<p><strong>ಕೋಲ್ಕತ್ತ:</strong> ‘ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಆನಂದ್ ಬೋಸ್ ಅವರ ಸ್ಥಾನವನ್ನು ಆರ್.ಎನ್.ರವಿ ವಹಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ(ಅಮಿತ್ ಶಾ) ಅವರಿಂದ ತಿಳಿದು ಬಂದಿದೆ’ ಎಂದು ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p><p>‘ವಿಧಾನಸಭಾ ಚುನಾವಣೆಗೂ ಮುನ್ನ ಅಮಿತ್ ಶಾ ಅವರ ಒತ್ತಡದಿಂದಲೇ ಬೋಸ್ ಅವರು ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆಯಿದೆ’ ಎಂದು ಈ ವೇಳೆ ಆರೋಪಿಸಿದ್ದಾರೆ.</p><p>‘ರಾಜ್ಯಪಾಲರ ರಾಜೀನಾಮೆ ನಿರ್ಧಾರವು ಆಘಾತ ಹಾಗೂ ಕಳವಳ ಮೂಡಿಸಿದೆ. ದಿಢೀರ್ ನಿರ್ಧಾರಕ್ಕೆ ಕಾರಣವೇನು ಎಂಬುದರ ಕುರಿತು ಈ ಕ್ಷಣದವರೆಗೂ ನನಗೂ ಕೂಡ ಗೊತ್ತಾಗಿಲ್ಲ’ ಎಂದು ವಿವರಿಸಿದ್ದಾರೆ.</p><p>‘ರಾಜೀನಾಮೆಗೆ ಕಾರಣವೇನು ಎಂಬುದರ ಕುರಿತು ಈ ಕ್ಷಣದವರೆಗೂ ನನಗೆ ಮಾಹಿತಿಯಿಲ್ಲ. ಆದಾಗ್ಯೂ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವರ ಒತ್ತಡದಿಂದ ಈ ನಿರ್ಧಾರಕ್ಕೆ ಬಂದಿರಬೇಕು. ಆ ಮೂಲಕ ಚುನಾವಣೆಯನ್ನು ಲಾಭ ಪಡೆಯುವ ಉದ್ದೇಶ ಹೊಂದಿರಬೇಕು’ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.</p><p>‘ರಾಜ್ಯಪಾಲರ ಬದಲಾವಣೆ ವಿಚಾರವನ್ನು ಅಮಿತ್ ಶಾ ಅವರು ನನಗೆ ತಿಳಿಸಿದರು ಮುಂಚಿತವಾಗಿ ಈ ಬಗ್ಗೆ ಸಂಪರ್ಕಿಸರಿರಲಿಲ್ಲ’ ಎಂದು ವಿವರಿಸಿದ್ದಾರೆ. ‘ಇಂತಹ ನಿರ್ಧಾರಗಳು ಸಂವಿಧಾನದ ಆತ್ಮವನ್ನೇ ಹಾಳುಗೆಡವುತ್ತದೆ ದೇಶದ ಒಕ್ಕೂಟದ ವ್ಯವಸ್ಥೆಯ ತಳಹದಿಯ ಮೇಲೆ ನಡೆದ ದಾಳಿಯಾಗಿದೆ’ ಎಂದು ಕಿಡಿಕಾರಿದ್ದಾರೆ.</p><p>‘ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಗೌರವಿಸಬೇಕು. ಪ್ರಜಾಪ್ರಭುತ್ವ ಸಂಪ್ರದಾಯಗಳು ಹಾಗೂ ರಾಜ್ಯಗಳ ಘನತೆಯನ್ನು ಕುಗ್ಗಿಸುವ ಏಕಪಕ್ಷೀಯ ನಿರ್ಧಾರವನ್ನು ಕೈ ಬಿಡಬೇಕು’ ಎಂದು ಈ ವೇಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಆನಂದ್ ಬೋಸ್ ಅವರ ಸ್ಥಾನವನ್ನು ಆರ್.ಎನ್.ರವಿ ವಹಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ(ಅಮಿತ್ ಶಾ) ಅವರಿಂದ ತಿಳಿದು ಬಂದಿದೆ’ ಎಂದು ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.</p><p>‘ವಿಧಾನಸಭಾ ಚುನಾವಣೆಗೂ ಮುನ್ನ ಅಮಿತ್ ಶಾ ಅವರ ಒತ್ತಡದಿಂದಲೇ ಬೋಸ್ ಅವರು ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆಯಿದೆ’ ಎಂದು ಈ ವೇಳೆ ಆರೋಪಿಸಿದ್ದಾರೆ.</p><p>‘ರಾಜ್ಯಪಾಲರ ರಾಜೀನಾಮೆ ನಿರ್ಧಾರವು ಆಘಾತ ಹಾಗೂ ಕಳವಳ ಮೂಡಿಸಿದೆ. ದಿಢೀರ್ ನಿರ್ಧಾರಕ್ಕೆ ಕಾರಣವೇನು ಎಂಬುದರ ಕುರಿತು ಈ ಕ್ಷಣದವರೆಗೂ ನನಗೂ ಕೂಡ ಗೊತ್ತಾಗಿಲ್ಲ’ ಎಂದು ವಿವರಿಸಿದ್ದಾರೆ.</p><p>‘ರಾಜೀನಾಮೆಗೆ ಕಾರಣವೇನು ಎಂಬುದರ ಕುರಿತು ಈ ಕ್ಷಣದವರೆಗೂ ನನಗೆ ಮಾಹಿತಿಯಿಲ್ಲ. ಆದಾಗ್ಯೂ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವರ ಒತ್ತಡದಿಂದ ಈ ನಿರ್ಧಾರಕ್ಕೆ ಬಂದಿರಬೇಕು. ಆ ಮೂಲಕ ಚುನಾವಣೆಯನ್ನು ಲಾಭ ಪಡೆಯುವ ಉದ್ದೇಶ ಹೊಂದಿರಬೇಕು’ ಎಂದು ಬ್ಯಾನರ್ಜಿ ತಿಳಿಸಿದ್ದಾರೆ.</p><p>‘ರಾಜ್ಯಪಾಲರ ಬದಲಾವಣೆ ವಿಚಾರವನ್ನು ಅಮಿತ್ ಶಾ ಅವರು ನನಗೆ ತಿಳಿಸಿದರು ಮುಂಚಿತವಾಗಿ ಈ ಬಗ್ಗೆ ಸಂಪರ್ಕಿಸರಿರಲಿಲ್ಲ’ ಎಂದು ವಿವರಿಸಿದ್ದಾರೆ. ‘ಇಂತಹ ನಿರ್ಧಾರಗಳು ಸಂವಿಧಾನದ ಆತ್ಮವನ್ನೇ ಹಾಳುಗೆಡವುತ್ತದೆ ದೇಶದ ಒಕ್ಕೂಟದ ವ್ಯವಸ್ಥೆಯ ತಳಹದಿಯ ಮೇಲೆ ನಡೆದ ದಾಳಿಯಾಗಿದೆ’ ಎಂದು ಕಿಡಿಕಾರಿದ್ದಾರೆ.</p><p>‘ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಗೌರವಿಸಬೇಕು. ಪ್ರಜಾಪ್ರಭುತ್ವ ಸಂಪ್ರದಾಯಗಳು ಹಾಗೂ ರಾಜ್ಯಗಳ ಘನತೆಯನ್ನು ಕುಗ್ಗಿಸುವ ಏಕಪಕ್ಷೀಯ ನಿರ್ಧಾರವನ್ನು ಕೈ ಬಿಡಬೇಕು’ ಎಂದು ಈ ವೇಳೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>