ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಶಾ, ‘2018ರಿಂದ ಪಶ್ಚಿಮ ಬಂಗಾಳವು ಅಪರಾಧದ ಅಂಕಿ ಅಂಶಗಳನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊಗೆ (ಎನ್ಸಿಆರ್ಬಿ) ಕಳುಹಿಸಿಲ್ಲ. ರಾಜಕೀಯ ಪ್ರೇರಿತ ಹತ್ಯೆಗಳ ಬಗ್ಗೆ ಮುಖ್ಯಮಂತ್ರಿ ಶ್ವೇತಪತ್ರ ಹೊರಡಿಸಲಿ. ಪಶ್ಚಿಮ ಬಂಗಾಳದಲ್ಲೇ ಇಂಥ ಹತ್ಯೆಗಳು ಅತಿ ಹೆಚ್ಚು ನಡೆಯುತ್ತಿವೆ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.