<p><strong>ಕೋಲ್ಕತ್ತ:</strong> ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮಂಗಳವಾರ ಸುಶ್ಮಿತಾ ದೇವ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.</p>.<p>'ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹಾಗೂ ಮಹಿಳಾ ಸಬಲೀಕರಣದ ಸಂಬಂಧ ಮಮತಾ ಬ್ಯಾನರ್ಜಿ ಅವರ ದೂರದೃಷ್ಟಿತ್ವದಿಂದಾಗಿ ನಮ್ಮ ಸಮಾಜವು ಮತ್ತಷ್ಟು ಸಾಧಿಸಲು ಸಾಧ್ಯವಾಗಲಿದೆ' ಎಂದು ಟಿಎಂಸಿ ಟ್ವೀಟಿಸಿದೆ.</p>.<p>ಸುಶ್ಮಿತಾ ದೇವ್ ಕಳೆದ ತಿಂಗಳಷ್ಟೇ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರ್ಪಡೆಯಾದರು. ಅವರು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರರಲ್ಲಿ ಒಬ್ಬರಾಗಿ ಕಾರ್ಯನಿರ್ವಹಿಸುತ್ತಿದ್ದರು ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆಯಾಗಿದ್ದರು.</p>.<p>ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದ ತಿಳಿಸಿರುವ ಸುಶ್ಮಿತಾ, 'ಸಂಸತ್ತಿನಲ್ಲಿ ಹೆಚ್ಚು ಮಹಿಳೆಯರನ್ನು ಕಾಣಬೇಕೆಂಬ ಅವರ ನಿರ್ಧಾರವು ಅಸಾಧಾರಣವಾದುದು. ನಾನು ನನ್ನಿಂದಾಗುವ ಅತ್ಯುತ್ತಮವಾದುದನ್ನು ಮಾಡುವೆ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>ಆಗಸ್ಟ್ನಲ್ಲಿ ಮಮತಾ ಬ್ಯಾನರ್ಜಿ ಅವರ ತಂಡಕ್ಕೆ ಸೇರ್ಪಡೆಯಾದ ಬಳಿಕ ಸುಶ್ಮಿತಾ ಅವರಿಗೆ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಟಿಎಂಸಿ ಕಾರ್ಯಾಚರಣೆಯನ್ನು ಗಮನಿಸುವ ಹೊಣೆ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮಂಗಳವಾರ ಸುಶ್ಮಿತಾ ದೇವ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.</p>.<p>'ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹಾಗೂ ಮಹಿಳಾ ಸಬಲೀಕರಣದ ಸಂಬಂಧ ಮಮತಾ ಬ್ಯಾನರ್ಜಿ ಅವರ ದೂರದೃಷ್ಟಿತ್ವದಿಂದಾಗಿ ನಮ್ಮ ಸಮಾಜವು ಮತ್ತಷ್ಟು ಸಾಧಿಸಲು ಸಾಧ್ಯವಾಗಲಿದೆ' ಎಂದು ಟಿಎಂಸಿ ಟ್ವೀಟಿಸಿದೆ.</p>.<p>ಸುಶ್ಮಿತಾ ದೇವ್ ಕಳೆದ ತಿಂಗಳಷ್ಟೇ ಕಾಂಗ್ರೆಸ್ ತೊರೆದು ಟಿಎಂಸಿಗೆ ಸೇರ್ಪಡೆಯಾದರು. ಅವರು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರರಲ್ಲಿ ಒಬ್ಬರಾಗಿ ಕಾರ್ಯನಿರ್ವಹಿಸುತ್ತಿದ್ದರು ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್ನ ಅಧ್ಯಕ್ಷೆಯಾಗಿದ್ದರು.</p>.<p>ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದ ತಿಳಿಸಿರುವ ಸುಶ್ಮಿತಾ, 'ಸಂಸತ್ತಿನಲ್ಲಿ ಹೆಚ್ಚು ಮಹಿಳೆಯರನ್ನು ಕಾಣಬೇಕೆಂಬ ಅವರ ನಿರ್ಧಾರವು ಅಸಾಧಾರಣವಾದುದು. ನಾನು ನನ್ನಿಂದಾಗುವ ಅತ್ಯುತ್ತಮವಾದುದನ್ನು ಮಾಡುವೆ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.</p>.<p>ಆಗಸ್ಟ್ನಲ್ಲಿ ಮಮತಾ ಬ್ಯಾನರ್ಜಿ ಅವರ ತಂಡಕ್ಕೆ ಸೇರ್ಪಡೆಯಾದ ಬಳಿಕ ಸುಶ್ಮಿತಾ ಅವರಿಗೆ ಅಸ್ಸಾಂ ಮತ್ತು ತ್ರಿಪುರಾದಲ್ಲಿ ಟಿಎಂಸಿ ಕಾರ್ಯಾಚರಣೆಯನ್ನು ಗಮನಿಸುವ ಹೊಣೆ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>