ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆಯೂ ಆಗಿರುವ ಮಮತಾ ಅವರು, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿಯವರಿಗೆ ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಮಾತನಾಡಿರುವ ಸಂಬಿತ್, 'ಅವರು (ಮಮತಾ) ರಾಹುಲ್ ಗಾಂಧಿಯವರಿಗೆ ಬೆಳಗ್ಗೆ ಪುಷ್ಪಗುಚ್ಚ ಕಳುಹಿಸಿ, ಆಶಿರ್ವಾದ ಮಾಡಿದ್ದರು. ಆದರೆ, ಸಂಜೆ ಹೊತ್ತಿಗೆ ರಾಹುಲ್ ವಿರುದ್ಧ ಮಾತನಾಡಿದ್ದಾರೆ' ಎಂದು ವ್ಯಂಗ್ಯವಾಡಿದ್ದಾರೆ.