<p><strong>ಕೋಲ್ಕತ್ತ:</strong> ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಕೋಲ್ಕತ್ತದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.</p>.ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆಘಾತಕಾರಿ ಎಂದ ಮಮತಾ ಬ್ಯಾನರ್ಜಿ.<p>ಸೋದರಳಿಯ, ಟಿಎಂಸಿಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ಕಾಲ್ನಡಿಗೆಯಲ್ಲಿ ಭಾಗಿಯಾದರು. ರೆಡ್ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಮೂರ್ತಿಯಿಂದ ಪ್ರಾರಂಭವಾದ 3.8 ಕಿ.ಮೀ ನಡಿಗೆ ರವೀಂದ್ರನಾಥ ಠಾಗೋರ್ ಅವರ ಪೂರ್ವಜರ ಮನೆಯಾಗಿರುವ ಜೊರಸಾಂಕೊದಲ್ಲಿ ಕೊನೆಗೊಂಡಿತು.</p><p>ಜಾಥದಲ್ಲಿ ಭಾಗಿಯಾಗಿದ್ದ ಟಿಎಂಸಿಯ ಸಾವಿರಾರು ಮಂದಿ ಕಾರ್ಯಕರ್ತರು ಬಾವುಟಗಳನ್ನು ಹಾರಿಸುತ್ತಾ, ಘೋಷಣೆಗಳನ್ನು ಕೂಗುತ್ತಾ, ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ನಡೆದರು.</p>.ಪ್ರವಾಹ ಪೀಡಿತ ಡಾರ್ಜಿಲಿಂಗ್ಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ.<p>ಎಂದಿನಂತೆ ಬಿಳಿ ಕಾಟನ್ ಸೀರೆ ಹಾಗೂ ಚಪ್ಪಲಿ ಧರಿಸಿದ್ದ ಮಮತಾ ಬ್ಯಾನರ್ಜಿ ಜಾಥಾವನ್ನು ಮುನ್ನಡೆಸಿದರು. ಬದಿಯಲ್ಲಿ ನಿಂತಿದ್ದ ಅಭಿಮಾನಿಗಳ ಶುಭಾಶಯಗಳನ್ನು ಸ್ವೀಕರಿಸುತ್ತಾ ಮುಂದೆ ನಡೆದರು.</p><p>ಅವರ ಹಿಂದೆ ಟಿಎಂಸಿಯ ಶಾಸಕರು, ಸಂಸದರು ಹಾಗೂ ನಾಯಕರು ಇದ್ದರು.</p>.GST ದರ ಇಳಿಕೆ |ಕೇಂದ್ರ ಅನಗತ್ಯ ಶ್ರೇಯ ತೆಗೆದುಕೊಳ್ಳುತ್ತಿದೆ: ಮಮತಾ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಕೋಲ್ಕತ್ತದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.</p>.ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆಘಾತಕಾರಿ ಎಂದ ಮಮತಾ ಬ್ಯಾನರ್ಜಿ.<p>ಸೋದರಳಿಯ, ಟಿಎಂಸಿಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ಕಾಲ್ನಡಿಗೆಯಲ್ಲಿ ಭಾಗಿಯಾದರು. ರೆಡ್ ರಸ್ತೆಯಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಮೂರ್ತಿಯಿಂದ ಪ್ರಾರಂಭವಾದ 3.8 ಕಿ.ಮೀ ನಡಿಗೆ ರವೀಂದ್ರನಾಥ ಠಾಗೋರ್ ಅವರ ಪೂರ್ವಜರ ಮನೆಯಾಗಿರುವ ಜೊರಸಾಂಕೊದಲ್ಲಿ ಕೊನೆಗೊಂಡಿತು.</p><p>ಜಾಥದಲ್ಲಿ ಭಾಗಿಯಾಗಿದ್ದ ಟಿಎಂಸಿಯ ಸಾವಿರಾರು ಮಂದಿ ಕಾರ್ಯಕರ್ತರು ಬಾವುಟಗಳನ್ನು ಹಾರಿಸುತ್ತಾ, ಘೋಷಣೆಗಳನ್ನು ಕೂಗುತ್ತಾ, ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ನಡೆದರು.</p>.ಪ್ರವಾಹ ಪೀಡಿತ ಡಾರ್ಜಿಲಿಂಗ್ಗೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ.<p>ಎಂದಿನಂತೆ ಬಿಳಿ ಕಾಟನ್ ಸೀರೆ ಹಾಗೂ ಚಪ್ಪಲಿ ಧರಿಸಿದ್ದ ಮಮತಾ ಬ್ಯಾನರ್ಜಿ ಜಾಥಾವನ್ನು ಮುನ್ನಡೆಸಿದರು. ಬದಿಯಲ್ಲಿ ನಿಂತಿದ್ದ ಅಭಿಮಾನಿಗಳ ಶುಭಾಶಯಗಳನ್ನು ಸ್ವೀಕರಿಸುತ್ತಾ ಮುಂದೆ ನಡೆದರು.</p><p>ಅವರ ಹಿಂದೆ ಟಿಎಂಸಿಯ ಶಾಸಕರು, ಸಂಸದರು ಹಾಗೂ ನಾಯಕರು ಇದ್ದರು.</p>.GST ದರ ಇಳಿಕೆ |ಕೇಂದ್ರ ಅನಗತ್ಯ ಶ್ರೇಯ ತೆಗೆದುಕೊಳ್ಳುತ್ತಿದೆ: ಮಮತಾ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>