‘ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ಆರೋಪಿಯು, ಇಬ್ಬರಿಂದ ಮೂವರು ಭಯೋತ್ಪಾದಕರು ಮುಂಬೈ ನಗರವನ್ನು ಪ್ರವೇಶಿಸಿದ್ದಾರೆ ಎಂದು ತಿಳಿಸಿದ್ದ. ಇದರಿಂದಾಗಿ ನಾವು ತಕ್ಷಣವೇ ಕಾರ್ಯಾಚರಣೆಗೆ ಮುಂದಾದೆವು. ಆದರೆ, ಇದು ಸುಳ್ಳು ಎಂಬುದು ಗೊತ್ತಾಯಿತು. ಆ ಬಳಿಕ ಕರೆ ಮಾಡಿದ್ದ ವ್ಯಕ್ತಿ ಇರುವ ಸ್ಥಳವನ್ನು ಪತ್ತೆ ಹಚ್ಚಿ, ಮನಖುದ್ ಉಪನಗರದಲ್ಲಿ ಆರೋಪಿಯನ್ನು ಭಾನುವಾರ ಸಂಜೆಯೇ ಬಂಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.