<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಜನರ ಆಧಾರ್ ಕಾರ್ಡ್ಗಳನ್ನು ‘ಏಕಾಏಕಿ ನಿಷ್ಕ್ರಿಯ’ಗೊಳಿಸಲಾಗಿದೆ. ಇದಕ್ಕೆ ಕಾರಣ ತಿಳಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಹೀಗೇ ಏಕಾಏಕಿ ನಿಷ್ಕ್ರಿಯಗೊಳಿಸಿರುವ ಕ್ರಮದಿಂದಾಗಿ ರಾಜ್ಯದ ಜನರಲ್ಲಿ ತೀವ್ರ ಆತಂಕ, ಗೊಂದಲ ಉಂಟಾಗಿದೆ. ಈ ಕ್ರಮವು ನಿಯಮಬಾಹಿರ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದುದಾಗಿದೆ ಎಂದು ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ. </p>.<p>‘ಜನರ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸುವ ಈ ಬೆಳವಣಿಗೆಯು ಗಂಭೀರ ಸ್ವರೂಪದ ಮುಖ್ಯವಾಗಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಜನರಿಗೆ ಮಾಡುತ್ತಿರುವ ತಾರತಮ್ಯವಾಗಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<p>ಸಕಾರಣ ನೀಡದೇ ಹೀಗೆ ನಿಷ್ಕ್ರಿಯಗೊಳಿಸಿರುವ ಉದ್ದೇಶ ಇಳಿಯಲು ಬಯಸುತ್ತೇನೆ. ಲೋಕಸಭೆ ಚುನಾವಣೆಗೂ ಮೊದಲು ಜನರಲ್ಲಿ ಆತಂಕದ ಮನೋಭಾವ ಸೃಷ್ಟಿಸುವ ಉದ್ದೇಶವನ್ನು ಇದು ಹೊಂದಿದೆಯೇ ಎಂದು ಪ್ರಶ್ನಿಸಿದ್ದಾರೆ.</p>.<p>ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿ ಮಾಡುವುದರ ಪೂರ್ವಭಾವಿಯಾಗಿ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯ ಮಾಡಲಾಗಿದೆ ಎಂದೂ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದಲ್ಲಿ ಜನರ ಆಧಾರ್ ಕಾರ್ಡ್ಗಳನ್ನು ‘ಏಕಾಏಕಿ ನಿಷ್ಕ್ರಿಯ’ಗೊಳಿಸಲಾಗಿದೆ. ಇದಕ್ಕೆ ಕಾರಣ ತಿಳಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ಹೀಗೇ ಏಕಾಏಕಿ ನಿಷ್ಕ್ರಿಯಗೊಳಿಸಿರುವ ಕ್ರಮದಿಂದಾಗಿ ರಾಜ್ಯದ ಜನರಲ್ಲಿ ತೀವ್ರ ಆತಂಕ, ಗೊಂದಲ ಉಂಟಾಗಿದೆ. ಈ ಕ್ರಮವು ನಿಯಮಬಾಹಿರ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದುದಾಗಿದೆ ಎಂದು ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ. </p>.<p>‘ಜನರ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸುವ ಈ ಬೆಳವಣಿಗೆಯು ಗಂಭೀರ ಸ್ವರೂಪದ ಮುಖ್ಯವಾಗಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಜನರಿಗೆ ಮಾಡುತ್ತಿರುವ ತಾರತಮ್ಯವಾಗಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<p>ಸಕಾರಣ ನೀಡದೇ ಹೀಗೆ ನಿಷ್ಕ್ರಿಯಗೊಳಿಸಿರುವ ಉದ್ದೇಶ ಇಳಿಯಲು ಬಯಸುತ್ತೇನೆ. ಲೋಕಸಭೆ ಚುನಾವಣೆಗೂ ಮೊದಲು ಜನರಲ್ಲಿ ಆತಂಕದ ಮನೋಭಾವ ಸೃಷ್ಟಿಸುವ ಉದ್ದೇಶವನ್ನು ಇದು ಹೊಂದಿದೆಯೇ ಎಂದು ಪ್ರಶ್ನಿಸಿದ್ದಾರೆ.</p>.<p>ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿ ಮಾಡುವುದರ ಪೂರ್ವಭಾವಿಯಾಗಿ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯ ಮಾಡಲಾಗಿದೆ ಎಂದೂ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>