ಕೋಲ್ಕತ್ತ: ‘ಎಡ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆ’ ಎಂದು ಅವರ ಆಪ್ತರೊಬ್ಬರು ತಿಳಿಸಿದರು.
‘ಅವರಿಗೆ ಮೊಣಕಾಲಿನಲ್ಲಿ ಊತವಿದೆ. ಅಧಿಕ ನೀರು ಶೇಖರಣೆಯಾಗಿ ಆ ಭಾಗದಲ್ಲಿ ಊತ ಬಂದಿರಬಹುದು. ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಬೇಕೆ, ಬೇಡವೆ ಎಂಬ ಬಗ್ಗೆ ಪರಿಶೀಲಿಸಬೇಕು’ ಎಂದು ಮಮತಾ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಬ್ಬರು ಸುದ್ದಿಸಂಸ್ಥೆಗೆ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.