<p><strong>ಕೋಲ್ಕತ್ತ:</strong> ‘ಬಂಗಾಳಿಗಳ ಮೇಲೆ ಬಿಜೆಪಿಯಿಂದ ಭಾಷಾ ಭಯೋತ್ಪಾದನೆ ನಡೆಯುತ್ತಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಇಲ್ಲಿ ದೂರಿದರು.</p>.<p>ಮುಂದಿನ ವರ್ಷ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ‘ಬಂಗಾಳದ ಅಸ್ಮಿತೆ’ಯ ದಾಳವನ್ನು ಮಮತಾ ಉರುಳಿಸಿದ್ದಾರೆ.</p>.<p>‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ತನಕವೂ ನೆಲದ ಅಸ್ಮಿತೆ ಹಾಗೂ ಭಾಷೆಯ ಪರವಾದ ಹೋರಾಟ ಮುಂದುವರಿಯಲಿದೆ’ ಎಂದೂ ಹೇಳಿದರು.</p>.<p>‘ಬಿಜೆಪಿಯು ತನ್ನ ಭಾಷಾ ಭಯೋತ್ಪಾದನೆಯನ್ನು ನಿಲ್ಲಿಸದಿದ್ದರೆ, ಪ್ರತಿರೋಧ ಚಳವಳಿಯು ದೆಹಲಿಯನ್ನು ತಲುಪಲಿದೆ’ ಎಂದು ಗುಡುಗಿದರು.</p>.<p>ಕೋಲ್ಕತ್ತದಲ್ಲಿ ನಡೆದ ಟಿಎಂಸಿಯ ಹುತಾತ್ಮರ ದಿನಾಚರಣೆ ರ್ಯಾಲಿಗೆ ಜಮಾಯಿಸಿದ್ದ ಅಪಾರ ಸಂಖ್ಯೆಯ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಮಮತಾ, ‘ರಾಜ್ಯದಲ್ಲಿ ಅಧಿಕಾರ ಹಿಡಿಯುವದರ ಜೊತೆಯಲ್ಲೇ, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಬೇಕು’ ಎಂದು ಹೇಳಿದರು.</p>.<p>‘ಬಂಗಾಳಿಗಳ ವಿರುದ್ಧ ಬಿಜೆಪಿಯು ನಡೆಸಿರುವ ಭಾಷಾ ಭಯೋತ್ಪಾದನೆಗೆ ಪ್ರತಿರೋಧವಾಗಿ, ಜುಲೈ 27ರಿಂದ ಪಶ್ಚಿಮ ಬಂಗಾಳದಲ್ಲಿ ಭಾಷಾ ಚಳವಳಿ ನಡೆಯಲಿದೆ’ ಎಂದು ಇದೇ ಸಂದರ್ಭ ಘೋಷಿಸಿದರು.</p>.<p>ನೆರೆಯ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.</p>.ಬಿಜೆಪಿಯು ಬಂಗಾಳಿ ವಿರೋಧಿ ಪಕ್ಷ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಬಂಗಾಳಿಗಳ ಮೇಲೆ ಬಿಜೆಪಿಯಿಂದ ಭಾಷಾ ಭಯೋತ್ಪಾದನೆ ನಡೆಯುತ್ತಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಇಲ್ಲಿ ದೂರಿದರು.</p>.<p>ಮುಂದಿನ ವರ್ಷ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ‘ಬಂಗಾಳದ ಅಸ್ಮಿತೆ’ಯ ದಾಳವನ್ನು ಮಮತಾ ಉರುಳಿಸಿದ್ದಾರೆ.</p>.<p>‘ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸುವ ತನಕವೂ ನೆಲದ ಅಸ್ಮಿತೆ ಹಾಗೂ ಭಾಷೆಯ ಪರವಾದ ಹೋರಾಟ ಮುಂದುವರಿಯಲಿದೆ’ ಎಂದೂ ಹೇಳಿದರು.</p>.<p>‘ಬಿಜೆಪಿಯು ತನ್ನ ಭಾಷಾ ಭಯೋತ್ಪಾದನೆಯನ್ನು ನಿಲ್ಲಿಸದಿದ್ದರೆ, ಪ್ರತಿರೋಧ ಚಳವಳಿಯು ದೆಹಲಿಯನ್ನು ತಲುಪಲಿದೆ’ ಎಂದು ಗುಡುಗಿದರು.</p>.<p>ಕೋಲ್ಕತ್ತದಲ್ಲಿ ನಡೆದ ಟಿಎಂಸಿಯ ಹುತಾತ್ಮರ ದಿನಾಚರಣೆ ರ್ಯಾಲಿಗೆ ಜಮಾಯಿಸಿದ್ದ ಅಪಾರ ಸಂಖ್ಯೆಯ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿದ ಮಮತಾ, ‘ರಾಜ್ಯದಲ್ಲಿ ಅಧಿಕಾರ ಹಿಡಿಯುವದರ ಜೊತೆಯಲ್ಲೇ, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಬೇಕು’ ಎಂದು ಹೇಳಿದರು.</p>.<p>‘ಬಂಗಾಳಿಗಳ ವಿರುದ್ಧ ಬಿಜೆಪಿಯು ನಡೆಸಿರುವ ಭಾಷಾ ಭಯೋತ್ಪಾದನೆಗೆ ಪ್ರತಿರೋಧವಾಗಿ, ಜುಲೈ 27ರಿಂದ ಪಶ್ಚಿಮ ಬಂಗಾಳದಲ್ಲಿ ಭಾಷಾ ಚಳವಳಿ ನಡೆಯಲಿದೆ’ ಎಂದು ಇದೇ ಸಂದರ್ಭ ಘೋಷಿಸಿದರು.</p>.<p>ನೆರೆಯ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.</p>.ಬಿಜೆಪಿಯು ಬಂಗಾಳಿ ವಿರೋಧಿ ಪಕ್ಷ: ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>