<p><strong>ನವದೆಹಲಿ:</strong> ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವು ಬ್ಯಾಂಕ್ಗಳಲ್ಲಿ ದರೋಡೆ ನಡೆಸಿರುವ ‘ಮಮು ಗ್ಯಾಂಗ್’ನ ಪ್ರಮುಖ ಸಂಚುಕೋರ, ಹಣ್ಣಿನ ವ್ಯಾಪಾರಿಯ ವೇಷದಲ್ಲಿದ್ದ ವ್ಯಕ್ತಿಯನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ಈ ಮೂಲಕ ಕರ್ನಾಟಕದಲ್ಲಿ ಮೂರು ಪ್ರಮುಖ ಬ್ಯಾಂಕ್ಗಳಲ್ಲಿ ದರೋಡೆ ನಡೆಸಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.</p>.<p>ಬಂಧಿತ ಆರೋಪಿ ಕಮ್ರುಲ್ ಅಲಿಯಾಸ್ ಮಮು ಉತ್ತರ ಪ್ರದೇಶ ನಿವಾಸಿಯಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಹಲವು ಬ್ಯಾಂಕ್ ದರೋಡೆಗಳನ್ನು ನಡೆಸಿ, ತಲೆಮರೆಸಿಕೊಂಡಿದ್ದ. ಗ್ಯಾಂಗ್ನ ನಾಯಕನಾಗಿದ್ದ ಆತ ದರೋಡೆ ಸಂಚು ರೂಪಿಸುವುದರಲ್ಲಿ ಮತ್ತು ವೇಷ ಬದಲಿಸುತ್ತಾ ಓಡಾಡುವುದರಲ್ಲಿ ನಿಷ್ಣಾತನಾಗಿದ್ದ. </p>.<p>‘ಹಣ್ಣಿನ ವ್ಯಾಪಾರಿಯ ಸೋಗಿನಲ್ಲಿ ಜನರ ಮಧ್ಯೆ ಇರುತ್ತಿದ್ದ ಆರೋಪಿ ಬ್ಯಾಂಕ್ ಸುತ್ತಮುತ್ತಲಿನ ವಾತಾವರಣವನ್ನು ಗಮನಿಸುತ್ತಿದ್ದ, ದೈನಂದಿನ ಚಟುವಟಿಕೆಗಳು, ಭದ್ರತಾ ಲೋಪಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದ. ರಾತ್ರಿ ವೇಳೆ ತನ್ನ ಸಹಚರರೊಂದಿಗೆ ಬ್ಯಾಂಕ್ ದರೋಡೆ ಮಾಡುತ್ತಿದ್ದ’ ಎಂದು ಪೊಲೀಸ್ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ. </p>.<p>ಆತನ ಚಲನವಲನದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ನೈರುತ್ಯ ದೆಹಲಿಯ ಮಹಾವೀರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಆತ ಸ್ಥಳೀಯ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯ ವೇಷದಲ್ಲಿದ್ದ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕ ಮತ್ತು ಮಹಾರಾಷ್ಟ್ರದ ಹಲವು ಬ್ಯಾಂಕ್ಗಳಲ್ಲಿ ದರೋಡೆ ನಡೆಸಿರುವ ‘ಮಮು ಗ್ಯಾಂಗ್’ನ ಪ್ರಮುಖ ಸಂಚುಕೋರ, ಹಣ್ಣಿನ ವ್ಯಾಪಾರಿಯ ವೇಷದಲ್ಲಿದ್ದ ವ್ಯಕ್ತಿಯನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.</p>.<p>ಈ ಮೂಲಕ ಕರ್ನಾಟಕದಲ್ಲಿ ಮೂರು ಪ್ರಮುಖ ಬ್ಯಾಂಕ್ಗಳಲ್ಲಿ ದರೋಡೆ ನಡೆಸಿರುವ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.</p>.<p>ಬಂಧಿತ ಆರೋಪಿ ಕಮ್ರುಲ್ ಅಲಿಯಾಸ್ ಮಮು ಉತ್ತರ ಪ್ರದೇಶ ನಿವಾಸಿಯಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಹಲವು ಬ್ಯಾಂಕ್ ದರೋಡೆಗಳನ್ನು ನಡೆಸಿ, ತಲೆಮರೆಸಿಕೊಂಡಿದ್ದ. ಗ್ಯಾಂಗ್ನ ನಾಯಕನಾಗಿದ್ದ ಆತ ದರೋಡೆ ಸಂಚು ರೂಪಿಸುವುದರಲ್ಲಿ ಮತ್ತು ವೇಷ ಬದಲಿಸುತ್ತಾ ಓಡಾಡುವುದರಲ್ಲಿ ನಿಷ್ಣಾತನಾಗಿದ್ದ. </p>.<p>‘ಹಣ್ಣಿನ ವ್ಯಾಪಾರಿಯ ಸೋಗಿನಲ್ಲಿ ಜನರ ಮಧ್ಯೆ ಇರುತ್ತಿದ್ದ ಆರೋಪಿ ಬ್ಯಾಂಕ್ ಸುತ್ತಮುತ್ತಲಿನ ವಾತಾವರಣವನ್ನು ಗಮನಿಸುತ್ತಿದ್ದ, ದೈನಂದಿನ ಚಟುವಟಿಕೆಗಳು, ಭದ್ರತಾ ಲೋಪಗಳ ಬಗ್ಗೆ ತಿಳಿದುಕೊಳ್ಳುತ್ತಿದ್ದ. ರಾತ್ರಿ ವೇಳೆ ತನ್ನ ಸಹಚರರೊಂದಿಗೆ ಬ್ಯಾಂಕ್ ದರೋಡೆ ಮಾಡುತ್ತಿದ್ದ’ ಎಂದು ಪೊಲೀಸ್ ಅಧಿಕಾರಿ ಶುಕ್ರವಾರ ತಿಳಿಸಿದ್ದಾರೆ. </p>.<p>ಆತನ ಚಲನವಲನದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ನೈರುತ್ಯ ದೆಹಲಿಯ ಮಹಾವೀರ ಪ್ರದೇಶದಲ್ಲಿ ಬಂಧಿಸಿದ್ದಾರೆ. ಆತ ಸ್ಥಳೀಯ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯ ವೇಷದಲ್ಲಿದ್ದ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>