‘ಜನರು ಅವರ (ಮಮತಾ) ಪರ ಆದೇಶ ನೀಡಿದ್ದಾರೆ. ಅವರು 213 ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದ್ದಾರೆ. ಮಮತಾ ಅವರು ಭವಾನಿಪುರದಿಂದ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಜನರ ಆದೇಶವನ್ನು ನಾವು ತಿರಸ್ಕರಿಸಲಾಗದು. ಅವರು ಮುಖ್ಯಮಂತ್ರಿಯಾಗಿರಬೇಕು ಎಂದು ಜನ ಬಯಸುತ್ತಿದ್ದಾರೆ. ಬಿಜೆಪಿಯೂ ಚುನಾವಣೆಯಿಂದ ಹಿಂದೆ ಸರಿದಿದ್ದರೆ ಸರಿಯಾದ ಸಂದೇಶ ರವಾನೆಯಾಗುತ್ತಿತ್ತು’ ಎಂದು ರಾಜೀವ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.