<p><strong>ಕೋಲ್ಕತ್ತ</strong>: ಸರಣಿ ರೈಲು ಅಪಘಾತಗಳ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯವಾಗಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರತಿ ನಿತ್ಯ ರೈಲು ಅಪಘಾತಗಳು ವರದಿಯಾಗುತ್ತಿರುವುದು ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕಿಡಿಕಾರಿದ್ದಾರೆ.</p>.ವಯನಾಡು ಭೂಕುಸಿತದಲ್ಲಿ 5 ಮಂದಿ ಸಾವು: ನೂರಾರು ಮಂದಿ ಸಿಲುಕಿರುವ ಶಂಕೆ .ಭೂಕುಸಿತ | ನೂರಾರು ಮಂದಿ ಸಿಲುಕಿರುವ ಶಂಕೆ: ಕೇರಳ ಸಿಎಂ ಪಿಣರಾಯಿ ವಿಜಯನ್. <p>‘ಮತ್ತೊಂದು ರೈಲು ದುರಂತ!, ಜಾರ್ಖಂಡ್ನ ಸೆರೈಕೆಲಾ– ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಮುಂಬೈ–ಹೌರಾ ರೈಲು ಅಪಘಾತಗೀಡಾಗಿದೆ‘ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ರೈಲು ಅಪಘಾತಗಳ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಮಮತಾ, ಸರಣಿ ರೈಲು ಅಪಘಾತಗಳು ಮುಂದುವರಿದಿವೆ. ಇದು ಆಡಳಿತವೇ?, ಇನ್ನೆಷ್ಟು ದಿನ ಅಂತಹ ಬೇಜವಾಬ್ದಾರಿತನದ ಆಡಳಿತ ಎಂದು ಮಮತಾ ಕೇಂದ್ರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ</p>.ಜಾರ್ಖಂಡ್ | ಹಳಿ ತಪ್ಪಿದ ಮುಂಬೈ–ಹೌರಾ ರೈಲು: 6 ಮಂದಿಗೆ ಗಾಯ.ಕ್ಷೇಮ ಕುಶಲ: ನಿಮ್ಮ ಮಗುವನ್ನು ಸಂತೈಸಿರಿ....<p>ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್ಶೆಡ್ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.</p><p>ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು 20 ಮಂದಿ ಗಾಯಗೊಂಡಿದ್ದಾರೆ. ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್ಶೆಡ್ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆಗೆ ಈ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಚಕ್ರಧರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಸರಣಿ ರೈಲು ಅಪಘಾತಗಳ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಕೇಂದ್ರ ಸರ್ಕಾರದ ಆಡಳಿತದ ವೈಫಲ್ಯವಾಗಿದೆ ಎಂದು ಮಂಗಳವಾರ ಆರೋಪಿಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರತಿ ನಿತ್ಯ ರೈಲು ಅಪಘಾತಗಳು ವರದಿಯಾಗುತ್ತಿರುವುದು ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಕಿಡಿಕಾರಿದ್ದಾರೆ.</p>.ವಯನಾಡು ಭೂಕುಸಿತದಲ್ಲಿ 5 ಮಂದಿ ಸಾವು: ನೂರಾರು ಮಂದಿ ಸಿಲುಕಿರುವ ಶಂಕೆ .ಭೂಕುಸಿತ | ನೂರಾರು ಮಂದಿ ಸಿಲುಕಿರುವ ಶಂಕೆ: ಕೇರಳ ಸಿಎಂ ಪಿಣರಾಯಿ ವಿಜಯನ್. <p>‘ಮತ್ತೊಂದು ರೈಲು ದುರಂತ!, ಜಾರ್ಖಂಡ್ನ ಸೆರೈಕೆಲಾ– ಖಾರ್ಸಾ ವಾನ್ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಮುಂಬೈ–ಹೌರಾ ರೈಲು ಅಪಘಾತಗೀಡಾಗಿದೆ‘ ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ರೈಲು ಅಪಘಾತಗಳ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿರುವ ಮಮತಾ, ಸರಣಿ ರೈಲು ಅಪಘಾತಗಳು ಮುಂದುವರಿದಿವೆ. ಇದು ಆಡಳಿತವೇ?, ಇನ್ನೆಷ್ಟು ದಿನ ಅಂತಹ ಬೇಜವಾಬ್ದಾರಿತನದ ಆಡಳಿತ ಎಂದು ಮಮತಾ ಕೇಂದ್ರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ</p>.ಜಾರ್ಖಂಡ್ | ಹಳಿ ತಪ್ಪಿದ ಮುಂಬೈ–ಹೌರಾ ರೈಲು: 6 ಮಂದಿಗೆ ಗಾಯ.ಕ್ಷೇಮ ಕುಶಲ: ನಿಮ್ಮ ಮಗುವನ್ನು ಸಂತೈಸಿರಿ....<p>ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್ಶೆಡ್ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.</p><p>ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು 20 ಮಂದಿ ಗಾಯಗೊಂಡಿದ್ದಾರೆ. ಆಗ್ನೇಯ ರೈಲ್ವೆಯ ಚಕ್ರಧರಪುರ ವಿಭಾಗದ ಜಮ್ಶೆಡ್ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಮುಂಜಾನೆ 3.45 ಗಂಟೆಗೆ ಈ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಚಕ್ರಧರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>