<p><strong>ಕೋಲ್ಕತ್ತ:</strong> ಹದಿನೈದು ವರ್ಷದಿಂದಲೂ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು, ತನ್ನ 74 ಹಾಲಿ ಶಾಸಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. </p>.<p>ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ, 291 ಕ್ಷೇತ್ರಗಳಿಗೆ ಟಿಎಂಸಿ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಿದೆ.</p>.<p>ಮುಖ್ಯಮಂತ್ರಿ ಹಾಗೂ ಟಿಎಂಸಿಯ ವರಿಷ್ಠರೂ ಆಗಿರುವ ಮಮತಾ ಬ್ಯಾನರ್ಜಿ ಅವರು ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯು, ಬಿಜೆಪಿಯೊಂದಿಗೆ ಹೈವೋಲ್ಟೇಜ್ ಚುನಾವಣಾ ಹಣಾಹಣಿಗೆ ವೇದಿಕೆ ಸಿದ್ಧಪಡಿಸಿದೆ.</p>.<p>ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಹಾಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ವರಿಷ್ಠ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದು, ಟಿಎಂಸಿಯಿಂದ ತಾವೇ ಅಭ್ಯರ್ಥಿಯಾಗುವ ಮೂಲಕ ನೇರ ಹಣಾಹಣಿಗೆ ಮಮತಾ ಅಖಾಡಕ್ಕಿಳಿದಿದ್ದಾರೆ.</p>.<p>ಡಾರ್ಜಿಲಿಂಗ್ ಹಿಲ್ಸ್ನ ಮೂರು ಕ್ಷೇತ್ರಗಳನ್ನು ಅನಿತ್ ಥಾಪಾ ನೇತೃತ್ವದ ಭಾರತೀಯ ಗೋರ್ಖಾ ಪ್ರಜಾತಂತ್ರ ಮೋರ್ಚಾ ಪಕ್ಷಕ್ಕೆ ಟಿಎಂಸಿ ಬಿಟ್ಟುಕೊಟ್ಟಿದೆ.</p>.<p>ಹಾಲಿ ವಿಧಾನಸಭೆಯಲ್ಲಿದ್ದ 224 ಶಾಸಕರ ಪೈಕಿ, 135 ಶಾಸಕರಿಗೆ ಮತ್ತೆ ಸ್ಪರ್ಧಿಸಲು ಟಿಕೆಟ್ ಘೋಷಿಸಿದೆ. 15 ಕ್ಷೇತ್ರಗಳನ್ನು ವಿಭಿನ್ನ ಸ್ಥಾನಗಳಿಗೆ ವರ್ಗಾಯಿಸಿದ್ದು, 74 ಹಾಲಿ ಶಾಸಕರನ್ನು ಸ್ಪರ್ಧೆಯಿಂದ ಕೈಬಿಟ್ಟಿದೆ. ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಎದುರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಹದಿನೈದು ವರ್ಷದಿಂದಲೂ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು, ತನ್ನ 74 ಹಾಲಿ ಶಾಸಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದೆ. </p>.<p>ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ, 291 ಕ್ಷೇತ್ರಗಳಿಗೆ ಟಿಎಂಸಿ ತನ್ನ ಅಭ್ಯರ್ಥಿಗಳನ್ನು ಮಂಗಳವಾರ ಘೋಷಿಸಿದೆ.</p>.<p>ಮುಖ್ಯಮಂತ್ರಿ ಹಾಗೂ ಟಿಎಂಸಿಯ ವರಿಷ್ಠರೂ ಆಗಿರುವ ಮಮತಾ ಬ್ಯಾನರ್ಜಿ ಅವರು ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯು, ಬಿಜೆಪಿಯೊಂದಿಗೆ ಹೈವೋಲ್ಟೇಜ್ ಚುನಾವಣಾ ಹಣಾಹಣಿಗೆ ವೇದಿಕೆ ಸಿದ್ಧಪಡಿಸಿದೆ.</p>.<p>ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಹಾಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ವರಿಷ್ಠ ಸುವೇಂದು ಅಧಿಕಾರಿ ಸ್ಪರ್ಧಿಸುತ್ತಿದ್ದು, ಟಿಎಂಸಿಯಿಂದ ತಾವೇ ಅಭ್ಯರ್ಥಿಯಾಗುವ ಮೂಲಕ ನೇರ ಹಣಾಹಣಿಗೆ ಮಮತಾ ಅಖಾಡಕ್ಕಿಳಿದಿದ್ದಾರೆ.</p>.<p>ಡಾರ್ಜಿಲಿಂಗ್ ಹಿಲ್ಸ್ನ ಮೂರು ಕ್ಷೇತ್ರಗಳನ್ನು ಅನಿತ್ ಥಾಪಾ ನೇತೃತ್ವದ ಭಾರತೀಯ ಗೋರ್ಖಾ ಪ್ರಜಾತಂತ್ರ ಮೋರ್ಚಾ ಪಕ್ಷಕ್ಕೆ ಟಿಎಂಸಿ ಬಿಟ್ಟುಕೊಟ್ಟಿದೆ.</p>.<p>ಹಾಲಿ ವಿಧಾನಸಭೆಯಲ್ಲಿದ್ದ 224 ಶಾಸಕರ ಪೈಕಿ, 135 ಶಾಸಕರಿಗೆ ಮತ್ತೆ ಸ್ಪರ್ಧಿಸಲು ಟಿಕೆಟ್ ಘೋಷಿಸಿದೆ. 15 ಕ್ಷೇತ್ರಗಳನ್ನು ವಿಭಿನ್ನ ಸ್ಥಾನಗಳಿಗೆ ವರ್ಗಾಯಿಸಿದ್ದು, 74 ಹಾಲಿ ಶಾಸಕರನ್ನು ಸ್ಪರ್ಧೆಯಿಂದ ಕೈಬಿಟ್ಟಿದೆ. ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಎದುರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>