<p><strong>ಮುಂಬೈ</strong>: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯ ಹಾಗೂ ಶಾರ್ಪ್ ಶೂಟರ್ ಸಲೀಂ ಕುತ್ತಾ ಜೊತೆಗೆ ನಂಟು ಹೊಂದಿರುವ ನಾಸಿಕ್ನ ರಾಜಕಾರಣಿ ಸುಧಾಕರ್ ಬಡಗುಜರ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.</p>.<p>ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಉದ್ಯಮಿಯೂ ಆಗಿರುವ ಸುಧಾಕರ್ ಶಿವಸೇನೆಯ (ಯುಬಿಟಿ) ನಾಸಿಕ್ ಘಟಕದ ಮುಖ್ಯಸ್ಥರಾಗಿದ್ದರು. ಈಚೆಗಷ್ಟೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕಾಗಿ ಉಚ್ಚಾಟನೆಗೊಂಡಿದ್ದರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಚಂದ್ರಶೇಖರ್ ಬಾವಂಕುಲೆ, ಕಾರ್ಯಾಧ್ಯಕ್ಷ ರವೀಂದ್ರ ಚವಾಣ್, ಸಚಿವ ಗಿರೀಶ್ ಮಹಾಜನ್ ಸಮ್ಮುಖದಲ್ಲಿ ಸುಧಾಕರ್ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಸಚಿವ ಬಬನ್ರಾವ್ ಘೋಲಾಪ್ ಕೂಡ ಇದೇ ಸಂದರ್ಭ ಪಕ್ಷ ಸೇರಿದರು.</p>.<p>‘ನಾಸಿಕ್ನಲ್ಲಿ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಬಾವಂಕುಲೆ ಹೇಳಿದರು.</p>.<p>ಸುಧಾಕರ್ ಬಿಜೆಪಿಗೆ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿಗಳು ಕೇಳಿಬರುತ್ತಿದ್ದಂತೆ, ನಾಸಿಕ್ ಪಶ್ಚಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಸೀಮಾ ಹೀರೆ ಅವರು ಬಡಗುಜರ್ ಅವರನ್ನು ‘ರಾಷ್ಟ್ರ ವಿರೋಧಿ’ ಎನ್ನುವ ಮೂಲಕ ಪರೋಕ್ಷವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>ಸಲೀಂ ಮೀರಾ ಶೇಖ್ ಅಲಿಯಾಸ್ ಸಲೀಂ ಕುತ್ತಾ 1993ರ ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ನ ಸದಸ್ಯ ಹಾಗೂ ಶಾರ್ಪ್ ಶೂಟರ್ ಸಲೀಂ ಕುತ್ತಾ ಜೊತೆಗೆ ನಂಟು ಹೊಂದಿರುವ ನಾಸಿಕ್ನ ರಾಜಕಾರಣಿ ಸುಧಾಕರ್ ಬಡಗುಜರ್ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.</p>.<p>ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ, ಉದ್ಯಮಿಯೂ ಆಗಿರುವ ಸುಧಾಕರ್ ಶಿವಸೇನೆಯ (ಯುಬಿಟಿ) ನಾಸಿಕ್ ಘಟಕದ ಮುಖ್ಯಸ್ಥರಾಗಿದ್ದರು. ಈಚೆಗಷ್ಟೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕಾಗಿ ಉಚ್ಚಾಟನೆಗೊಂಡಿದ್ದರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಚಂದ್ರಶೇಖರ್ ಬಾವಂಕುಲೆ, ಕಾರ್ಯಾಧ್ಯಕ್ಷ ರವೀಂದ್ರ ಚವಾಣ್, ಸಚಿವ ಗಿರೀಶ್ ಮಹಾಜನ್ ಸಮ್ಮುಖದಲ್ಲಿ ಸುಧಾಕರ್ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಸಚಿವ ಬಬನ್ರಾವ್ ಘೋಲಾಪ್ ಕೂಡ ಇದೇ ಸಂದರ್ಭ ಪಕ್ಷ ಸೇರಿದರು.</p>.<p>‘ನಾಸಿಕ್ನಲ್ಲಿ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಿ ಕೆಲಸ ಮಾಡಬೇಕು’ ಎಂದು ಬಾವಂಕುಲೆ ಹೇಳಿದರು.</p>.<p>ಸುಧಾಕರ್ ಬಿಜೆಪಿಗೆ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿಗಳು ಕೇಳಿಬರುತ್ತಿದ್ದಂತೆ, ನಾಸಿಕ್ ಪಶ್ಚಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಸೀಮಾ ಹೀರೆ ಅವರು ಬಡಗುಜರ್ ಅವರನ್ನು ‘ರಾಷ್ಟ್ರ ವಿರೋಧಿ’ ಎನ್ನುವ ಮೂಲಕ ಪರೋಕ್ಷವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.</p>.<p>ಸಲೀಂ ಮೀರಾ ಶೇಖ್ ಅಲಿಯಾಸ್ ಸಲೀಂ ಕುತ್ತಾ 1993ರ ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>