<p class="title"><strong>ನವದೆಹಲಿ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ವಿಧಾನಸಭೆಗೆ ಪ್ರವೇಶಿಸುವುದು ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಅವಲಂಬಿಸಿದೆ.</p>.<p>ಅವರು ರಾಜ್ಯದಲ್ಲಿ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಕಳೆದಿದೆ. ಹುದ್ದೆಯಲ್ಲಿ ಮುಂದುವರಿಯಬೇಕಾದರೆ, ಉಳಿದಿರುವ ಐದು ತಿಂಗಳೊಳಗೆ ಅವರು ರಾಜ್ಯ ವಿಧಾನಸಭೆಗೆ ಆರಿಸಿಬರಬೇಕಿದೆ.</p>.<p>ಆದರೆ ಮುಖ್ಯಮಂತ್ರಿ ಸ್ಪರ್ಧಿಸುವ ನಿರೀಕ್ಷೆಯಿರುವ ರಾಜ್ಯದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸುವ ಮೊದಲು ಚುನಾವಣಾ ಆಯೋಗವು ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ.</p>.<p align="justify" class="bodytext" style="margin-bottom:0cm;line-height:100%;background:transparent;">ಉಪಚುನಾವಣೆ ನಿಗದಿಪಡಿಸುವ ಮೊದಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸಂಬಂಧಪಟ್ಟ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಚುನಾವಣಾ ಆಯೋಗವು ಪ್ರತಿಕ್ರಿಯೆ ಪಡೆದುಕೊಳ್ಳುವ ಸಾಧ್ಯತೆಯಿದೆ.</p>.<p>ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭವಾನಿಪುರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಟಿಎಂಸಿ ಪಕ್ಷದ ಸೋವನ್ದೇವ್ ಚಟ್ಟೋಪಾಧ್ಯಾಯ ಅವರು ರಾಜೀನಾಮೆ ನೀಡಿದ್ದು, ಮಮತಾ ಅವರ ಆಯ್ಕೆಗೆ ವೇದಿಕೆ ಒದಗಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ವಿಧಾನಸಭೆಗೆ ಪ್ರವೇಶಿಸುವುದು ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಅವಲಂಬಿಸಿದೆ.</p>.<p>ಅವರು ರಾಜ್ಯದಲ್ಲಿ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಕಳೆದಿದೆ. ಹುದ್ದೆಯಲ್ಲಿ ಮುಂದುವರಿಯಬೇಕಾದರೆ, ಉಳಿದಿರುವ ಐದು ತಿಂಗಳೊಳಗೆ ಅವರು ರಾಜ್ಯ ವಿಧಾನಸಭೆಗೆ ಆರಿಸಿಬರಬೇಕಿದೆ.</p>.<p>ಆದರೆ ಮುಖ್ಯಮಂತ್ರಿ ಸ್ಪರ್ಧಿಸುವ ನಿರೀಕ್ಷೆಯಿರುವ ರಾಜ್ಯದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಸುವ ಮೊದಲು ಚುನಾವಣಾ ಆಯೋಗವು ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸುವ ಸಾಧ್ಯತೆಯಿದೆ.</p>.<p align="justify" class="bodytext" style="margin-bottom:0cm;line-height:100%;background:transparent;">ಉಪಚುನಾವಣೆ ನಿಗದಿಪಡಿಸುವ ಮೊದಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಸಂಬಂಧಪಟ್ಟ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಚುನಾವಣಾ ಆಯೋಗವು ಪ್ರತಿಕ್ರಿಯೆ ಪಡೆದುಕೊಳ್ಳುವ ಸಾಧ್ಯತೆಯಿದೆ.</p>.<p>ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭವಾನಿಪುರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಟಿಎಂಸಿ ಪಕ್ಷದ ಸೋವನ್ದೇವ್ ಚಟ್ಟೋಪಾಧ್ಯಾಯ ಅವರು ರಾಜೀನಾಮೆ ನೀಡಿದ್ದು, ಮಮತಾ ಅವರ ಆಯ್ಕೆಗೆ ವೇದಿಕೆ ಒದಗಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>