ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ಅನುದಾನ ಬಿಡುಗಡೆಗಾಗಿ ಮಮತಾ ಬ್ಯಾನರ್ಜಿ 48 ತಾಸಿನ ಧರಣಿ

Published 3 ಫೆಬ್ರುವರಿ 2024, 4:59 IST
Last Updated 3 ಫೆಬ್ರುವರಿ 2024, 4:59 IST
ಅಕ್ಷರ ಗಾತ್ರ

ಕೋಲ್ಕತ್ತ: ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆರಂಭಿಸಿರುವ ಧರಣಿ, ಶುಕ್ರವಾರ ರಾತ್ರಿಯಿಡೀ ಮುಂದುವರಿಯಿತು.

ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಮುಂದೆ ಶುಕ್ರವಾರ ಮಧ್ಯಾಹ್ನ ಆರಂಭಿಸಿದ ಧರಣಿ ಚಳಿಯನ್ನು ಲೆಕ್ಕಿಸದೇ ರಾತ್ರಿಯಿಡೀ ಮುಂದುವರಿಯಿತು. ಮಮತಾ ಅವರನ್ನು ತೃಣಮೂಲ ಕಾಂಗ್ರೆಸ್‌ ಪಕ್ಷದ (ಟಿಎಂಸಿ) ಮುಖಂಡರು ಹಾಗೂ ಕಾರ್ಯಕರ್ತರು ಬೆಂಬಲಿಸಿದರು.

48 ತಾಸಿನ ಧರಣಿ ಭಾನುವಾರದವರೆಗೆ ಮುಂದುವರಿಯಲಿದೆ ಎಂದು ಟಿಎಂಸಿ ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ನರೇಗಾ ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ರಾಜ್ಯದ ಖಾತೆಗೆ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಬಾಕಿಯಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT