<p><strong>ಕೋಯಿಕ್ಕೋಡ್</strong>: ಮಾಜಿ ಪತ್ನಿಯನ್ನು ಬೆನ್ನಟ್ಟಿ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಯನ್ನು ಜಿಲ್ಲೆಯ ನಡುವಣ್ಣೂರಿನ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ.</p><p>ಸಂತ್ರಸ್ತೆಗೆ ಮೂರು ವರ್ಷಗಳ ಹಿಂದೆಯೇ ಆರೋಪಿ ವಿಚ್ಛೇದನ ನೀಡಿದ್ದ, ಹೀಗಾಗಿ ಪ್ರಭೀಷಾ (29) ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದಾಳೆ.</p>.ಒತ್ತಡಕ್ಕೆ ಮಣಿದು ಬಂಡಿಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದ ಸರ್ಕಾರ: BJP.ಅಮೆರಿಕ: ವಿಶ್ವ ಒಕ್ಕಲಿಗರ ಸಮ್ಮೇಳನ ಜುಲೈ 3ರಿಂದ. <p>ನಿನ್ನೆ (ಭಾನುವಾರ) ಪ್ರಭೀಷಾ ಪೆರಂಬ್ರಾದ ಸರ್ಕಾರಿ ಆಯುರ್ವೇದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ಆಸ್ಪತ್ರೆಯ ಬಳಿ ಬಂದಿದ್ದ ಮಾಜಿ ಪತಿ, ಆಕೆಯನ್ನು ಬೆನ್ನಟ್ಟಿ ಆಸಿಡ್ ದಾಳಿ ನಡೆಸಿದ್ದಾನೆ. ಆಕೆ ಎಷ್ಟೇ ಪ್ರಯತ್ನಿಸಿದರೂ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.</p><p>ಮಹಿಳೆಯ ಮುಖ ಮತ್ತು ಎದೆಯ ಮೇಲೆ ಸುಟ್ಟ ಗಾಯಗಳಾಗಿವೆ. ಸಂತ್ರಸ್ತೆ, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p> .ಒತ್ತಡಕ್ಕೆ ಮಣಿದು ಬಂಡಿಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದ ಸರ್ಕಾರ: BJP.ದತ್ತಾಂಶ ಆಧರಿಸಿ ಒಳಮೀಸಲಾತಿ ನೀಡಿ: ಮಹದೇವ ಧನ್ನಿ ಒತ್ತಾಯ.ಸರ್ಕಾರಿ ನೌಕರರಿಗೆ ‘ಸಂಬಳ ಪ್ಯಾಕೇಜ್’ ಖಾತೆ ಕಡ್ಡಾಯ.ಇನ್ನೆರಡು ದಿನದಲ್ಲಿ ಮಧುಬಲೆ ಪ್ರಕರಣ ತನಿಖೆ: ಸಚಿವ ಚಲುವರಾಯಸ್ವಾಮಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕ್ಕೋಡ್</strong>: ಮಾಜಿ ಪತ್ನಿಯನ್ನು ಬೆನ್ನಟ್ಟಿ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಯನ್ನು ಜಿಲ್ಲೆಯ ನಡುವಣ್ಣೂರಿನ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ.</p><p>ಸಂತ್ರಸ್ತೆಗೆ ಮೂರು ವರ್ಷಗಳ ಹಿಂದೆಯೇ ಆರೋಪಿ ವಿಚ್ಛೇದನ ನೀಡಿದ್ದ, ಹೀಗಾಗಿ ಪ್ರಭೀಷಾ (29) ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದಾಳೆ.</p>.ಒತ್ತಡಕ್ಕೆ ಮಣಿದು ಬಂಡಿಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದ ಸರ್ಕಾರ: BJP.ಅಮೆರಿಕ: ವಿಶ್ವ ಒಕ್ಕಲಿಗರ ಸಮ್ಮೇಳನ ಜುಲೈ 3ರಿಂದ. <p>ನಿನ್ನೆ (ಭಾನುವಾರ) ಪ್ರಭೀಷಾ ಪೆರಂಬ್ರಾದ ಸರ್ಕಾರಿ ಆಯುರ್ವೇದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ಆಸ್ಪತ್ರೆಯ ಬಳಿ ಬಂದಿದ್ದ ಮಾಜಿ ಪತಿ, ಆಕೆಯನ್ನು ಬೆನ್ನಟ್ಟಿ ಆಸಿಡ್ ದಾಳಿ ನಡೆಸಿದ್ದಾನೆ. ಆಕೆ ಎಷ್ಟೇ ಪ್ರಯತ್ನಿಸಿದರೂ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.</p><p>ಮಹಿಳೆಯ ಮುಖ ಮತ್ತು ಎದೆಯ ಮೇಲೆ ಸುಟ್ಟ ಗಾಯಗಳಾಗಿವೆ. ಸಂತ್ರಸ್ತೆ, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p> .ಒತ್ತಡಕ್ಕೆ ಮಣಿದು ಬಂಡಿಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದ ಸರ್ಕಾರ: BJP.ದತ್ತಾಂಶ ಆಧರಿಸಿ ಒಳಮೀಸಲಾತಿ ನೀಡಿ: ಮಹದೇವ ಧನ್ನಿ ಒತ್ತಾಯ.ಸರ್ಕಾರಿ ನೌಕರರಿಗೆ ‘ಸಂಬಳ ಪ್ಯಾಕೇಜ್’ ಖಾತೆ ಕಡ್ಡಾಯ.ಇನ್ನೆರಡು ದಿನದಲ್ಲಿ ಮಧುಬಲೆ ಪ್ರಕರಣ ತನಿಖೆ: ಸಚಿವ ಚಲುವರಾಯಸ್ವಾಮಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>