<p>ಕೋಲ್ಕತ್ತ: ಪಶ್ಚಿಮ ಬಂಗಾಳ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸಕ್ತಿ ಹೊಂದಿಲ್ಲ. ಅವರು ಕೇವಲ ಗೂಂಡಾ ಮತ್ತು ಸುಲಿಗೆ ಮಾಡುವವರನ್ನು ಉತ್ತೇಜಿಸಲು ಬಯಸುತ್ತಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ಅಂತ್ಯದ ಕ್ಷಣಗಣನೆ ಆರಂಭವಾಗಿದ್ದು, ಅಭಿವೃದ್ಧಿ ಮತ್ತು ಪ್ರಗತಿಯ ಹೊಸ ಯುಗಕ್ಕೆ ನಾಂದಿ ಹಾಡಲು ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.</p>.<p>ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಂದುವರಿದ ಮತ್ತು ಪ್ರಗತಿಪರ ರಾಜ್ಯವಾಗಿತ್ತು. ಆದರೆ ಕಾಂಗ್ರೆಸ್, ಎಡರಂಗ ಮತ್ತು ಟಿಎಂಸಿ ರಾಜ್ಯದ ಕೈಗಾರಿಕಾ ಬೆಳವಣಿಗೆಯನ್ನು ಕಂಠಿತಗೊಳಿಸಿತ್ತು. ಬಳಿಕ ಭ್ರಷ್ಟಾಚಾರ ಮನೆ ಮಾಡಿತು ಎಂದು ಆರೋಪಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/will-no-longer-call-rss-sangh-parivar-its-a-misnomer-rahul-816363.html" itemprop="url">ಇನ್ನು ಮುಂದೆ ಆರ್ಎಸ್ಎಸ್ ಅನ್ನು ‘ಸಂಘಪರಿವಾರ‘ ಎಂದು ಕರೆಯಲ್ಲ: ರಾಹುಲ್ ಗಾಂಧಿ </a></p>.<p>ಅಂಫಾನ್ ಚಂಡಮಾರುತದ ಬಳಿಕ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಟಿಎಂಸಿ ದುರುಪಯೋಗಪಡಿಸಿಕೊಂಡಿದೆ ಎಂದವರು ಟೀಕೆ ಮಾಡಿದ್ದಾರೆ.</p>.<p>ಅಂಫಾನ್ ಚಂಡಮಾರುತದ ಬಳಿಕ ಪ್ರಧಾನಿ ಮೋದಿ 1,000 ಕೋಟಿ ರೂ. ನೆರವು ಬಿಡುಗಡೆ ಮಾಡಿದ್ದರು. ಆದರೆ ಆ ಹಣವು ಜನರನ್ನು ತಲುಪಲಿಲ್ಲ. ಟಿಎಂಸಿ ನಾಯಕರುವಶಪಡಿಸಿದ್ದಾರೆ ಎಂದು ಆರೋಪಿಸಿದರು.</p>.<p>'ಪಿಎಂ ಆವಾಸ್ ಯೋಜನೆ', 'ಉಜ್ವಲ ಯೋಜನೆ', 'ಆಯುಷ್ಮಾನ್ ಭಾರತ್' ಮತ್ತು 'ಕಿಸಾನ್ ಸಮ್ಮಾನ್ ನಿಧಿ' ಮುಂತಾದ ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ತಮ್ಮ ರಾಜ್ಯದ ಜನರು ಗಿಟ್ಟಿಸಬಹುದಾದರೆ ಪಶ್ಚಿಮ ಬಂಗಾಳದ ಜನರು ಈ ಪ್ರಯೋಜನಗಳಿಂದ ಏಕೆ ವಂಚಿತರಾಗುತ್ತಿದ್ದಾರೆ? ಇದರರ್ಥ ಪಶ್ಚಿಮ ಬಂಗಾಳದ ಅಭಿವೃದ್ಧಿಯ ಬಗ್ಗೆ ಟಿಎಂಸಿಗೆ ಖಾಳಜಿಯಿಲ್ಲ ಎಂದು ಹೇಳಿದ್ದಾರೆ.</p>.<p>ಕೇಂದ್ರದಲ್ಲಿ ಆಡಳಿತದಲ್ಲಿರುವ ಅದೇ ಪಕ್ಷವು ಬಂಗಾಳದಲ್ಲೂ ಅಧಿಕಾರಕ್ಕೆ ಬಂದರೆ ಜನರಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಪಶ್ಚಿಮ ಬಂಗಾಳ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸಕ್ತಿ ಹೊಂದಿಲ್ಲ. ಅವರು ಕೇವಲ ಗೂಂಡಾ ಮತ್ತು ಸುಲಿಗೆ ಮಾಡುವವರನ್ನು ಉತ್ತೇಜಿಸಲು ಬಯಸುತ್ತಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಡಳಿತದ ಅಂತ್ಯದ ಕ್ಷಣಗಣನೆ ಆರಂಭವಾಗಿದ್ದು, ಅಭಿವೃದ್ಧಿ ಮತ್ತು ಪ್ರಗತಿಯ ಹೊಸ ಯುಗಕ್ಕೆ ನಾಂದಿ ಹಾಡಲು ಬಿಜೆಪಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.</p>.<p>ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಮುಂದುವರಿದ ಮತ್ತು ಪ್ರಗತಿಪರ ರಾಜ್ಯವಾಗಿತ್ತು. ಆದರೆ ಕಾಂಗ್ರೆಸ್, ಎಡರಂಗ ಮತ್ತು ಟಿಎಂಸಿ ರಾಜ್ಯದ ಕೈಗಾರಿಕಾ ಬೆಳವಣಿಗೆಯನ್ನು ಕಂಠಿತಗೊಳಿಸಿತ್ತು. ಬಳಿಕ ಭ್ರಷ್ಟಾಚಾರ ಮನೆ ಮಾಡಿತು ಎಂದು ಆರೋಪಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/will-no-longer-call-rss-sangh-parivar-its-a-misnomer-rahul-816363.html" itemprop="url">ಇನ್ನು ಮುಂದೆ ಆರ್ಎಸ್ಎಸ್ ಅನ್ನು ‘ಸಂಘಪರಿವಾರ‘ ಎಂದು ಕರೆಯಲ್ಲ: ರಾಹುಲ್ ಗಾಂಧಿ </a></p>.<p>ಅಂಫಾನ್ ಚಂಡಮಾರುತದ ಬಳಿಕ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಟಿಎಂಸಿ ದುರುಪಯೋಗಪಡಿಸಿಕೊಂಡಿದೆ ಎಂದವರು ಟೀಕೆ ಮಾಡಿದ್ದಾರೆ.</p>.<p>ಅಂಫಾನ್ ಚಂಡಮಾರುತದ ಬಳಿಕ ಪ್ರಧಾನಿ ಮೋದಿ 1,000 ಕೋಟಿ ರೂ. ನೆರವು ಬಿಡುಗಡೆ ಮಾಡಿದ್ದರು. ಆದರೆ ಆ ಹಣವು ಜನರನ್ನು ತಲುಪಲಿಲ್ಲ. ಟಿಎಂಸಿ ನಾಯಕರುವಶಪಡಿಸಿದ್ದಾರೆ ಎಂದು ಆರೋಪಿಸಿದರು.</p>.<p>'ಪಿಎಂ ಆವಾಸ್ ಯೋಜನೆ', 'ಉಜ್ವಲ ಯೋಜನೆ', 'ಆಯುಷ್ಮಾನ್ ಭಾರತ್' ಮತ್ತು 'ಕಿಸಾನ್ ಸಮ್ಮಾನ್ ನಿಧಿ' ಮುಂತಾದ ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ತಮ್ಮ ರಾಜ್ಯದ ಜನರು ಗಿಟ್ಟಿಸಬಹುದಾದರೆ ಪಶ್ಚಿಮ ಬಂಗಾಳದ ಜನರು ಈ ಪ್ರಯೋಜನಗಳಿಂದ ಏಕೆ ವಂಚಿತರಾಗುತ್ತಿದ್ದಾರೆ? ಇದರರ್ಥ ಪಶ್ಚಿಮ ಬಂಗಾಳದ ಅಭಿವೃದ್ಧಿಯ ಬಗ್ಗೆ ಟಿಎಂಸಿಗೆ ಖಾಳಜಿಯಿಲ್ಲ ಎಂದು ಹೇಳಿದ್ದಾರೆ.</p>.<p>ಕೇಂದ್ರದಲ್ಲಿ ಆಡಳಿತದಲ್ಲಿರುವ ಅದೇ ಪಕ್ಷವು ಬಂಗಾಳದಲ್ಲೂ ಅಧಿಕಾರಕ್ಕೆ ಬಂದರೆ ಜನರಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>