ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ದೇಶದ ಜನರಿಗೆ ಕುಟುಂಬ ರಾಜಕಾರಣ ಅಥವಾ ರಾಮ ರಾಜ್ಯ ಬೇಕೆ? ಎಂಬುವುದನ್ನು ಈ ಲೋಕಸಭಾ ಚುನಾವಣೆ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
‘ತಮ್ಮ ವೋಟ್ ಬ್ಯಾಂಕ್ ರಾಜಕಾರಣದ ಮೇಲೆ ಪರಿಣಾಮ ಬೀರುವ ಭಯದಿಂದಾಗಿ ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ನಾಯಕರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿರಲಿಲ್ಲ. ಸಂದೇಶ್ಖಾಲಿ ಪ್ರಕರಣದ ಆರೋಪಿಗಳನ್ನು ಟಿಎಂಸಿ ಸರ್ಕಾರ ರಕ್ಷಿಸಲು ಪ್ರಯತ್ನಿಸುತ್ತಿದೆ. ಆದರೆ ಕೇಂದ್ರ ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ ‘ ಎಂದು ತಿಳಿಸಿದ್ದಾರೆ.