<p>ಕೋಲ್ಕತ್ತ: ಈಚೆಗೆ ನಡೆದ ವಿಧಾನಸಭಾ ಚುನಾವಣೆಯನ್ನು ಪಕ್ಷಕ್ಕೆ ಭಾರಿ ಬಹುಮತವನ್ನು ತಂದುಕೊಟ್ಟ ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.</p>.<p>ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಮಮತಾ ಅವರಿಗೆ ಪ್ರಮಾಣವಚನ ಬೋಧಿಸಿದರು.ಕೋವಿಡ್ ಕಾರಣಕ್ಕಾಗಿ ಕಾರ್ಯಕ್ರಮವನ್ನು ಸರಳವಾಗಿ ಏರ್ಪಡಿಸಲಾಗಿತ್ತು. ಪಕ್ಷದ ಮುಖಂಡರಾದ ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ, ಪಕ್ಷದ ಗೆಲುವಿಗೆ ಕಾರ್ಯತಂತ್ರರೂಪಿಸಿದ ಪ್ರಶಾಂತ್ ಕಿಶೋರ್ ಸೇರಿದಂತೆ ಕೆಲವರಷ್ಟೇ ಉಪಸ್ಥಿತರಿದ್ದರು.</p>.<p>ಬಳಿಕ ಮಾತನಾಡಿದ ಮಮತಾ, ’ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಗಮನಹರಿಸುತ್ತೇನೆ. ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದ ಕಾರಣ ಹಿಂಸಾಚಾರಗಳು ಸಂಭವಿಸಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.</p>.<p><strong>ಮೋದಿ ಅಭಿನಂದನೆ: </strong>ಮಮತಾ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/around-300-400-bjp-workers-entered-assam-from-west-bengal-amid-post-poll-violence-says-assam-828154.html" itemprop="url">ಪಶ್ಚಿಮ ಬಂಗಾಳ ಹಿಂಸಾಚಾರ|300-400 ಬಿಜೆಪಿ ಕಾರ್ಯಕರ್ತರು ಅಸ್ಸಾಂಗೆ: ಹಿಮಂತ ಶರ್ಮಾ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಈಚೆಗೆ ನಡೆದ ವಿಧಾನಸಭಾ ಚುನಾವಣೆಯನ್ನು ಪಕ್ಷಕ್ಕೆ ಭಾರಿ ಬಹುಮತವನ್ನು ತಂದುಕೊಟ್ಟ ಟಿಎಂಸಿ ಶಾಸಕಾಂಗ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.</p>.<p>ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರು ಮಮತಾ ಅವರಿಗೆ ಪ್ರಮಾಣವಚನ ಬೋಧಿಸಿದರು.ಕೋವಿಡ್ ಕಾರಣಕ್ಕಾಗಿ ಕಾರ್ಯಕ್ರಮವನ್ನು ಸರಳವಾಗಿ ಏರ್ಪಡಿಸಲಾಗಿತ್ತು. ಪಕ್ಷದ ಮುಖಂಡರಾದ ಸುಬ್ರತಾ ಮುಖರ್ಜಿ, ಪಾರ್ಥ ಚಟರ್ಜಿ, ಪಕ್ಷದ ಗೆಲುವಿಗೆ ಕಾರ್ಯತಂತ್ರರೂಪಿಸಿದ ಪ್ರಶಾಂತ್ ಕಿಶೋರ್ ಸೇರಿದಂತೆ ಕೆಲವರಷ್ಟೇ ಉಪಸ್ಥಿತರಿದ್ದರು.</p>.<p>ಬಳಿಕ ಮಾತನಾಡಿದ ಮಮತಾ, ’ಕೋವಿಡ್ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಯನ್ನು ಕಾಪಾಡಲು ಗಮನಹರಿಸುತ್ತೇನೆ. ಚುನಾವಣಾ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದ ಕಾರಣ ಹಿಂಸಾಚಾರಗಳು ಸಂಭವಿಸಿವೆ. ಇನ್ನು ಮುಂದೆ ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅವರು ಹೇಳಿದರು.</p>.<p><strong>ಮೋದಿ ಅಭಿನಂದನೆ: </strong>ಮಮತಾ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/around-300-400-bjp-workers-entered-assam-from-west-bengal-amid-post-poll-violence-says-assam-828154.html" itemprop="url">ಪಶ್ಚಿಮ ಬಂಗಾಳ ಹಿಂಸಾಚಾರ|300-400 ಬಿಜೆಪಿ ಕಾರ್ಯಕರ್ತರು ಅಸ್ಸಾಂಗೆ: ಹಿಮಂತ ಶರ್ಮಾ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>