<p><strong>ಕೋಲ್ಕತ್ತ</strong>: ನಾಲ್ವರು ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತು ಮಾಡಿರುವುದನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಸರ್ಕಾರವು ನಮ್ಮ ನೌಕರರೊಂದಿಗೆ ಇದೆ’ ಎಂದು ಗುರುವಾರ ಹೇಳಿದರು.</p>.<p>ಎರಡು ಜಿಲ್ಲೆಗಳಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ದೋಷ ಎಸಗಿದ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ ರಾಜ್ಯ ನಾಗರಿಕ ಸೇವೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗವು ಮಂಗಳವಾರ ಆದೇಶ ಹೊರಡಿಸಿತ್ತು. </p>.<p>ಇಬ್ಬರು ಮತದಾರರ ನೋಂದಣಿ ಅಧಿಕಾರಿಗಳು, ಇಬ್ಬರು ಸಹಾಯಕ ನೋಂದಣಿ ಅಧಿಕಾರಿಗಳು ಮತ್ತು ಒಬ್ಬ ಡೇಟಾ ಎಂಟ್ರಿ ಆಪರೇಟರ್ ವಿರುದ್ಧ ಎಫ್ಐಆರ್ ದಾಖಲಿಸುವಂತೆಯೂ ಆಯೋಗದ ಸಮಿತಿಯು ನಿರ್ದೇಶಿಸಿದೆ. </p>.<p>‘ಚುನಾವಣಾ ದಿನಾಂಕವನ್ನು ಘೋಷಿಸಿದ ಬಳಿಕವೇ ಆಯೋಗವು ಕ್ರಮ ಕೈಗೊಳ್ಳುತ್ತದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆಗೆ ಇನ್ನೂ ಬಹಳ ಸಮಯ ಉಳಿದಿದೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹೆಸರಿನಲ್ಲಿ ಯಾರನ್ನಾದರೂ ಸೋಲಿಸಬಹುದು ಎಂದು ಆಯೋಗ ಭಾವಿಸಿದೆಯೇ?’ ಎಂದು ಮಮತಾ ಪ್ರಶ್ನಿಸಿದರು. </p>.<p>‘ಯಾವ ನಿಯಮದ ಅಡಿಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ? ಸಂವಿಧಾನದಲ್ಲಿ ಇಂತಹ ಕ್ರಮಕ್ಕೆ ಅವಕಾಶವಿಲ್ಲ. ಎಲ್ಲಾ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರದ ಬೆಂಬಲವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ನಾಲ್ವರು ಅಧಿಕಾರಿಗಳನ್ನು ಚುನಾವಣಾ ಆಯೋಗವು ಅಮಾನತು ಮಾಡಿರುವುದನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಸರ್ಕಾರವು ನಮ್ಮ ನೌಕರರೊಂದಿಗೆ ಇದೆ’ ಎಂದು ಗುರುವಾರ ಹೇಳಿದರು.</p>.<p>ಎರಡು ಜಿಲ್ಲೆಗಳಲ್ಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ ದೋಷ ಎಸಗಿದ ಹಾಗೂ ಕರ್ತವ್ಯಲೋಪದ ಆರೋಪದ ಮೇಲೆ ರಾಜ್ಯ ನಾಗರಿಕ ಸೇವೆಯ ಇಬ್ಬರು ಅಧಿಕಾರಿಗಳು ಸೇರಿದಂತೆ ನಾಲ್ವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗವು ಮಂಗಳವಾರ ಆದೇಶ ಹೊರಡಿಸಿತ್ತು. </p>.<p>ಇಬ್ಬರು ಮತದಾರರ ನೋಂದಣಿ ಅಧಿಕಾರಿಗಳು, ಇಬ್ಬರು ಸಹಾಯಕ ನೋಂದಣಿ ಅಧಿಕಾರಿಗಳು ಮತ್ತು ಒಬ್ಬ ಡೇಟಾ ಎಂಟ್ರಿ ಆಪರೇಟರ್ ವಿರುದ್ಧ ಎಫ್ಐಆರ್ ದಾಖಲಿಸುವಂತೆಯೂ ಆಯೋಗದ ಸಮಿತಿಯು ನಿರ್ದೇಶಿಸಿದೆ. </p>.<p>‘ಚುನಾವಣಾ ದಿನಾಂಕವನ್ನು ಘೋಷಿಸಿದ ಬಳಿಕವೇ ಆಯೋಗವು ಕ್ರಮ ಕೈಗೊಳ್ಳುತ್ತದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆಗೆ ಇನ್ನೂ ಬಹಳ ಸಮಯ ಉಳಿದಿದೆ. ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಹೆಸರಿನಲ್ಲಿ ಯಾರನ್ನಾದರೂ ಸೋಲಿಸಬಹುದು ಎಂದು ಆಯೋಗ ಭಾವಿಸಿದೆಯೇ?’ ಎಂದು ಮಮತಾ ಪ್ರಶ್ನಿಸಿದರು. </p>.<p>‘ಯಾವ ನಿಯಮದ ಅಡಿಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ? ಸಂವಿಧಾನದಲ್ಲಿ ಇಂತಹ ಕ್ರಮಕ್ಕೆ ಅವಕಾಶವಿಲ್ಲ. ಎಲ್ಲಾ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ನಮ್ಮ ಸರ್ಕಾರದ ಬೆಂಬಲವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>