ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಮಮತಾ ಅವರಿಗೆ ಪ್ರಮಾಣವಚನ ಬೋಧಿಸಿದರು.ಕೋವಿಡ್ ಕಾರಣಕ್ಕಾಗಿ ಕಾರ್ಯಕ್ರಮವನ್ನು ಸರಳವಾಗಿ ಏರ್ಪಡಿಸಲಾಗಿತ್ತು. ಪಕ್ಷದ ಮುಖಂಡರಾದ ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ, ಪಕ್ಷದ ಗೆಲುವಿಗೆ ಕಾರ್ಯತಂತ್ರರೂಪಿಸಿದ ಪ್ರಶಾಂತ್ ಕಿಶೋರ್ ಸೇರಿದಂತೆ ಕೆಲವರಷ್ಟೇ ಉಪಸ್ಥಿತರಿದ್ದರು.