಾರದಲ್ಲಿದ್ದ ಟಿಎಂಸಿ 80 ಸ್ಥಾನಗಳಲ್ಲಿ ಗೆಲವು ಸಾಧಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>