ಸಹೋದರ ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿರುವ ವಿಷಯ ತಿಳಿದ ತಂಗಿ ಬಿಟ್ಟುಬಿಡುವಂತೆ ಒತ್ತಾಯಿಸಿದ್ದಾಳೆ. ಇಲ್ಲವಾದರೆ, ವಿಷಯವನ್ನು ಬೇರೆಯವರಿಗೆ ತಿಳಿಸುವುದಾಗಿ ಹೆದರಿಸಿದ್ದಾಳೆ.
ವಿಷಯವನ್ನು ಬೇರೆಯವರಿಗೆ ಹೇಳದಂತೆ ತಂಗಿಯನ್ನು ತಡೆಯಲು ಯೋಜನೆ ರೂಪಿಸಿದ ಸಹೋದರ, ತಂಗಿ ಸೊಪ್ಪು ತರಲು ಕಾಡಿಗೆ ತೆರಳಿದ್ದ ವೇಳೆ, ತನ್ನ ನಾಲ್ವರು ಸ್ನೇಹಿತರನ್ನು ಕಾಡಿಗೆ ಕರೆಸಿದ್ದಾನೆ. ನಂತರ ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತರೊಂದಿಗೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಕತ್ತು ಹಿಸುಕಿ, ಕೊಡಲಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಚಾಕಪಾಡ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲಲಿತ್ ಮೋಹನ್ ಸಾಗರ್ ತಿಳಿಸಿದ್ದಾರೆ.
ಘಟನೆ ನಂತರ, ಸಹೋದರಿ ನಾಪತ್ತೆಯಾಗಿರುವ ಕುರಿತು ಆರೋಪಿಯೇ ಪೊಲೀಸರಿಗೆ ದೂರು ನೀಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಮಹಿಳೆಯ ಕೊಳೆತ ಶವವು ಕಾಡಿನಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಂದಿರುವುದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.